ಮಳೆ ಕೊರತೆಗೆ ಅಲ್ಪಾವಧಿ ಬೆಳೆ ಹಾಳು


Team Udayavani, Aug 20, 2017, 10:49 AM IST

Farmerstory1 copy.JPG

ಅಫಜಲಪುರ: ತಾಲೂಕಿನಾದ್ಯಂತ ಮಳೆ ಕೊರತೆ ಹಿನ್ನೆಲೆಯಲ್ಲಿ ಅಲ್ಪಾವಧಿ ಬೆಳೆಗಳು ಸಂಪೂರ್ಣ ಹಾಳಾಗಿದ್ದು, ರೈತರು ಆತಂಕಪಡುವಂತೆ ಆಗಿದೆ. ಉತ್ತಮ ಮುಂಗಾರು ಮಳೆ ಬಂದ ಹಿನ್ನೆಲೆಯಲ್ಲಿ ರೈತರು ಖುಷಿಯಿಂದ ಅಲ್ಪಾವಧಿ ಬೆಳೆಗಳಾದ ಉದ್ದು, ಎಳ್ಳು, ಹೆಸರು ಬಿತ್ತನೆ ಮಾಡಿದ್ದರು. ಬಿತ್ತನೆಯಾದ ಮೇಲೆ ಮಳೆಯೇ ಬಾರದಿರುವ ಹಿನ್ನೆಲೆಯಲ್ಲಿ ಬೆಳೆಗಳು ಹಾಳಾಗಿವೆ. ಕೆಲವೆಡೆ ರೈತರು ತಾವೇ ಬಿತ್ತಿದ ಬೆಳೆಯನ್ನು ಕಿತ್ತು ಹಾಕುತ್ತಿದ್ದಾರೆ. ತಾಲೂಕಿನ ಘತ್ತರಗಿಯಲ್ಲಿ ರೈತರೊಬ್ಬರು ಮಳೆ ಆಗದಿದ್ದರೇನಂತೆ ಎಂದು ಸ್ಪಿಂಕ್ಲರ್‌ ಮೂಲಕ ನೀರು ಸಿಂಪಡಿಸಿ ನೋಡುತ್ತೇನೆ ಎಂದು ಬೆಳೆಗೆ ನೀರು ಸಿಂಪಡಿಸುತ್ತಿದ್ದಾರೆ. ಈ ಪ್ರಯತ್ನ ಫಲ ನೀಡಿದರೆ ಶ್ರಮಕ್ಕೆ ಫಲ ಸಿಗಲಿದೆ. ತಾಲೂಖೀನ ಗೊಬ್ಬೂರ (ಬಿ) ಗ್ರಾಮದಲ್ಲಿ ರೈತರು ಮಳೆ ಕೊರತೆಯಿಂದ ಬಾಡಿ ಹೋಗುತ್ತಿರುವ ಹೆಸರು ಬೆಳೆಯನ್ನು ಕಿತ್ತು ಹಾಕುತ್ತಿದ್ದಾರೆ. ಸಾಲ ಮಾಡಿಕೊಂಡು ದುಬಾರಿಯಾದರೂ ಯೋಚಿಸದೆ ಆಳುಗಳನ್ನು ಹಚ್ಚಿ ಬಿತ್ತನೆ ಮಾಡಿದ್ದ ರೈತರು ಅದೇ ಕೂಲಿ ಆಳುಗಳಿಂದ ಬಿತ್ತಿದ ಬೆಳೆಯನ್ನು ಕಿತ್ತಿಸುತ್ತಿದ್ದಾರೆ. ಹಿಂಗಾರಿ ಬೆಳೆ ಮೇಲೆ ಆಸೆ: ಮುಂಗಾರು ಮಳೆ ಕೈ ಕೊಟ್ಟಿದ್ದು, ಹಿಂಗಾರು ಮಳೆ ಉತ್ತಮವಾಗಿ ಆದರೆ ಜೋಳವನ್ನಾದರೂ ಬೆಳೆದುಕೊಂಡು ವರ್ಷದ ಗಂಜಿ ಮಾಡಿಕೊಳ್ಳುತ್ತೇವೆ. ದನಕರುಗಳಿಗೆ ಕಣಕಿ ಮೇವಾದರೂ ಸಿಗಲಿದೆ. ಹಿಂಗಾರು ಮಳೆಯೂ ಬಾರದಿದ್ದರೆ ನಾವು ಈ ಬಾರಿ ಗುಳೆ ಹೋಗುವುದಂತು ಖಂಡಿತ ಎಂದು ರೈತರು ತಮ್ಮ ಗೋಳನ್ನು ಹೇಳಿಕೊಳ್ಳುತ್ತಾರೆ. ಈ ಬಾರಿ ತಾಲೂಕಿನಾದ್ಯಂತ 2095 ಹೆಕ್ಟೇರ್‌ ಪ್ರದೇಶದಲ್ಲಿ ಮಳೆಯಾಶ್ರಿತ ಬಿತ್ತನೆಯಾಗಿದೆ. ಈ ಪೈಕಿ 1676 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಇದು ಮಳೆಯಾಶ್ರಿತ ಬೆಳೆಯಾಗಿದ್ದರಿಂದ ಸ್ಪಿಂಕ್ಲರ್‌ ಪಯೋಗಿಸದರೆ ಪ್ರಯೋಜನವಿಲ್ಲ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶರಣಗೌಡ ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ

ಹಿಂಗಾರು ಕೈಕೊಟ್ಟರೆ ಬೀದಿಪಾಲು: ಮುಂಗಾರು ಮಳೆ ಬಾರದೇ ಇರುವುದರಿಂದ ಬಿತ್ತಿದ ಬೆಳೆ ಹಾಳಾಗಿದೆ. ಹಿಂಗಾರು ಮಳೆಯಾದರೂ ಉತ್ತಮವಾಗಿ ಬಂದರೆ ಜೋಳ ಬೆಳೆದುಕೊಂಡು ನಮಗೂ ಮತ್ತು ದನಕರುಗಳಿಗೂ
ತುತ್ತಿನ ಗಂಜಿ ಬೆಳೆದುಕೊಳ್ಳುತ್ತೇವೆ. ಇಲ್ಲದಿದ್ದರೆ ನಮ್ಮ ಬಾಳು ಬೀದಿಪಾಲಾಗಲಿದೆ. 

ಶಿವಾನಂದ ಬಸಣ್ಣ ಕಲಶೆಟ್ಟಿ, ಗೊಬ್ಬೂರ (ಬಿ) ಗ್ರಾಮದ ರೈತ

ಬೆಳೆ ಕೈ ಹಿಡಿಯದಿದ್ದರೆ ಪರದಾಟ: ಸ್ಪಿಂಕ್ಲರ್‌ ಬಳಸಿ ಹೆಸರು ಬೆಳೆಗೆ ನೀರು ಹರಿಸುತ್ತಿದ್ದೇನೆ. ಇದರಿಂದ ಬೆಳೆ ಕೈಹಿಡಿದರೆ ನಾವು, ನಮ್ಮ ಕುಟುಂಬದವರು ಬದುಕಲು ಸಹಕಾರಿಯಾಗಲಿದೆ. ಇಲ್ಲದಿದ್ದರೆ ತುತ್ತು ಅನ್ನಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಬೆಳೆ ಕೈ ಹಿಡಿದರೆ ಇತರ ರೈತರಿಗೂ ಮಾದರಿ ಆಗಲಿದೆ.
ಮಹಾದೇವಪ್ಪ ಗುರುಪ್ಪ ಭೂಸನೂರ, ಘತ್ತರಗಾ ಗ್ರಾಮದ ರೈತ

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.