ಸಾಲಮನ್ನಾ ರೈತರಿಗೂ ಶೀಘ್ರ ಸಾಲ: ರಾಜಕುಮಾರ


Team Udayavani, Jul 6, 2021, 7:36 PM IST

sದ್ಗ್ದಸದ್ಗ್ಎಡ

ಕಲಬುರಗಿ: ಇಲ್ಲಿಯವರೆಗೆ ಸಾಲ ಪಡೆಯದ ರೈತರಿಗೆ ಮೊದಲ ಆದ್ಯತೆ ನೀಡಿ ಈಗ ಬೆಳೆಸಾಲ ವಿತರಿಸಲಾಗುತ್ತಿದ್ದು, ಮುಂದಿನ ಎರಡು ತಿಂಗಳಲ್ಲಿ ಸಾಲಮನ್ನಾದ ರೈತರಿಗೂ ಹೊಸದಾಗಿ ಬೆಳೆಸಾಲ ವಿತರಿಸಲಾಗುವುದು ಎಂದು ಕಲಬುರಗಿ-ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್‌ ಅಧ್ಯಕ್ಷರೂ ಆಗಿರುವ ಸೇಡಂ ಮತಕ್ಷೇತ್ರದ ಶಾಸಕ ರಾಜಕುಮಾರ ಪಾಟೀಲ್‌ ತೇಲ್ಕೂರ ಹೇಳಿದರು. ಅಫಜಲಪುರ ತಾಲೂಕಿನ ಭೈರಾಮಡಗಿಯಲ್ಲಿ ಭೈರಾಮಡಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಸಕ್ತ 2021 22ನೇ ಸಾಲಿನ ಬೆಳೆಸಾಲದ ಚೆಕ್‌ನ್ನು ರೈತರಿಗೆ ವಿತರಿಸಿ ಮಾತನಾಡಿದರು.

ಸಾಲ ಪಡೆಯದ ರೈತರಿಗೆ ಸಾಲ ವಿತರಿಸಲು ಅಪೆಕ್ಸ್‌ ಬ್ಯಾಂಕ್‌ನಿಂದ 200 ಕೋ.ರೂ. ಬಿಡುಗಡೆಯಾಗಿದ್ದು, ಇದನ್ನು ಈಗ ಎಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ವಿತರಿಸಲಾಗುತ್ತಿದ್ದು, ಈಗಾಗಲೇ ಸಾಲ ವಿತರಣೆ ಆರಂಭವಾಗಿದೆ. ಭೈರಾಮಡಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮೂಲಕ ಶುಭಾರಂಭಗೊಳಿಸಲಾಗಿದೆ ಎಂದು ತೇಲ್ಕೂರ ವಿವರಿಸಿದರು. ಸುಸ್ತಿ ಸಾಲ ನಯಾಪೈಸೆ ಉಳಿಯದಂತೆ ನೋಡಿಕೊಂಡಲ್ಲಿ ಹೆಚ್ಚಿನ ಸಾಲ ವಿತರಿಸಲು ಸರಳವಾಗುತ್ತದೆ ಎಂದ ಡಿಸಿಸಿ ಬ್ಯಾಂಕ್‌ ಅಧ್ಯಕ್ಷರು, ಪಡೆದ ಸಾಲವನ್ನು ಸಕಾಲಕ್ಕೆ ಮರುಪಾವತಿಸಿದಲ್ಲಿ ಸಹಕಾರ ಸಂಘಗಳ ಬೆಳವಣಿಗೆ ಪೂರಕವಾಗುತ್ತದೆಯಲ್ಲದೇ ಹೆಚ್ಚಿನ ಆರ್ಥಿಕ ನೆರವು ನೀಡಲು ಸಾಧ್ಯವಾಗುತ್ತದೆ.

ಹೈನುಗಾರಿಕೆಗೂ ಜತೆಗೆ ತೋಟಗಾರಿಕೆ ಕೃಷಿಗೂ ಉತ್ತೇಜಿಸಲು ಯೋಜನೆ ರೂಪಿಸಲಾಗಿದೆ. ಖರೀದಿದಾರರೇ ರೈತರ ಹೊಲಗಳಿಗೆ ಬರುವಂತೆ ಮಾರುಕಟ್ಟೆ ರೂಪಿಸಲಾಗುತ್ತಿದೆ. ಆದ್ದರಿಂದ ಹೈನುಗಾರಿಕೆ ಕೈಗೊಳ್ಳಲು ರೈತರು ಮುಂದೆ ಬರಬೇಕೆಂದು ಕರೆ ನೀಡಿದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ ಮಾತನಾಡಿ, ಆರ್ಥಿಕವಾಗಿ ಆಧೋಗತಿಗೆ ಇಳಿದಿದ್ದ ಡಿಸಿಸಿ ಬ್ಯಾಂಕ್‌ ಗೆ ರಾಜಕುಮಾರ ಪಾಟೀಲ್‌ ಅಧ್ಯಕ್ಷರಾದ ನಂತರ ಹೆಚ್ಚಿನ ಮುತುವರ್ಜಿ ವಹಿಸಿ ಪುನಶ್ಚೇತನಗೊಳಿಸಿರುವ ಕ್ರಮ ಮಾದರಿಯಾಗಿದೆ. ರೈತರು ಸಹಕಾರಿ ಸಂಘಗಳನ್ನು ತಮ್ಮದೆಂದು ತಿಳಿದರೆ ಅದರಲ್ಲೂ ಸಾಲ ಪಡೆಯುವಾಗಿನ ಉತ್ಸುಕತೆ ಮರಳಿಸುವಾಗಲೂ ಇರಬೇಕೆಂದು ರೈತರಿಗೆ ಕಿವಿ ಮಾತು ಹೇಳಿದರು. ಭೈರಾಮಡಗಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಣಮಂತರಾವ ಹಿರೇಗೌಡ ಮಾತನಾಡಿ, 376 ಹೊಸ ರೈತರಿಗೆ ಸಾಲ ವಿತರಿಸಲಾಗಿದೆಯಲ್ಲದೇ ಎಲ್ಲರಿಗೂ ಸಮನಾಗಿ ಸಾಲ ಹಂಚಿಕೆ ಮಾಡಿರುವುದು ಜಿಲ್ಲೆಯಲ್ಲೇ ಮಾದರಿಯಾಗಿದೆ ಎಂದರು.

ಸಮಾರಂಭದಲ್ಲಿ ಐವರಿಗೆ ಸಾಂಕೇತಿಕವಾಗಿ ಚೆಕ್‌ ವಿತರಿಸಲಾಯಿತು. ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಸುರೇಶ ಸಜ್ಜನ್‌, ನಿರ್ದೇಶಕರಾದ ಸೋಮಶೇಖರ ಗೋನಾಯಕ, ಶರಣಬಸಪ್ಪ ಪಾಟೀಲ್‌ ಅಷ್ಠಗಿ, ಮಹಾಂತಗೌಡ ಎಸ್‌.ವೈ. ಪಾಟೀಲ್‌, ಅಶೋಕ ಸಾವಳೇಶ್ವರ, ಬಾಪುಗೌಡ ಪಾಟೀಲ್‌, ಚಂದ್ರಶೇಖರ ತಳ್ಳಳ್ಳಿ, ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕರಾದ ಚಿದಾನಂದ ನಿಂಬಾಳ, ಗ್ರಾಮದ ಮುಖಂಡರಾದ ಕಲ್ಯಾಣರಾವ ನಾಗೋಜಿ ಸೇರಿದಂತೆ ಇತರರಿದ್ದರು. ಬ್ಯಾಂಕ್‌ ಅ ಧಿಕಾರಿಗಳಾದ ಬಿ.ಜಿ.ಕಲ್ಲೂರ, ಜಯಪ್ರಕಾಶ, ಶರಣು ಭಾಸಗಿ, ಯಲ್ಲಪ್ಪ ಮುರಡಿ, ಭೈರಾಮಡಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು, ರೈತರು, ಗ್ರಾಮಸ್ಥರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.