ದಾಲ್‌ಮಿಲ್‌ ಪುನಶ್ಚೇತನಕ್ಕೆ ಒತ್ತಾಯ


Team Udayavani, Jun 3, 2018, 2:01 PM IST

gul-4.jpg

ಕಲಬುರಗಿ: ಬೆಲೆ ಕುಸಿತ ಹಾಗೂ ಪೂರೈಕೆ ಬೇಡಿಕೆ ಕಡಿಮೆಯಾಗಿರುವ ಕಾರಣ ಬಂದ್‌ ಆಗಿರುವ ದಾಲ್‌ಮಿಲ್‌ಗ‌ಳ ಪುನಶ್ಚೇತನಕ್ಕೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಹೈದ್ರಾಬಾದ ಕರ್ನಾಟಕ ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದು ಆಗ್ರಹಿಸಿದೆ.

ಜಿಲ್ಲೆಯಲ್ಲಿರುವ 297 ದಾಲ್‌ಮಿಲ್‌ಗ‌ಳ ಪೈಕಿ 38 ದಾಲ್‌ಮಿಲ್‌ಗ‌ಳು ಎನ್‌ಪಿಎದಿಂದ ಉದ್ಭವಿಸಿರುವ ಗಂಭೀರ ಸಮಸ್ಯೆಯಿಂದ ರೋಗಗ್ರಸ್ತವಾಗಿ ಕಾರ್ಯನಿರ್ವಹಿಸದೆ ಸ್ಥಗಿತಗೊಂಡಿವೆ. ಮಾರುಕಟ್ಟೆಯಲ್ಲಿ ತೊಗರಿ ಬೆಲೆ ಏರಿಳಿತಗಳಿಂದ ಮತ್ತು ಸರಕಾರದ ತಪ್ಪು ನೀತಿಗಳಿಂದಾಗಿ 156 ದಾಲ್‌ಮಿಲ್‌ಗ‌ಳ ಬೆಳೆ ಉತ್ಪಾದಿಸುವ ಪ್ರಮಾಣವು
ಗಣನೀಯವಾಗಿ ಕುಸಿದಿದೆ. ಜತೆಗೆ 103 ದಾಲ್‌ ಮಿಲ್‌ಗ‌ಳ ಗರಿಷ್ಠ ಪ್ರಮಾಣದ ಬೆಳೆ ಉತ್ಪಾದನೆ ಮಟ್ಟವು ನೀರಿಕ್ಷೆಗೆ ಮೀರಿ ವಿಫಲವಾಗಿವೆ ಎಂದು ಎಚ್‌ಕೆಸಿಸಿಐ ಅಧ್ಯಕ್ಷ ಅಮರನಾಥ ಪಾಟೀಲ ಹಾಗೂ ಗೌರವ ಕಾರ್ಯದರ್ಶಿ ಶಶಿಕಾಂತ ಪಾಟೀಲ ವಿವರಿಸಿದ್ದಾರೆ.

ದಾಲ್‌ಮಿಲ್‌ಗ‌ಳು ಆರ್ಥಿಕ ಸಂಕಷ್ಟ ಎದುರಿಸಿ, ಬ್ಯಾಂಕ್‌ಗಳಿಂದ ಪಡೆದ ಸಾಲಗಳನ್ನು ಸಕಾಲದಲ್ಲಿ ಮರುಪಾವತಿಸುವಲ್ಲಿ ವಿಫಲವಾಗಿವೆ. ಕಳೆದ ಅಕ್ಟೋಬರ್‌ 28ರಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಕಲಬುರಗಿಗೆ ಭೇಟಿ ನೀಡಿದ  ಸಂದರ್ಭದಲ್ಲಿ, ಮಿತಿಮಿರಿದ ಸಂಕಷ್ಟದಲ್ಲಿರುವ ದಾಲ್‌ಮಿಲ್‌ಗ‌ಳ ಮಾಲೀಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನಕ್ಕೆ ತಂದಾಗ, ಸಚಿವರು ಕಲಬುರಗಿ ಜಿಲ್ಲಾ ಧಿಕಾರಿಗಳಿಗೆ ಸಮಸ್ಯೆ ಕುರಿತು
ವರದಿ ಮತ್ತು ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ಸಲಹೆ ಸಲ್ಲಿಸುವಂತೆ ಸೂಚನೆ ನೀಡಿದ್ದರು.

ಸಚಿವರ ಆದೇಶದ ಮೇರೆಗೆ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಆದರೆ ವರದಿಯನ್ನು ಜಾರಿ ಮಾಡುವ ಮುಖಾಂತರ ದಾಲ್‌ಮಿಲ್‌ಗ‌ಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಜಿಲ್ಲಾಧಿಕಾರಿಗಳು ಸಲ್ಲಿಸಿರುವ ಸಲಹೆಗಳ ಜೊತೆಯಲ್ಲಿ ಸರಕಾರವು ಕಲಬುರಗಿಯಲ್ಲಿರುವ ದಾಲ್‌ ಮಿಲ್‌ಗ‌ಳಿಗೆ ನಾಫೇಡ್‌ ಮೂಲಕ ತೊಗರಿ ಸರಬರಾಜು ಮಾಡಿದರೆ ದಾಲ್‌ಮಿಲ್‌ಗ‌ಳು ಉತ್ಪಾದನೆ ಶುಲ್ಕದ ಮೇಲೆ ತೊಗರಿ ಬೆಳೆಯಾಗಿ ಉತ್ಪಾದಿಸುವರು ಮತ್ತು ತೊಗರಿ ಬೆಳೆಯನ್ನು ಸರಕಾರವು ನ್ಯಾಯ ಬೆಲೆ ಅಂಗಡಿಗಳ ಮೂಲಕ ವಿತರಿಸಲು ಸಹಾಯಕವಾಗುವುದು. ಸರಕಾರವು ಜವಳಿ ಫಟಕಗಳಿಗೆ ವಿದ್ಯುತ್‌ನ್ನು 1ರೂ. ದರದಲ್ಲಿ ಸರಬರಾಜು ಮಾಡುತ್ತಲಿದೆ. ಸಂಕಷ್ಟದಲ್ಲಿರುವ ದಾಲ್‌ಮಿಲ್‌ಗ‌ಳಿಗೆ ಇದೇ ದರದಲ್ಲಿ ವಿದ್ಯುತ್‌ ಸರಬರಾಜು ಮಾಡಿದಲ್ಲಿ ಅನುಕೂಲವಾಗುತ್ತದೆ.

ಸರಕಾರವು ಸಕ್ಕರೆ ಉತ್ಪಾದಿಸುವ ಕೈಗಾರಿಕೆಗಳನ್ನು ಮರು ಸ್ಥಾಪಿಸಲು 60,000 ಕೋಟಿ ರೂ. ಗಳ ಆರ್ಥಿಕ ಸಹಾಯ ಒದಗಿಸಿದೆ. ಹೈಕ ಪ್ರದೇಶದ ಐದು ಜಿಲ್ಲೆಗಳ ರೈತರು ತೊಗರಿಯನ್ನು ಬೆಳೆಯಲು ನೆರವಾಗುರುತ್ತಿರುವುದರಿಂದ ಸರಕಾರವು ದಾಲ್‌ ಮಿಲ್‌ಗ‌ಳನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ, ಸಕ್ಕರೆ ಉತ್ಪಾದಿಸುವ ಕೈಗಾರಿಕೆಗಳಿಗೆ ನೀಡಿರುವ ಆರ್ಥಿಕ ಸಹಾಯದ ಮಾದರಿಯಲ್ಲಿ ಒಂದು ಆರ್ಥಿಕ ಸಹಾಯದ ಪ್ಯಾಕೆಜ್‌ನ್ನು ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ. ಒಟ್ಟಾರೆ ಕಲಬುರಗಿ ಜಿಲ್ಲಾಧಿಕಾರಿ ನೀಡಿರುವ ದಾಲ್‌ಮಿಲ್‌ಗಳ ಪುನಶ್ಚೇತನಾ ವರದಿಯನ್ನು ಜಾರಿ ತರಬೇಕೆಂದಿದ್ದಾರೆ.

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.