ಶೋಷಿತರನ್ನು ನುಂಗಿ ಜೀವಿಸುವ ಹುನ್ನಾರ: ಡಾ| ಖರ್ಗೆ


Team Udayavani, Apr 17, 2019, 4:26 PM IST

gul-2

ಕಲಬುರಗಿ: ಸಂವಿಧಾನ ಬದಲಿಸುವ ಮತ್ತು ಮೀಸಲಾತಿ ರದ್ದುಗೊಳಿಸುವ ಮಾತನಾಡುತ್ತಿರುವ ಬಿಜೆಪಿಯವರು ಶೋಷಿತರನ್ನು ನುಂಗಿ ಜೀವಿಸುವ ಹುನ್ನಾರ ಹೊಂದಿದ್ದಾರೆ ಎಂದು ದಲಿತ ಹಿರಿಯ ನಾಯಕ, ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

ನಗರದ ವೀರಶೈವ ಕಲ್ಯಾಣ ಮಂಟಪದ ಮುಂಭಾಗದ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಸಮುದಾಯದ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಸ್ಪೃಶ್ಯರು, ಶೋಷಿತರು ದೇಶದ ಮಣ್ಣಿನ ಮಕ್ಕಳು. ಅಂಬೇಡ್ಕರ್‌ ಬರೆದಿರುವ ಸಂವಿಧಾನವಿಲ್ಲದೇ ದೇಶದ ಜನತೆಗೆ ಯಾವುದೇ ಹಕ್ಕುಗಳು ಇರುವುದಿಲ್ಲ, ಸರ್ವರಿಗೆ ಸ್ವಾತಂತ್ರ್ಯಾ, ಸಮಾನತೆ ಮತ್ತು ಬಂಧುತ್ವವನ್ನು ಕೊಟ್ಟಿರುವ ಸಂವಿಧಾನ ರಕ್ಷಣೆಗೆ ನಾನು ಬದ್ಧನಾಗಿದ್ದೇನೆ ಎಂದು ಹೇಳಿದರು.

ಬಿಜೆಪಿ ಆಡಳಿತ ಹೊಂದಿದ್ದ ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್‌ನಲ್ಲಿ ದಲಿತರ ಮೇಲೆ ದಾಳಿ ನಡೆದಿದ್ದವು. ಗುಜರಾತ್‌ನಲ್ಲಿ ದನದ ಮಾಂಸ ತೆಗೆಯುತ್ತಿದ್ದ ಯುವಕರನ್ನು ಬೆತ್ತಲೆಗೊಳಿಸಿ ಥಳಿಸಿದರು. ಇದಕ್ಕೆ ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ಮೋದಿ ಸಹಕಾರ ಇತ್ತು ಎಂದು ದೂರಿದ ಅವರು, ಸಂವಿಧಾನ ಬದಲಿಸುವ ಮಾತನಾಡಿದ್ದ ಬಿಜೆಪಿ ಸಂಸದ ಅನಂತ ಕುಮಾರ ಹೆಗಡೆ, ನಾನು ಪ್ರತಿರೋಧ ವ್ಯಕ್ತಪಡಿಸಿದ್ದರಿಂದ ಕ್ಷಮೆಯಾಚಿಸಿದರು ಎಂದರು.

ಕೇಂದ್ರದಲ್ಲಿರುವ ಸುಳ್ಳು ಸರ್ಕಾರವನ್ನು ತೆಗೆಯಬೇಕಿದೆ. ಪ್ರಜಾಪ್ರಭುತ್ವ ಉಳಿಸುವ ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತರಬೇಕಿದೆ. ಅದಕ್ಕಾಗಿ ತಮಗೆ ಮತ ನೀಡುವಂತೆ ಸಮುದಾಯವರಿಗೆ ಖರ್ಗೆ ಮನವಿ ಮಾಡಿದರು.

ಮಾಜಿ ರಾಜ್ಯಸಭಾ ಸದಸ್ಯ ಕೆ.ಬಿ.ಶಾಣಪ್ಪ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಲು ಬಂಡೆ ಇದ್ದಂತೆ. ಅವರನ್ನು ಒಡೆಯಲು ಸಾಧ್ಯವಿಲ್ಲ ಎಂದು ಬಿಜೆಪಿಯವರಿಗೆ ಹೇಳಿ ಬಂದಿದ್ದೇನೆ. ನಮ್ಮ ಜೀವ ಹೋದರೂ ಪರವಾಗಿಲ್ಲ ಖರ್ಗೆ ಅವರ ಜೀವ ಉಳಿಸಲು ಅಡ್ಡ ನಿಲ್ಲುತ್ತೇವೆ ಎಂದರು.

ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ, ಮುಖಂಡರಾದ ಅಲ್ಲಮಪ್ರಭುಪಾಟೀಲ, ಹೆಣ್ಣೂರು ಶ್ರೀನಿವಾಸ, ಶ್ಯಾಮರಾವ ಪ್ಯಾಟಿ, ವಿಜಯಕುಮಾರ, ಚಂದ್ರಿಕಾ ಪರಮೇಶ್ವರಿ, ಲಿಂಗರಾಜು ತಾರ್‌ಫೈಲ್‌, ಶಾಮನಾಟೀಕರ್‌, ಪರಮೇಶ್ವರ ಖಾನಪೂರೆ, ಸಿದ್ಧಾರ್ಥ್, ಗೋಪಿಕೃಷ್ಣ, ಬಸವರಾಜ ಜವಳಿ, ಸತೀಶ ಮುಂತಾದವರು ಇದ್ದರು.

ಮಲ್ಲಿಕಾರ್ಜುನ ಖರ್ಗೆ ನ್ಯಾ.ಸದಾಶಿವ ಆಯೋಗದ ವಿರೋಧಿ ಎಂದು ಬಿಜೆಪಿ ಪ್ರಾಯೋಜಿತರು ಹೇಳುತ್ತಿದ್ದಾರೆ. ಅದಕ್ಕಾಗಿ ಬಿಜೆಪಿ ಅವರನ್ನು ನೇಮಿಸಿದೆ.
ಎಲ್‌.ಹನುಮಂತಯ್ಯ, ರಾಜ್ಯಸಭಾ ಸದಸ್ಯ

ಪರಿಶಿಷ್ಟ ಜಾತಿಯ ಎಡಗೈ ಮತ್ತು ಬಲಗೈ ಎರಡೂ ವರ್ಗದವರು ಒಟ್ಟಾಗಿ ಇರಬೇಕು. ನಾನು ಸದಾ ನಿಮ್ಮೊಂದಿಗೆ ಇರುತ್ತೇನೆ. ಸಮುದಾಯದ ಎರಡು ವರ್ಗದವರೂ ಕುಳಿತುಕೊಂಡು ಮಾತನಾಡಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳೊಣ. ಹೋಗುವುದಾದರೆ ಎರಡೂ ವರ್ಗದವರು ಒಗ್ಗಟ್ಟಾಗಿ ಹೋಗೋಣ.

ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಅಭ್ಯರ್ಥಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.