ಸಚಿವ ಚವ್ಹಾಣಗೆ ಕ್ಷೌರ ಮಾಡದಿರಲು ತೀರ್ಮಾನ


Team Udayavani, Apr 4, 2021, 8:17 PM IST

ಹಗ್ಗನಬವ

ಕಲಬುರಗಿ : ಬೀದರ್‌ ಜಿಲ್ಲೆಯ ಬಸವಕಲ್ಯಾಣ ಉಪಚುನಾವಣೆ ಪ್ರಚಾರ ಸಭೆಯಲ್ಲಿ ಪಶು ಸಂಗೋಪನೆ ಸಚಿವರಾದ ಔರಾದ ಕ್ಷೇತ್ರದ ಶಾಸಕ ಪ್ರಭು ಚವ್ಹಾಣ ಕ್ಷೌರ ವೃತ್ತಿ ಬಗ್ಗೆ ಅವಹೇಳನಕಾರಿ ಪದಪ್ರಯೋಗ ಮಾಡಿದ್ದು, ತಕ್ಷಣವೇ ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ ಅವರಿಗೆ ಯಾರೂ ಕ್ಷೌರ ಮಾಡದಿರುವಂತೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಸುಭಾಷ ಬಾದಾಮಿ ತಿಳಿಸಿದರು.

ಉಪ ಚುನಾವಣೆ ಪ್ರಚಾರದಲ್ಲಿ “ಕೇಂದ್ರ ಮತ್ತು ಕರ್ನಾಟಕದಲ್ಲಿ ನಮ್ಮ ಸರ್ಕಾರ ಇದೆ. ಬಸವಕಲ್ಯಾಣದಲ್ಲಿ ಬೇರೆಯವರು ಗೆದ್ದರೆ ಬಂದರೆ ದಾಡಿ, ಶೇವಿಂಗ್‌ ಮಾಡುತ್ತಾರೇನು’ ಎನ್ನುವ ಮಾತನ್ನು ಹೇಳುವ ಮೂಲಕ ಸಚಿವ ಪ್ರಭು ಚವ್ಹಾಣ ಕ್ಷೌರ ವೃತ್ತಿಗೆ ಅಪಮಾನ ಮಾಡಿದ್ದು, ಅತ್ಯಂತ ಖಂಡನೀಯವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಮ್ಮ ಸಮಾಜದ ಈರಣ್ಣ ಹಡಪದ ಸ್ಪರ್ಧಿಸಿದ್ದಾರೆ.

ಆವರನ್ನು ಉದ್ದೇಶವಾಗಿಟ್ಟುಕೊಂಡು ಇಂತಹ ಮಾತನ್ನಾಡಿದ್ದಾರೆ. ಅಭ್ಯರ್ಥಿ ಗೌರವಯುತ ಸ್ಥಾನದಲ್ಲಿದ್ದು, ಒಂದು ವೃತ್ತಿಗೆ ಅವಮಾನ ಮಾಡುವುದು ಎಷ್ಟು ಸರಿ? ತಮ್ಮ ಪದ ಬಳಕೆ ಬಗ್ಗೆ ಸಚಿವ ಚವ್ಹಾಣ ಬಹಿರಂಗವಾಗಿ ಕ್ಷಮೆ ಕೋರಬೇಕು. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸಚಿವರಿಂದ ರಾಜೀನಾಮೆ ಪಡೆಯಬೇಕು. ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವವರೆಗೂ ರಾಜ್ಯಾದ್ಯಂತ ಉಗ್ರ ಪತ್ರಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸಚಿವರು ತಮ್ಮ ತಪ್ಪಿಗೆ ಕ್ಷಮೆಯಾಚಿಸಬೇಕು. ಅಲ್ಲದೇ ರಾಜೀನಾಮೆ ಕೊಡಬೇಕು. ಅಲ್ಲಿಯ ವರೆಗೆ ರಾಜ್ಯದ ಯಾವ ಕ್ಷೌರಿಕರು ಸಚಿವ ಚವ್ಹಾಣ ಅವರಿಗೆ ಕ್ಷೌರ ಮಾಡುವುದಿಲ್ಲ. ಈ ಬಗ್ಗೆ ರಾಜ್ಯ ಮಟ್ಟದಲ್ಲಿ ತೀರ್ಮಾನವಾಗಿದ್ದು, ಅವರು ಯಾವುದೇ ಜಿಲ್ಲೆಗೆ ಹೋದರೂ ಕ್ಷೌರ ಮಾಡದಂತೆ ನಿಷೇಧ ಹೊರಡಿಸಲಾಗಿದೆ. ಬೇಕಾದರೆ ತಮ್ಮ ಮನೆಯಲ್ಲಿ ತಾವೇ ಕ್ಷೌರ ಮಾಡಿಕೊಳ್ಳಲಿ ಅಥವಾ ಮನೆಯವರಿಂದಲೂ ಕ್ಷೌರ ಮಾಡಿಕೊಳ್ಳಲಿ. ಆದರೆ, ಯಾವ ಕ್ಷೌರಿಕರೂ ಅವರಿಗೆ ಕ್ಷೌರ ಮಾಡುವುದಿಲ್ಲ ಎನ್ನುವ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದರು.

ಸಮಾಜದಿಂದ ಪ್ರತಿಭಟನೆ: ನಂತರ ಜಿಲ್ಲಾಧಿಕಾರಿ ಕಚೇರಿ ಎದುರು ಸವಿತಾ ಸಮಾಜದ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಚಿವ ಪ್ರಭು ಚವ್ಹಾಣ ಕೂಡಲೇ ರಾಜೀನಾಮೆ ನೀಡಬೇಕೆಂದು ಜಿಲ್ಲಾಧಿ ಕಾರಿಗಳ ಮೂಲಕ ರಾಜ್ಯಪಾಲರು, ಮುಖ್ಯಮಂತ್ರಿಗೆ ಮುಖಂಡರು ಮನವಿ ಪತ್ರ ಸಲ್ಲಿಸಿದರು.

ಸಮಾಜದ ಮುಖಂಡರಾದ ಅಂಬರೇಶ ಮಂಗಲಗಿ, ಶರಣಬಸಪ್ಪ ಸೂರ್ಯವಂಶಿ, ಪ್ರಭಾಕರ ಪೆದ್ದರಪೇಟ, ಮದನ ಗದ್ವಾಲ್‌, ರಾಮು ನಾವಲಗಿ, ರಾಜು ಸೇಡಂ, ಗೋವಿಂದ ಚಿಕಲಿಕರ, ರಾಜು ಕೊಳ್ಳಿ, ಶ್ರೀನಿವಾಸ ತಾಂಡೂರಕರ್‌ ಮತ್ತಿತರರು ಪಾಲ್ಗೊಂಡಿದ್ದರು. ಸಚಿವ ಪ್ರಭು ಚವ್ಹಾ ಣ ವಿರುದ್ಧ ಕ್ರಮಕ್ಕೆ ಆಗ್ರಹ ಶಹಾಬಾದ್ ಕ್ಷೌರಿಕ ಸಮಾಜದವರ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ ಸಚಿವ ಪ್ರಭು ಚವ್ಹಾಣ ವಿರುದ್ಧ ಕ್ರಮ ಕೈಗೊಳ್ಳಬೇಕು.

ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಶನಿವಾರ ನಗರದ ಸವಿತಾ ಸಮಾಜ ಸಂಘದಿಂದ ಉಪ ತಹಶೀಲ್ದಾರ್‌ ಮಲ್ಲಿಕಾರ್ಜುನ ರೆಡ್ಡಿ ಮುಖಾಂತರ ಮುಖ್ಯಮಂತ್ರಿ ಯಡಿಯೂರಪ್ಪಗೆ ಮನವಿ ಪತ್ರ ಸಲ್ಲಿಸಿದರು. ನಂತರ ಮಾತನಾಡಿದ ಪ್ರತಿಭಟನಾಕಾರರು, ಬಸವ ಕಲ್ಯಾಣ ಉಪ ಚುನಾವಣೆ ಪ್ರಚಾರ ಸಭೆಯಲ್ಲಿ ಸಚಿವರು ಕ್ಷೌರ ವೃತ್ತಿಯ ಬಗ್ಗೆ ಆಡಿದರೆನ್ನಲಾದ ಅವಹೇಳನಕಾರಿ ಪದಪ್ರಯೋಗಕ್ಕೆ ಕ್ಷಮೆ ಯಾಚಿಸಬೇಕು.

ಅಲ್ಲಿಯವರೆಗೆ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಸವಿತಾ ಸಮಾಜ ಶಹಬಾದ ತಾಲೂಕ ಅಧ್ಯಕ್ಷ ದಶರಥ ಎಸ್‌. ಕೋಟನೂರ, ಪ್ರಧಾನ ಕಾರ್ಯದರ್ಶಿ ವೀರಭದ್ರಪ್ಪಾ ಮೊರೆ, ಉಪಾಧ್ಯಕ್ಷ ನರಸಪ್ಪ ಸತನೂರ, ಖಜಾಂಚಿ ಕಂಟಪ್ಪ ಬಿ.ಕೋಟನೂರ., ಮಲ್ಲು ಅಲ್ಲಿಪುರ್‌, ಶಿವು ಗೋರಕುಂಡಾ, ರವಿ ಹುಲಗೊಳ್‌, ಮುಖಂಡರಾದ ಸಂತೋಷ.ಎಸ್‌.ಕೊಟನೂರ, ರವಿ ಸತನೂರ, ಅಂಜು ಗುರುಜಲ್‌ ಇತರರು ಇದ್ದರು.

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.