ಸಮ್ಮೇಳನ ಯಶಸ್ವಿ, ಶ್ರೇಯಸ್ಸು ತರುವಂತೆ ಶ್ರಮಿಸಲು ಅಧಿಕಾರಿಗಳಿಗೆ ಡಿಸಿಎಂ ತಾಕೀತು
Team Udayavani, Dec 12, 2019, 12:50 PM IST
ಕಲಬುರಗಿ: ಫೆಬ್ರವರಿ 5 ರಿಂದ ಕಲಬುರಗಿಯಲ್ಲಿ ನಡೆಯಲಿರುವ ಅಖಿಲ ಭಾರತ 85 ನೇಯ ಸಮ್ಮೇಳನಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮ್ಮೇಳನ ಯಶಸ್ವಿಯಾಗಿ ನೆರವೇರುವ ನಿಟ್ಟಿನಲ್ಲಿ ಶ್ರಮಿಸುವಂತೆ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಾಕೀತು ಮಾಡಿದರು.
ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಲಬುರಗಿ ಸಮ್ಮೇಳನ ಯಶಸ್ವಿ ಶ್ರೇಯಸ್ಸು ಆಗಲು ಮಹತ್ವ ಕೊಡಿ. ಬಹು ಮುಖ್ಯವಾಗಿ ವಹಿಸಿ ಕೊಡಲಾಗುವ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದರು.
ತೊಗರಿ ಖರೀದಿಗೆ ಸಂಬಂಧಿಸಿದಂತೆ ಡಿ. 13 ರಂದು ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಸುತ್ತಿರುವುದಾಗಿ ಡಿಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು. ಸರ್ಕಾರಿ ಕಾರ್ಯಕ್ರಮ ಹಾಗೂ ಸಭೆಗಳಲ್ಲಿ ಶಿಷ್ಟಾಚಾರ ನಿಯಮ ಕಡ್ಡಾಯವಾಗಿ ಪಾಲಿಸಬೇಕೆಂದು ಡಿಸಿಎಂ ಕಾರಜೋಳ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ಅಫಜಲಪುರ ಶಾಸಕ ಎಂ.ವೈ ಪಾಟೀಲ್ ಅವರು ತಮ್ಮ ತಾಲ್ಲೂಕಿನ ಲ್ಲಿ ಅದರಲ್ಲೂ ದೇವಲ್ ಗಾಣಗಾಪುರ ದತ್ತಾತ್ರೇಯ ದೇವಸ್ಥಾನದ ಅಭಿವೃದ್ಧಿ ಸಂಬಂಧ ಸಭೆಗೆ ತಮ್ಮನ್ನು ಆಹ್ವಾನಿಸದೇ ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದರು.
15 ತಿಂಗಳ ನಂತರ ಕೆಡಿಪಿ: ಉಪಮುಖ್ಯಮಂತ್ರಿ ಕಾರಜೋಳ ಅಧ್ಯಕ್ಷತೆಯಲ್ಲಿ ಸುಮಾರು 15 ತಿಂಗಳ ಬಳಿಕ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ.ಕಾರಜೋಳ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯಿತು.
ಅಫಜಲಪುರ ಶಾಸಕ ಎಂ.ವೈ.ಪಾಟೀಲ, ಚಿಂಚೋಳಿ ಶಾಸಕ ಡಾ.ಅವಿನಾಶ್ ಜಾಧವ್, ಕಲಬುರ್ಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ, ಕಲಬುರ್ಗಿ ಉತ್ತರ ಶಾಸಕಿ ಕನೀಜ್ ಫಾತಿಮಾ, ಆಳಂದ ಶಾಸಕ ಸುಭಾಷ್ ಗುತ್ತೇದಾರ, ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಬಿ.ಜಿ.ಪಾಟೀಲ, ಜಿ.ಪಂ. ಅಧ್ಯಕ್ಷೆ ಸುವರ್ಣ ಮಲಾಜಿ, ಜಿಲ್ಲಾಧಿಕಾರಿ ಶರತ್ ಬಿ, ಜಿ.ಪಂ. ಸಿಇಒ ಡಾ.ರಾಜಾ ಪಿ, ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಐಎಫ್ಎಸ್ ಅಧಿಕಾರಿ ವಾನತಿ ಇದ್ದಾರೆ.
ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದ ದತ್ತ ಮಂದಿರದ ಅಭಿವೃದ್ಧಿಗಾಗಿ ₹ 10 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಯಾವ ಅಭಿವೃದ್ಧಿ ಕಾರ್ಯಕ್ರಮ ಕೈಗೊಳ್ಳಬೇಕು ಎಂದು ನಿರ್ಧಾರ ಕೈಗೊಳ್ಳುವ ಸಭೆಗೆ ತಮ್ಮನ್ನು ಆಹ್ವಾನಿಸದೇ ಅವಮಾನ ಮಾಡಲಾಗಿದೆ ಎಂದು ಶಾಸಕ ಎಂ.ವೈ.ಪಾಟೀಲ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಶಂಕುಸ್ಥಾಪನೆಗೆ ಖಂಡಿತ ಕರೆಯಲಾಗುತ್ತದೆ ಎಂದು ಹೇಳಿ ಸಚಿವರು ಶಿಷ್ಟಾಚಾರದ ಚರ್ಚೆಗೆ ತೆರೆ ಎಳೆದರು.
ಕಾಂಗ್ರೆಸ್ ಶಾಸಕ ಡಾ ಅಜಯ್ ಸಿಂಗ್ ಹಾಗೂ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ್ ಸಭೆಗೆ ಗೈರು ಹಾಜರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್
MUST WATCH
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ