ಭಕ್ತಿ-ಭಾವದ ಮಧ್ಯೆ ಸಡಗರದ ದಸರಾ
Team Udayavani, Oct 16, 2021, 10:08 AM IST
ಆಳಂದ: ಕರ್ನಾಟಕ-ಮಹಾರಾಷ್ಟ್ರ ಗಡಿಗೆ ಹೊಂದಿ ಕೊಂಡ ತಾಲೂಕು ಕೇಂದ್ರ ಪಟ್ಟಣ ಸೇರಿದಂತೆ ನೂರಕ್ಕೂ ಹೆಚ್ಚು ಹಳ್ಳಿಗಳಲ್ಲಿ ನವರಾತ್ರಿ ಉತ್ಸವ ಆಚರಿಸಲಾಯಿತು.
ಒಂಭತ್ತು ದಿನಗಳ ಕಾಲ ಮನೆಗಳಲ್ಲಿ ಹಾಗೂ ಸಾರ್ವಜನಿಕವಾಗಿ ದೇವಿ ಮೂರ್ತಿ ಪ್ರತಿಷ್ಠಾಪಿಸಿ, ಸಾಂಪ್ರದಾಯಿಕವಾಗಿ 9 ಅಥವಾ 5 ದಿನಗಳ ಕಾಲ ತಮ್ಮ ಮನೆಗಳಲ್ಲಿ ಘಟಸ್ಥಾಪಿಸಿ, ನಿರಂತರ ದೀಪ ಹಚ್ಚಿ, ವಿಶೇಷ ವ್ರತಾಚರಣೆ ಕೈಗೊಂಡು 9ನೇ ದಿನಕ್ಕೆ ಹಬ್ಬ ಆಚರಿಸಿ ಕುಟುಂಬದವರು, ಪರಿಚಯಸ್ಥರು, ಸಂಬಂಧಿಕರು, ಬಡಾವಣೆ ಜನರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ಸಾರ್ವಜನಿಕವಾಗಿ ಹಾಗೂ ದೇವಸ್ಥಾನಗಳಲ್ಲಿ ಸ್ಥಾಪಿಸಿದ ದೇವಿ ಆರಾಧನಾ ಮಹೋತ್ಸವದಲ್ಲಿ ಹೋಮ-ಹವನ, ರಂಗೋಲಿ ಸ್ಪರ್ಧೆ, ಭಜನೆ ಹೀಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರ ಗಮನ ಸೆಳೆದವು.
ಪಟ್ಟಣದಲ್ಲಿ ಹನುಮಾನ ರಸ್ತೆ, ಚಕ್ರಕಟ್ಟಾ, ಬಾಳನಕೇರಿ, ಹತ್ತ್ಯಾನಗಲ್ಲಿ, ಶರಣನಗರ, ರೇವಣಸಿದ್ಧೇಶ್ವರ ಕಾಲೋನಿ, ನಾಯಕ ನಗರ ಮತ್ತಿತರ ಕಡೆ ದೇವಿ ಪ್ರತಿಷ್ಠಾಪಿಸಿ ಆರಾಧನೆ ಕೈಗೊಂಡರು. ಗ್ರಾಮೀಣ ಭಾಗದಲ್ಲಿ ಖಜೂರಿ, ಹಿರೋಳಿ, ರುದ್ರವಾಡಿ, ಮಾದನಹಿಪ್ಪರಗಾ, ಕೊಡಲಹಂಗರಗಾ, ಕಡಂಗಚಿ, ನಿಂಬರಗಾ ನರೋಣಾ, ಬಸವಣ್ಣ ಸಂಗೋಳಗಿ, ಸಾಲೇಗಾಂವ, ಹಡಲಗಿ ಮತ್ತಿತರ ಗ್ರಾಮಗಳಲ್ಲಿ ಹಬ್ಬದ ಸಡಗರ ಕಂಡುಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ