ಎರಡು ಕಡೆಯಿದ್ದ 91 ಸಾವಿರ ಮತದಾರರ ಹೆಸರು ಡಿಲೀಟ್: ಡಿಸಿ ಗುರುಕರ್


Team Udayavani, Nov 9, 2022, 6:50 PM IST

tdy-24

ಕಲಬುರಗಿ: ವಿಧಾನಸಭಾ ಕ್ಷೇತ್ರದೊಳಗೆ ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಪತ್ತೆ ಮಾಡಿ ಒಟ್ಟು 91 ಸಾವಿರ ಮತದಾರರನ್ನು ಮತದಾರ ಪಟ್ಟಿಯಿಂದ ಅಳಿಸಿ ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ ಗುರುಕರ್ ತಿಳಿಸಿದರು.

‌ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ -2023 ಕರಡು ಪಟ್ಟಿ ಪ್ರಕಟ ಕುರಿತು ವಿವರಣೆ ನೀಡಲು ಕರೆಯಲಾದ ಸುದ್ದಿಗೋಷ್ಠಿ ಈ ವಿಷಯ ತಿಳಿಸಿದರು.

ಒಂದೇ ಕ್ಷೇತ್ರದಲ್ಲಿ ಎರಡು ಕಡೆ ಅಥವಾ ಅದಕ್ಕಿಂತ ಹೆಚ್ಚು ಕಡೆ  ಮತದಾರ ಪಟ್ಟಿಯಲ್ಲಿ ಹೆಸರು ಇರುವುದನ್ನು ಚುನಾವಣಾ ಸಿಬ್ಬಂದಿ ಭಾವಚಿತ್ರ ಹಾಗೂ ಆಯಾ ಮತಗಟ್ಟೆಗೆ ಹೋಗಿ ಪರಿಶೀಲಿಸಿ ಅಳಿಸಿ ಹಾಕಿದ್ದು, ಕಲಬುರಗಿ ಉತ್ತರ ಕ್ಷೇತ್ರದಲ್ಲಿ 17 ಸಾವಿರ, ಕಲಬುರಗಿ ದಕ್ಷಿಣ ಕ್ಷೇತ್ರದಲ್ಲಿ  12 ಸಾವಿರ, ಸೇಡಂ ಕ್ಷೇತ್ರದಲ್ಲಿ 10 ಸಾವಿರ ಮತದಾರರ ನ್ನು ಎರಡು ಕಡೆ ಇರುವುದನ್ನು ಪತ್ತೆ ಮಾಡಿ ಅಳಿಸಲಾಗಿದೆ ಎಂದು ವಿವರಣೆ ನೀಡಿದರು.

ಕಲಬುರಗಿ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟಾರೆ 1.84 ಲಕ್ಷ ಮತದಾರರು ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವ ಕುರಿತಾಗಿ ಪತ್ತೆ ಮಾಡಲಾಗಿ, ಅದರಲ್ಲಿ 91 ಸಾವಿರ ಅಳಿಸಿ ಹಾಕಲಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಇಡೀ ಜಿಲ್ಲೆಯಲ್ಲಿ ಎರಡು ಕಡೆ ಮತದಾನ ಹೊಂದಿರುವ ಕುರಿತಂತೆ ಪತ್ತೆ ಮಾಡುವ ಹಾಗೂ ಅಳಿಸಿ ಹಾಕುವ ಕಾರ್ಯ ಭಾರತ ಚುನಾವಣಾ ಆಯೋಗ ನಿರ್ದೇಶನ ಮೇರೆಗೆ ನಡೆಯುವ ಸಾಧ್ಯತೆ ಗಳಿವೆ. 91 ಸಾವಿರ ಮತದಾರರ ನ್ನು ಪಟ್ಟಿಯಿಂದ ಅಳಿಸಿ ಹಾಕಿದ ನಂತರ ಜಿಲ್ಲೆಯಲ್ಲಿ 21.64 ಲಕ್ಷ ಮತದಾರರು ಉಳಿದಿದ್ದಾರೆ ಎಂದರು.

ತಿಂಗಯ ಪರ್ಯಂತ ಮತದಾರರ ಪಟ್ಟಿ ಪರಿಷ್ಕರಣೆ: ಇಂದಿನಿಂದ ತಿಂಗಳ ಪರ್ಯಂತ ಚುನಾವಣಾ ಸಿಬ್ಬಂದಿಗಳು ಮನೆ- ಮನೆಗೆ ಹೋಗಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಿದ್ದಾರೆ. ಪ್ರಮುಖವಾಗಿ ಮುಂದಿನ ತಿಂಗಳು 8ರವರೆಗೆ ಪರಿಷ್ಕರಣೆ ಕಾರ್ಯ ನಡೆಯಲಿದ್ದು, ಈ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಲಾಗುತ್ತದೆ. ‌ಹೀಗಾಗಿ ಯುವ ಮತದಾರರು ಸಿಬ್ಬಂದಿ ಮನೆಗ ಬಂದ ಸಂದರ್ಭದಲ್ಲಿ ಸೂಕ್ತ ಮಾಹಿತಿ ಹಾಗೂ ದಾಖಲಾತಿ ಸಲ್ಲಿಸಿ ಹೆಸರು ಸೇರ್ಪಡೆ ಮಾಡಬೇಕೆಂದರು.

ಮತದಾರರ ಪಟ್ಟಿಯಲ್ಲಿ ಯುವಕರ ಹೆಸರು ಕಡಿಮೆ ಅನುಪಾತ ಹೊಂದಿರುವುದನ್ನು ಕಂಡು ಬಂದಿರುವುದರಿಂದ ಯುವಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಹೆಚ್ಚಿನ ಆಸಕ್ತಿ ತಳೆಯಬೇಕೆಂದರು.

ಜನವರಿ 5ರವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಲು ಸೂಕ್ತ ಅವಕಾಶ ಇರೋದ್ರಿಂದ ಎಲ್ಲ ರೂ ಮತದಾರರ ಪಟ್ಟಿ ಪರಿಷ್ಕರಣೆ ಈ ಅವಕಾಶ‌ ಸದುಪಯೋಗ ಪಡೆದುಕೊಳ್ಳಬೇಕೆಂದರು.

ಅಂಗವಿಕಲರು, ತೃತೀಯ ಲಿಂಗಗಳು ತಾವು ಹೇಳುವ ಲಿಂಗವನ್ನೇ ಪಟ್ಟಿ ಯಲ್ಲಿ ನಮೂದಿಸಲಾಗುವುದು.ಅಂಗ ವಿಕಲರನ್ನು ಸಹ ಅಳವಡಿಸಲು ಆಸಕ್ತಿ ವಹಿಸಲಾಗಿದೆ. ಒಟ್ಟಾರೆ ಈ ಸಂಬಂದ ಒತ್ತಡ ಇಲ್ಲ ಎಂದು ಡಿಸಿ ಗುರುಕರ್ ತಿಳಿಸಿದರು. ‌ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.