ಸಂವಿಧಾನ ತಿದ್ದುಪಡಿಯಿಂದ ದಲಿತರ ಸಮಾಧಿ


Team Udayavani, Apr 4, 2017, 12:46 PM IST

gul1.jpg

ಕಲಬುರಗಿ: ದೇಶದ ಸಂವಿಧಾನ ತಿದ್ದುಪಡಿ ಮಾಡುವುದರಿಂದ ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ಆಶಯ ಸಮಾಧಿ ಮಾಡಿದಂತೆ ಎಂದು ದಲಿತ ಸ್ವಾಭಿಮಾನಿ ಸಂಘರ್ಷ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬಾಬಾಸಾಹೇಬ ಅಂಬೇಡ್ಕರ್‌ ಮೊಮ್ಮಗ ಪ್ರಕಾಶ ಅಂಬೇಡ್ಕರ್‌ ಹೇಳಿದರು. 

ಸೋಮವಾರ ನಗರದ ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ದಲಿತ ಸ್ವಾಭಿಮಾನಿ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ವಿಭಾಗ ಮಟ್ಟದ ಜಾಗೃತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಇವತ್ತಿನ ತುರ್ತು ದಿನಗಳಲ್ಲಿ ಸಂವಿಧಾನ ರಕ್ಷಣೆ ಮಾಡಬೇಕಾದ ಹೊಣೆ ಹೊರಬೇಕಿದೆ.

ದೇಶದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಹಾಗೂ ಆರ್‌ಎಸ್‌ಎಸ್‌, ವಿಎಚ್‌ಪಿಯ ಜನ ನಿರಂತರ ಒತ್ತಡ ಹೇರಿ ಸಂವಿಧಾನ ಅದರಲ್ಲೂ ಮೀಸಲಾತಿ ವಿಧೇಯಕ ತಿದ್ದುಪಡಿ ಮಾಡಲು ಒಳ ಪ್ರಯತ್ನ ಮಾಡುತ್ತಿದ್ದಾರೆ. ಸುಮ್ಮನಿದ್ದರೆ ಮೀಸಲಾತಿ ತೆಗೆದು ಹಾಕುತ್ತಾರೆ. ಇದರಿಂದ ದಲಿತರ ಸಮಾಧಿ ಖಂಡಿತ ಆಗುತ್ತದೆ.

ಆದ್ದರಿಂದ ಒಗ್ಗಟ್ಟಿನ ಹೋರಾಟ ಅನಿವಾರ್ಯ ಎಂದರು. ಒಳ್ಳೆಯ ಸಂವಿಧಾನ ಇದ್ದರೂ ಅದರ ಆಶಯ ಈಡೇರಿಸುವ ಬದಲು ಅದನ್ನು ತಿದ್ದುಪಡಿ ಮಾಡಿ ತಮಗೆ ಬೇಕಾದಂತೆ ರಚನೆ ಮಾಡಲು ಹೊರಟಿದ್ದಾರೆ. ಇದು ಅಪಾಯದ ಸಂಕೇತ. ಸುಮ್ಮನಿದ್ದರೆ ದಲಿತರಾಧಿಯಾಗಿ ಹಿಂದುಳಿದವರು, ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ  ಹೆಚ್ಚಾಗುತ್ತದೆಯೇ ವಿನಃ ಕಡಿಮೆಯಾಗುವುದಿಲ್ಲ ಎಂದು ಹೇಳಿದರು. 

ನೋಟು ರದ್ದತಿಯಿಂದ ಕೆಳವರ್ಗದ ಜನರು ದೊಡ್ಡ ಸಂಘರ್ಷ ಎದುರಿಸಿದರು, ಸರದಿ ಸಾಲಿನಲ್ಲಿ ನಿಂತು ಕೆಲವರು ಸತ್ತು ಹೋದರು. ಇವತ್ತು ಭ್ರಷ್ಟಾಚಾರ ನಿರ್ಮೂಲನೆಗೆ ಹೆಚ್ಚಿನ ಆದ್ಯತೆ ನೀಡಿ ತೊಲಗಿಸಬೇಕಿದೆ. ಇಲ್ಲದಿದ್ದರೆ ಸಂವಿಧಾನದ ಮೂಲ ಆಶಯ ಈಡೇರುವುದಿಲ್ಲ ಎಂದರು. 

ಸಾಹಿತಿ ಹಾಗೂ ಪತ್ರಕರ್ತ ರಂಜಾನ್‌ದರ್ಗಾ ಮಾತನಾಡಿ, ಇವತ್ತು ದೇಶ ಧಾರ್ಮಿಕ ಒಳ ಸಂಘರ್ಷಕ್ಕೆ ತುತ್ತಾಗಿದೆ. ಸಂವಿಧಾನವನ್ನು ಸಂಘ ಪರಿವಾರಗಳು ಹಾಗೂ ಬಿಜೆಪಿಯವರು ಟೊಳ್ಳು ಮಾಡಲು ಹೊರಟು ನಿಂತಿದ್ದಾರೆ. ಪ್ರಜಾಪ್ರಭುತ್ವ ಭಾರತದಲ್ಲಿ ಉಳಿಯಬೇಕಾದರೆ ಸಂವಿಧಾನ ತಿದ್ದುಪಡಿ ಬೇಡ.

ಅಚ್ಚರಿ ಎಂದರೆ ಒಳಗೊಳಗಿನ ಸೇಡಿನಿಂದ ದಲಿತರು ಬಿಜೆಪಿಯನ್ನು ಬೆಂಬಲಿಸುತ್ತಿರುವುದು ದುರಂತ. ಯಾರು ಬಸವಣ್ಣ ಮತ್ತು ಅಂಬೇಡ್ಕರ್‌ ಅವರನ್ನು ನಂಬುತ್ತಿರೋ, ಅವರ ಆದರ್ಶಗಳನ್ನು ಇಷ್ಟಪಡುತ್ತಿರೋ ಅವರು ಸಂವಿಧಾನ ತಿದ್ದುಪಡಿಗೆ ವಿರೋಧಿಸಬೇಕು ಎಂದು ಕರೆ ನೀಡಿದರು.

ಹಿರಿಯ ಪ್ರಾಧ್ಯಾಪಕಿ ಡಾ| ಶಿವಗಂಗಮ್ಮ ರುಮ್ಮಾ ಮಾತನಾಡಿ, ಸಂವಿಧಾನದ ತಿದ್ದುಪಡಿ ತರಲು ಹೊರಟಿರುವ ಸರಕಾರ, ಕೂಡಲೇ ಖಾಸಗಿ ಆಸ್ತಿ ಮಿತಿ ಹೇರುವ ಕಾನೂನು ಜಾರಿಗೆ ತರಲಿ. ಇಂತಿಷ್ಟು ಆದಾಯದ ಗಳಿಕೆ ನಂತರ ಹೆಚ್ಚಿನದ್ದೆಲ್ಲಾ ಸರಕಾರಕ್ಕೆ ಸಲ್ಲುತ್ತದೆ ಎನ್ನುವ ನಿಯಮದಿಂದ ಮಾತ್ರವೇ ಭ್ರಷ್ಟಾಚಾರ ಹಾಗೂ ಬಡತನ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ. 

ಇಲ್ಲದಿದ್ದರೆ ಬಡವರು ಬಡವರಾಗೆ, ಸಿರಿವಂತರೂ ಸಿರಿವಂತರಾಗೇ ಮತ್ತು ಲೂಟಿ ಮಾಡುವವರು ನಿರಂತರವಾಗಿ ಲೂಟಿ ಮಾಡುತ್ತಲೇ ಇರುತ್ತಾರೆ ಎಂದರು. ಅಧ್ಯಕ್ಷತೆವಹಿಸಿದ್ದ ಜಿಲ್ಲಾ ಸಂಚಾಲಕ ಡಾ| ವಿಠuಲ ದೊಡ್ಡಮನಿ ಮಾತನಾಡಿ, ದಲಿತರ ಸೌಖ್ಯದ ಬಗ್ಗೆ ಮಾತನಾಡುವವರು ಒಮ್ಮೆ ಹೊಲಗೇರಿಗಳಿಗೆ ಬಂದು ನೋಡಿ. ನಮ್ಮ ಬದುಕು ಹಾಗೂ ನಿಮ್ಮ ಭರವಸೆ ಹೇಗಿದೆ ಎನ್ನುವುದು ಅರ್ಥವಾಗುತ್ತದೆ. ಭಾಷಣಗಳಿಂದ ನಮ್ಮನ್ನು ನಂಬಿಸಿ ನಮ್ಮ ಬದುಕನ್ನು ಮತ್ತೂಮ್ಮೆ ಹಾಳು ಮಾಡಬೇಡಿ ಎಂದು ಮನವಿ ಮಾಡಿದರು.  

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.