ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ತೀರ್ಮಾನ


Team Udayavani, Mar 29, 2021, 8:18 PM IST

ಚವನಬವವ

ಕಲಬುರಗಿ: ಶತಮಾನ ಪೂರೈಸಿದರೂ ಇದೂವರೆಗೂ ಮಹಿಳಾ ಸಾಹಿತಿಯೊಬ್ಬರು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾಗದಿರುವ ವಿಷಯ ಈಗ ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆಯಲ್ಲಿ ತೀವ್ರವಾಗಿ ಚರ್ಚೆಯಾಗುತ್ತಿದ್ದು, ಕಸಾಪಕ್ಕೆ ಮಹಿಳಾ ಸಾರಥ್ಯ ವಹಿಸಲಿ ಎಂದು ಸಾಹಿತಿಗಳು, ಬರಹಗಾರರು, ಸಾಹಿತ್ಯಾಸಕ್ತರು ಒಕ್ಕೊರಲಿನಿಂದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್‌ಗೆ ಮಹಿಳಾ ಸಾಹಿತಿಯೊಬ್ಬರು ಅಧ್ಯಕ್ಷರಾಗಬೇಕೆಂಬ ಅಪೇಕ್ಷೆ ಅನೇಕರದ್ದು. ಆರು ತಿಂಗಳ ಹಿಂದೆಯೇ ಮಹಿಳಾ ಅಧ್ಯಕ್ಷರಾಗಲಿ ಎನ್ನುವ ಕೂಗು ಎದ್ದಿತ್ತು. ನಾಡಿನ ಹಲವಾರು ಜಿಲ್ಲೆಗಳ ಹಿರಿಯ ಸಾಹಿತಿಗಳು ಈ ಬಾರಿ ಮಹಿಳೆ ಅಧ್ಯಕ್ಷರಾಗುವ ಹಿನ್ನೆಲೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಹಿರಿಯ ಲೇಖಕಿ, 30ಕ್ಕೂ ಹೆಚ್ಚು ಕೃತಿಗಳನ್ನು ಬರೆದಿರುವ ಡಾ| ಸರಸ್ವತಿ ಚಿಮ್ಮಲಗಿ ಅವರು ರಾಷ್ಟ್ರ, ರಾಜ್ಯ ಮಟ್ಟದ 29 ಪ್ರಶಸ್ತಿ ಪಡೆದಿದ್ದು, ಕಸಾಪ ರಾಜ್ಯ ಅಧ್ಯಕ್ಷ ಸ್ಥಾನಕ್ಕಾಗಿ ಸ್ಪರ್ಧಿಸುವಂತೆ ಕೋರಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ. ಕಲಬುರಗಿ ಜಿಲ್ಲೆಯಲ್ಲಿ ಸುಮಾರು 36 ವರ್ಷ ಕಾಲ ಶಿಕ್ಷಕಿ, ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಲ್ಲದೇ, ಸಾಹಿತ್ಯ- ಸಾಂಸ್ಕೃತಿಕ ವಾತಾವರಣ ಸೃಷ್ಟಿಸಿದ್ದಾರೆ. ನೇರ ಮತ್ತು ದಿಟ್ಟ ಲೇಖಕಿ ಆಗಿರುವ ಅವರು, ಅನೇಕ ಹೋರಾಟ ಮಾಡಿದ್ದಾರೆ. ಇವರು ಬರೆದ ಕವಿತೆಗಳು ಕರ್ನಾಟಕ ಮತ್ತು ಮಹಾರಾಷ್ಟ್ರದ ನಾಲ್ಕು ವಿಶ್ವವಿದ್ಯಾಲಯಗಳಲ್ಲಿ ಶೈಕ್ಷಣಿಕ ಪಠ್ಯಗಳಾಗಿದ್ದವು. ಇವರು ಬರೆದ ಕೆಲವು ಕವಿತೆಗಳು ಭಾರತೀಯ ಎಲ್ಲ ಭಾಷೆಗಳಲ್ಲಿ ಅನುವಾದವಾಗಿವೆ. ರೇಡಿಯೋ ಮತ್ತು ದೂರದರ್ಶನ ಕೇಂದ್ರದಲ್ಲಿ ಪ್ರಸಾರವಾದ 100ಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿದ್ದಾರೆ.

ಹೀಗಾಗಿ ಇವರು ಕನ್ನಡ ಸಾಹಿತ್ಯ ಪರಿಷತ್‌ ನೇತೃತ್ವ ಹಿಡಿಯಬೇಕೆಂದು ಎಲ್ಲರ ಒಕ್ಕೊರಲಿನ ಒತ್ತಾಸೆಯಾಗಿದೆ. ನಾಡಿನ ಹಿರಿಯ ಲೇಖಕಿಯರು ಮತ್ತು ಮಾಜಿ ಸಚಿವರಾದ ಲೀಲಾದೇವಿ ಆರ್‌. ಪ್ರಸಾದ್‌, ಬಿ.ಟಿ.ಲಲಿತಾನಾಯಕ, ಹಂಪಿ ಕನ್ನಡ ವಿವಿ ಮಾಜಿ ಕುಲಪತಿ ಡಾ| ಮಲ್ಲಿಕಾ ಘಂಟಿ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ವನಮಾಲಾ ಸಂಪನ್ನಕುಮಾರ ಬೆಂಗಳೂರು, ಜನವಾದಿ ಮಹಿಳಾ ಸಂಘಟನೆಯ ಕೆ. ನೀಲಾ ಕಲಬುರಗಿ, ಮಂಡ್ಯ ಜಿಲ್ಲೆಯ ಭಾರತೀಯ ಮಹಿಳಾ ಕಲೆ ಮತ್ತು ಸಾಹಿತ್ಯ ಟ್ರಸ್ಟ್‌ ಅಧ್ಯಕ್ಷೆ ವಿದೂಷಿ ಶಾರದಾ ನಿಂಗೇಗೌಡ, ಉತ್ತರ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ವೀಣಾ ಸಂಕಣ್ಣವರ, ಅಖೀಲ ಭಾರತೀಯ ಕವಿಯಿತ್ರಿಯರ ಸಂಘದ ಅಧ್ಯಕ್ಷೆ ಡಾ| ವಿಜಯಲಕ್ಷ್ಮಿ ಕೋಸಗಿ, ರಾಯಚೂರು ಜಿಲ್ಲೆಯ ಭಗೀರಥ ವಿದ್ಯಾನಿಕೇತನ ಟ್ರಸ್ಟ್‌ ಅಧ್ಯಕ್ಷೆ ಸುಜಾತಾ ಶ್ರೀಕಾಂತರಾವ್‌, ಸಾಹಿತಿಗಳಾದ ಇಂದಿರಾ ಪಾಟೀಲ ಮೈಸೂರು, ನೀಲಗಂಗಾ ಚರಂತಿ ಮಠ ಬೆಳಗಾವಿ, ಕೆ.ಸುನಂದಾ ವಿಜಯಪುರ, ಲೇಖಕಿ ವಿದ್ಯಾವತಿ ಅಂಕಲಗಿ, ಸಾಹಿತಿ ಜ್ಯೋತಿ ಬದಾಮಿ ಬೆಳಗಾವಿ, ಟಿ.ಸಿ. ಮಂಜುಳಾ ತುಮಕೂರು, ಸಾಹಿತಿಗಳಾದ ಕಮಲಾ ಸುದರ್ಶನ ಬೆಂಗಳೂರು, ಮಂಜುಳಾ ಶಿವಾನಂದನ್‌ ಬೆಂಗಳೂರು, ಹಿರಿಯ ಸಾಹಿತಿಗಳಾದ ಹೇಮಾ ಪಟ್ಟಣಶೆಟ್ಟಿ ಧಾರವಾಡ, ಶಶಿಕಲಾ ವಸ್ತ್ರದ ಬೀದರ್‌, ಪುಷ್ಪಾ ಅಯ್ಯಂಗಾರ ಮೈಸೂರು, ಡಾ| ಗೀತಾಂಜಲಿ ಮೈಸೂರು, ಪ್ರೇಮಾಮಣಿ ಮೈಸೂರು, ರಂಗಕರ್ಮಿ ಶೋಭಾ ರಂಜೋಳಕರ್‌, ಕಲಬುರಗಿ ಕಸಾಪ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ, ಸಿ.ಎನ್‌.ಬಾಬಳಗಾಂವ ಕಲಬುರಗಿ, ಸೂರ್ಯಕಾಂತ ಪಾಟೀಲ ಆಳಂದ, ಕಲಬುರಗಿ ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಆಕಾಂಕ್ಷಿ ವಿಜಯಕುಮಾರ ತೇಗಲತಿಪ್ಪಿ ಹಾಗೂ ಮತ್ತಿತರರು ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.