DCC Bank ಅಧ್ಯಕ್ಷ ಸ್ಥಾನಕ್ಕೆ ರಾಜ್ ಕುಮಾರ್ ಪಾಟೀಲ್ ತೇಲ್ಕೂರ ರಾಜೀನಾಮೆ
ಅಭಿವೃದ್ಧಿ ಮುಂದುವರೆಸಿಕೊಂಡು ಹೋಗುವರು ಅಧ್ಯಕ್ಷರಾಗಲಿ
Team Udayavani, May 19, 2023, 9:02 PM IST
ಕಲಬುರಗಿ: ಇಲ್ಲಿನ ಕಲಬುರಗಿ- ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ ( ಡಿಸಿಸಿ) ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜ್ ಕುಮಾರ್ ಪಾಟೀಲ್ ತೇಲ್ಕೂರ ರಾಜೀನಾಮೆ ನೀಡಿದ್ದಾರೆ.
ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ರಾಜೀನಾಮೆ ಸಲ್ಲಿಸಿದ್ದು, ತಕ್ಷಣ ಜಾರಿಗೆ ಬರುವಂತೆ ರಾಜೀನಾಮೆ ಅಂಗೀಕರಿಸುವಂತೆ ಕೋರಿದ್ದಾರೆ.ತಾವು ಅಧ್ಯಕ್ಷರಾದ ನಂತರ ಎರಡುವರೆ ವರ್ಷಗಳಿಂದ ಸ್ಥಗಿತ ವಾಗಿದ್ದ ಬಡ್ಡಿ ರಹಿತ ಸಾಲ ಪ್ರಾರಂಭಿಸಲಾಗಿರುವುದು ಎಲ್ಲರಿಗೂ ತಿಳಿದ ವಿಷಯ. ತಾವು ಅಧ್ಯಕ್ಷರಾದ ಮೇಲೆ ಬ್ಯಾಂಕ್ ಲಾಭದತ್ತ ಹೆಜ್ಜೆ ಹಾಕಿತು. ಇನ್ನಷ್ಟು ಬ್ಯಾಂಕ್ ಅಭಿವೃದ್ಧಿ ಹೊಂದಿ ಕಲಬುರಗಿ- ಯಾದಗಿರಿ ಜಿಲ್ಲೆಯ ಎಲ್ಲ ಪ್ರತಿಯೊಬ್ಬ ರೈತರಿಗೆ ಸಾಲ ಕೊಡಿಸಲು ಉದ್ದೇಶಿಸಲಾಗಿತ್ತು. ಆದರೆ ಅದು ಕೈಗೂಡಲಿಲ್ಲ. ಮುಂದೆ ಅಧ್ಯಕ್ಷರಾದವರು ಅದನ್ನು ಸಾಕಾರಗೊಳೊಸಲಿ. ತಾವು ಬ್ಯಾಂಕ್ ನ ಅಧ್ಯಕ್ಷರಾದ ಮೇಲೆ ಸೇಡಂ ತಾಲೂಕಿಗೆ 120 ಕೋ.ರೂಬಡ್ಡಿ ರಹಿತ ಸಾಲ ವಿತರಿಸಲಾಗಿದೆ. ಆದರೆ ತಾವು ಅಧ್ಯಕ್ಷರಾಗುವ ಮುಂಚೆ ಸೇಡಂ ತಾಲೂಕಿಗೆ ಕೇವಲ ಎಂಟು ಕೋ.ರೂ ಸಾಲ ಬೆಳೆಸಾಲ ವಿತರಿಸಲಾಗಿತ್ತು ಎಂದಿದ್ದಾರೆ.
ಪ್ರಮುಖವಾಗಿ ಸೇಡಂ ತಾಲೂಕಿನಲ್ಲಿ ಮಹಿಳಾ ಸ್ವಸಹಾಯ ಸಂಘಗಳನ್ನು ರಚಿಸಿ 15 ಸಾವಿರಕ್ಕೂ ಅಧಿಕ ಹೆಚ್ಚು ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಕಲ್ಪಿಸಲು ಸಾಲ ನೀಡಲಾಗಿದೆ. ನೂರಾರು ಕೋಟಿ ರೂ ಠೇವಣಿ ತಂದಿರುವುದು, ಕಲಬುರಗಿಯಲ್ಲಿ ಬ್ಯಾಂಕ್ ಗೆ ನಿವೇಶನ ಖರೀದಿಸುವುದರ ಜತೆಗೇ ಹತ್ತಾರು ನಿಟ್ಟಿನ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.
ಹೈನೋದ್ಯಮ ಹೆಚ್ಚಳಕ್ಕೆ ಯೋಜನೆ ರೂಪಿಸಿ ಚಾಲನೆ ನೀಡಲಾಗಿರುವುದನ್ನು ಹಾಗೂ ಎಲ್ಲರಿಗೂ ಸಾಲ ದೊರಕಿಸಲು ಹೊಸ ಅಧ್ಯಕ್ಷರು ಮುಂದಾಗಬೇಕು ಎಂದು ತೇಲ್ಕೂರ ರೈತರ ಪರವಾಗಿ ಸಲಹೆ ನೀಡಿದ್ದಾರೆ.
ಬ್ಯಾಂಕ್ ನ ಅಭಿ ವೃದ್ಧಿ ಹಿತದೃಷ್ಟಿಯಿಂದ ಹಾಗೂ ಪ್ರತಿಯೊಬ್ಬ ರೈತಗೆ ಸಾಲ ದೊರಕಲು ರಾಜಕುಮಾರ ಪಾಟೀಲ್ ಅವರೇ ಅಧ್ಯಕ್ಷರಾಗಿ ಮುಂದುವರೆಯುವುದು ಅಗತ್ಯವಾಗಿದೆ ಹಾಗೂ ಸೂಕ್ತವಾಗಿದೆ ಎಂದು ರೈತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ