ಹಿರೋಳಿ ಚೆಕ್ಪೋಸ್ಟ್ ಗೆ ಡಿಸಿ ಹಠಾತ್ ಭೇಟಿ
ಕೋವಿಡ್-2ನೇ ಅಲೆ ತಡೆಗೆ ವ್ಯಾಪಕ ಕಟ್ಟೆಚ್ಚರ |ಜನರ ಆರೋಗ್ಯ ತಪಾಸಣೆ ಕುರಿತು ಪರಿಶೀಲನೆ
Team Udayavani, Mar 14, 2021, 4:54 PM IST
ಆಳಂದ: ಇಡೀ ಭಾರತದಲ್ಲಿಯೇ ಮೊಟ್ಟ ಮೊದಲ ಕೋವಿಡ್ ಸಾವು ಕಲಬುರ್ಗಿಯಲ್ಲಿ ಸಂಭವಿಸಿ ಒಂದು ವರ್ಷ ಪೂರೈಸುವ ಮುನ್ನಾ ದಿನವಾದ ರಾತ್ರಿ ಜಿಲ್ಲಾಧಿಕಾರಿ ವಿವಿ ಜೋತ್ಸಾ ಅವರು ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿರುವ ಹಿರೋಳಿ ಚೆಕ್ಪೋಸ್ಟ್ಗೆ ಹಠಾತ್ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾಧಿಕಾರಿ ವಿ.ವಿ ಜ್ಯೋತ್ಸಾ ಅವರ ನಿರ್ದೇಶನದಂತೆ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ ನೇತೃತ್ವದ ಕೋವಿಡ್-19 ನಿಯಂತ್ರಣ ತಂಡದವರು ತಾಲೂಕಿನಲ್ಲಿ ಅದರಲ್ಲಿಯೂ ಚೆಕ್ಪೋಸ್ಟ್ಗಳಲ್ಲಿ ಮಹಾರಾಷ್ಟ್ರದಿಂದ ಆಗಮಿಸುವವರಿಗೆ ಕಡ್ಡಾಯವಾಗಿ ಕೋವಿಡ್-19 ನೆಗೆಟಿವ್ ವರದಿ ಪರಿಗಣಿಸಲು ಮುಂದಾಗಿದ್ದಾರೆ.
ನೆಗೆಟಿವ್ ವರದಿ ಇಲ್ಲದೇ ಇದ್ದರೆ ಅಂಥವರಿಗೆ ಮರಳಿ ಕಳಿಸುತ್ತಿದ್ದು, ಈ ಕುರಿತು ಹಠಾತ್ ಭೇಟಿ ನೀಡುವ ಮೂಲಕ ಚೆಕ್ಪೋಸ್ಟ್ಗಳಲ್ಲಿನ ಕಾರ್ಯನಿರ್ವಹಣೆ ಕುರಿತು ಜಿಲ್ಲಾಧಿ ಕಾರಿಗಳು ಖುದ್ದು ಪರಿಶೀಲಿಸಿದರು. ತಾಲೂಕಿನ ಹಿರೋಳಿ, ಖಜೂರಿ ಮತ್ತು ನಿಂಬಾಳದಲ್ಲಿ ಸ್ಥಾಪಿಸಲಾದ ಚೆಕ್ಪೋಸ್ಟ್ ಗಳ ಕಾರ್ಯನಿರ್ವಹಣೆಯ ಮಾಹಿತಿ ಕಲೆ ಹಾಕಿದರು. ರಾತ್ರಿ, ವಿದ್ಯುತ್, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಕೋವಿಡ್ ತಪಾಸಣೆ ಕುರಿತು ಸಿಬ್ಬಂದಿಗಳಿಂದ ವಿವರಣೆ ಕೇಳಿದರು. ಅದೇ ರೀತಿ ಮಧ್ಯಾಹ್ನದಲ್ಲಿ ಬಿಸಿಲಿನ ತಾಪ ಹೆಚ್ಚಾಗುವುದರಿಂದ ನೆರಳಿನ ವ್ಯವಸ್ಥೆಯನ್ನೂ ಸಹ ಅಲ್ಲಿ ತುರ್ತಾಗಿ ಮಾಡುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು. ಸಹಾಯಕ ಆಯುಕ್ತ ರಾಮಚಂದ್ರ ಗಡದೆ, ಕಂದಾಯ ಮತ್ತು ಆರೋಗ್ಯ, ಪೊಲೀಸ್ ಇಲಾಖೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ