ಕಲಾವಿದರೇ ಕುಣಿದರು..ಹಾಡಿದರು..ನೋಡಿದರು!


Team Udayavani, Mar 9, 2019, 6:46 AM IST

gul-4.jpg

ಕಲಬುರಗಿ: “ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ, ಹಾಡುವುದು ಅನಿವಾರ್ಯ ಕರ್ಮ ನನಗೆ’ ರಾಷ್ಟ್ರಕವಿ ಜಿ.ಎಸ್‌. ಶಿವರುದ್ರಪ್ಪ ಅವರ “ಎದೆ ತುಂಬಿ ಹಾಡಿದೆನು’ ಗೀತೆ ಸಾಲುಗಳಿಗೆ ನಗರದ ಡಾ| ಎಸ್‌.ಎಂ. ಪಂಡಿತ ರಂಗಮಂದಿರ ಶುಕ್ರವಾರ ಅಕ್ಷರಶಃ ಸಾಕ್ಷಿಯಾಗಿತ್ತು. ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮಹಿಳಾ ಸಾಂಸ್ಕೃತಿಕ ಉತ್ಸವದಲ್ಲಿ ವಚನ ಗಾಯನ, ಸಮೂಹ, ಸುಗಮ ಸಂಗೀತ, ಗೀಗಿ ಪದ, ತತ್ವಪದ ಹಾಗೂ ದಾಸವಾಣಿ ಸೇರಿದಂತೆ ಹಲವು ಸಾಂಸ್ಕೃತಿಕ, ಜಾನಪದ ಕಲಾ ಪ್ರದರ್ಶನ, ಸಾಮಾಜಿಕ ನಾಟಕ, ವಿಚಾರ ಗೋಷ್ಠಿಗಳು, ಕವಿ ಗೋಷ್ಠಿಗಳಂತ ಅರ್ಥಪೂರ್ಣ ಕಾರ್ಯಕ್ರಮಗಳು ಜರುಗಿದವು.

ಶುಭಾಂಗಿ ಮತ್ತವರ ತಂಡ ಸಮೂಹ ನೃತ್ಯದ ಮೂಲಕ ಮಹಿಳೆಯರ ಸಾಂಸ್ಕೃತಿಕ ಪ್ರತಿಭೆ ಅನಾವರಣಕ್ಕೆ ಮುನ್ನುಡಿ ಬರೆದರು. ಇವರು ಪ್ರದರ್ಶಿಸಿದ “ನಮ್ಮಮ್ಮ ಶಾರದೆ ಉಮಾ ಮಹೇಶ್ವರಿ’, “ಶಿವನು ಭಿಕ್ಷಕ್ಕೆ ಬಂದ ನೀಡುಬಾರೆ’ ನೃತ್ಯ ಸೊಗಸಾಗಿ ಮೂಡಿತು. ಹಿರಿಯ ಗಾಯಕಿ ಛಾಯ ಭರತನೂರ ಅವರು ಸುಗಮ ಸಂಗೀತ ಸುಶ್ರಾವ್ಯವಾಗಿ ನಡೆಸಿಕೊಟ್ಟರು. ನಂತರದಲ್ಲಿ ಶಕುಂತಲಾ ದೇವಲನಾಯಕ ಮತ್ತು ತಂಡ ಗೀಗಿ ಪದದ ಮೂಲಕ “ಅಕ್ಕ ಮಹಾದೇವಿಯಂತ ಹೆಣ್ಣು ಹಡಿರವ್ವ’ ಎಂದು ಕರೆ ನೀಡಿದರು.

ದಾವಣಗೆರೆಯಿಂದ ಬಂದಿದ್ದ ಚೈತ್ರಾ ಮತ್ತು ತಂಡದ ಮಹಿಳಾ ವೀರಗಾಸೆ ಕುಣಿತ ಮೈನವಿರೇಳಿಸಿತು. ಬಳಿಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಹನೀಫ್‌ ಶೇಖ್‌ ಅವರು ಕಡಕೋಳ ಮಡಿವಾಳಪ್ಪನವರ “ನಾವು ನಡೆದೆಮ್ಮ ನಮ್ಮ ತವರೂರಿಗೆ’ ಎಂಬ ತತ್ವಪದದ ಮೂಲಕ ಮಹಿಳೆಯ ಜೀವನಾನುಭವ ಬಿಡಿಸಿಟ್ಟರು. ಡಾ| ಮೀನಾಕ್ಷಿ ಬಾಳಿ ಅಧ್ಯಕ್ಷತೆಯಲ್ಲಿ “ಮಹಿಳೆಯರ ಸಮಸ್ಯೆಗಳು’ ಕುರಿತು ನಡೆದ ವಿಚಾರ ಸಂಕಿರಣದಲ್ಲಿ ಡಾ| ಮೀರಾ ಪಂಡಿತ, ಡಾ| ಶಾಂತಾ ಮಠ, ಡಾ| ಸುಜಾತಾ ಜಂಗಮ ಶೆಟ್ಟಿ ಮಾತನಾಡಿ, ಮಹಿಳೆಯರ ತಲ್ಲಣ, ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು. ದೀಪಾ ಚಂದನ ಪಾಟೀಲ ಮತ್ತು ತಂಡದವರಿಂದ ದಾಂಡಿಯಾ ನೃತ್ಯ ಪ್ರದರ್ಶನ ನಡೆಯಿತು.

ಇಡೀ ಕಾರ್ಯಕ್ರಮ ಇಷ್ಟೆಲ್ಲ ಅಚ್ಚುಕಟ್ಟಾಗಿ ಸುಂದರವಾಗಿ ನಡೆಯಿತು. ಆದರೆ, ರಂಗಮಂದಿರ ಖಾಲಿ ಖಾಲಿ ಕುರ್ಚಿಗಳಿಂದ ಬಣಗುಡುತ್ತಿತ್ತು. ಕಲಾ ತಂಡಗಳ ಕಲಾವಿದರು ಹಾಗೂ ಬೆರಳೆಣಿಕೆಯಷ್ಟು ಆಸಕ್ತರಷ್ಟೆ ಪಾಲ್ಗೊಂಡಿದ್ದರು. ಅಲ್ಲದೇ, ಜನಪ್ರತಿನಿಧಿಗಳ ಪೈಕಿ ಜಿಪಂ ಅಧ್ಯಕ್ಷೆ ಸುವರ್ಣಾ ಹಣಮಂತ ಮಲಾಜಿ ಹೊರತುಪಡಿಸಿ ಯಾರೊಬ್ಬರು ಪಾಲ್ಗೊಂಡಿರಲಿಲ್ಲ. ಮಹಿಳೆಯರಿಗೆಂದೇ ಕಾರ್ಯಕ್ರಮ ಆಯೋಜಿಸಿದ್ದರೂ ಮಹಿಳೆಯರ ಕೊರತೆ ಕೂಡ ಕಾಡುತ್ತಿತ್ತು. ಹೀಗಾಗಿ ಕಾರ್ಯಕ್ರಮದುದ್ದಕ್ಕೂ ಕಲಾವಿದರೇ ಹಾಡಿದರು, ಕುಣಿದರು….ಅವರೇ ನೋಡಿದರು, ಕೇಳಿದರು ಎಂಬಂತಾಯಿತು.

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಶ್ರಮಪಟ್ಟು ಕಲಾವಿದರನ್ನು ಸೇರಿಸಿ ಉತ್ತಮವಾಗಿ ಕಾರ್ಯಕ್ರಮ ಸಂಘಟಿಸಿದ್ದಾರೆ. ಆದರೆ, ಇಡೀ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಜಯಂತಿಗಳ ಇಲಾಖೆ ಎಂದು ಮರು ನಾಮಕರಣ ಮಾಡಬೇಕು. ಇಲಾಖೆಯಿಂದ ಆಚರಿಸಿರುವ ಮಹನೀಯರನ್ನು ಜಾತಿಗೆ ಸೀಮಿತ ಮಾಡಲಾಗಿದೆ. ಮಹಿಳಾ ದಿನಾಚರಣೆ ಯಾವುದೇ ಜಾತಿಗೆ ಸೇರಿದ್ದರೆ ರಾಜಕಾರಣಿಗಳು ರಂಗಮಂದಿರ ಭರ್ತಿ
ಮಾಡಿಸುತ್ತಿದ್ದರು. 
 ಮೀನಾಕ್ಷಿ ಬಾಳಿ, ಉಪನ್ಯಾಸಕರು, ವಿ.ವಿ. ಮಹಿಳಾ ವಿದ್ಯಾಲಯ

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.