ಕೊರೊನಾ ಇಳಿಕೆ; ಚಟುವಟಿಕೆಗಳಿಗೆ ಮತ್ತ ಷ್ಟು ಸಡಿಲಿಕೆ


Team Udayavani, Oct 26, 2021, 9:30 AM IST

1josna

ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಇಳಿಕೆ ಹಿನ್ನೆಲೆಯಲ್ಲಿ ಮತ್ತುಷ್ಟು ಚಟುವಟಿಕೆಗಳಿಗೆ ಸಡಿಲಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಪರಿಪಾಲನೆ ಮಾಡುವುದರೊಂದಿಗೆ ಕೆಲವು ಚಟುವಟಿಕೆಗಳಿಗೆ ಸಡಿಲಿಕೆ ನೀಡಲಾಗಿದೆ. ಅ.17ರಂದು ತಾಂತ್ರಿಕ ಸಲಹಾ ಸಮಿತಿಯು ರಾಜ್ಯದ ಕೋವಿಡ್‌-19 ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ. ಸಕ್ರಿಯ ಪ್ರಕರಣಗಳು ಸತತವಾಗಿ ಇಳಿಕೆಯಾಗುತ್ತಿರುವುದನ್ನು ಗಮನಿಸಿ ಹೆಚ್ಚಿನ ಚಟುವಟಿಕೆಗಳನ್ನು ಪುನರಾರಂಭಿಸಲು ಶಿಫಾರಸ್ಸು ಮಾಡಿದೆ ಎಂದು ಹೇಳಿದ್ದಾರೆ.

ಜಿಲ್ಲೆಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಆಗಮನದ ಅವಕಾಶ ನೀಡಲಾಗಿದೆ. ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಆರ್‌ಟಿ-ಪಿಸಿಆರ್‌ ಪರೀಕ್ಷಾ ವರದಿ ಪರಿಶೀಲನೆ ಸ್ಥಗಿತಗೊಳಿಸುವುದು. ಬದಲಾಗಿ ಪ್ರಯಾಣಿಕರು ಏರ್‌ ಸುವಿಧಾ ಪೋರ್ಟಲ್‌ನಲ್ಲಿ (ಆರ್‌ಟಿ-ಪಿಸಿಆರ್‌) ಪರೀಕ್ಷಾ ವರದಿಯನ್ನು ಕಡ್ಡಾಯವಾಗಿ ಅಪ್‌ಲೋಡ್‌ ಮಾಡಬೇಕು ಮತ್ತು ಈ ವರದಿಯನ್ನು ಪ್ರಯಾಣಿಕರು ಹೊರಡುವ ಮುಂಚಿತವಾಗಿ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳು ಪರೀಕ್ಷಿಸಿಕೊಳ್ಳುವುದು. ಸ್ವಯಂ ಚಾಲಿತ ಥರ್ಮಲ್‌ ಕ್ಯಾಮರಾಗಳ ಮೂಲಕ ಪ್ರಯಾಣಿಕರ ಮೇಲ್ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಟಾಲಿವುಡ್‌ ನಲ್ಲಿ ಶ್ರೀಲೀಲಾಗೆ ಬೇಡಿಕೆ

ಶಾಲೆಗಳ ಆರಂಭ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಿಂದ ಹೊರಡಿಸಲಾಗುವ ಪ್ರಮಾಣಿತ ಕಾರ್ಯ ವಿಧಾನಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಭೌತಿಕ ತರಗತಿಗಳಿಗೆ ಹಾಜರಾಗಲು ಪೋಷಕರ ಒಪ್ಪಿದ ಪತ್ರ ಪಡೆಯುವುದು ಕಡ್ಡಾಯಗೊಳಿಸಲಾಗಿದೆ. ಶಾಲೆಯ ಪ್ರವೇಶ ದ್ವಾರಗಳಲ್ಲಿ ಕೊರೊನಾ ಲಕ್ಷಣಗಳ ತಪಾಸಣೆ, ತರಗತಿ ಕೋಣೆಗಳ ಸಾಮರ್ಥ್ಯದ ಶೇ.50ರಷ್ಟು ಮಾತ್ರ ಭರ್ತಿ ಮಾಡಬೇಕು. ಹ್ಯಾಂಡ್‌ ಸ್ಯಾನಿಟೈಸರ್‌ಗಳನ್ನು ಒದಗಿಸುವುದು, ಪ್ರಾಯೋಗಿಕವಾಗಿ ಸಾಧ್ಯವಾಗುವಂತೆ ಕನಿಷ್ಟ ಒಂದು ಮೀಟರ್‌ ದೈಹಿಕ ಅಂತರ ಕಾಪಾಡಿಕೊಳ್ಳಬೇಕು. ಪ್ರಮುಖವಾಗಿ ಶಾಲಾ ಪ್ರವೇಶ ಮತ್ತು ನಿರ್ಗಮನದ ಸ್ಥಳಗಳಲ್ಲಿ ಜನದಟ್ಟಣೆ ಉಂಟಾಗದಂತೆ ಕ್ರಮವಹಿಸಬೇಕೆಂದು ಸೂಚಿಸಲಾಗಿದೆ.

ಕೆಲವು ಷರತ್ತುಗೊಳಪಟ್ಟು ಈಜುಕೊಳ ಆರಂಭಿಸಲು ಅನುಮತಿ ನೀಡಲಾಗಿದ್ದು, ಪ್ರತಿ ತಂಡದ ಶೇ.50ರಷ್ಟು ಸಾಮರ್ಥ್ಯಕ್ಕೆ ಅನುಮತಿಸಬೇಕು. ಪ್ರವೇಶ ದ್ವಾರಗಳಲ್ಲಿ ಅನುಮತಿಸಬಹುದಾದ ಈಜುಗಾರರ ಸಂಖ್ಯೆಯನ್ನು ಪ್ರದರ್ಶಿಸಬೇಕು. ಪ್ರವೇಶ ದ್ವಾರದಲ್ಲಿ ಎಲ್ಲ ರೀತಿಯ ಜ್ವರ ಮತ್ತು ಉಸಿರಾಟದ ಲಕ್ಷಣಗಳನ್ನು ಪರೀಕ್ಷಿಸಬೇಕು. ಯಾವುದೇ ರೋಗಲಕ್ಷಣಗಳು ಇಲ್ಲದವರಿಗೆ ಮತ್ತು ಎರಡು ಡೋಸ್‌ ಕೋವಿಡ್‌ 19 ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿದವರಿಗೆ ಮಾತ್ರ ಅವಕಾಶ ನೀಡಬೇಕು. ಪ್ರತಿ ತಂಡದ ನಂತರ – ಈಜುಗಾರರು ಬಳಸುವ ವಿಶ್ರಾಂತಿ ಕೊಠಡಿಗಳು, ಕಾಲುದಾರಿಗಳು ಮತ್ತು ಇತರೆ ಸಾಮಾನ್ಯ ಸ್ಥಳಗಳನ್ನು ಸೋಡಿಯಂ ಹೈಪೋಕ್ಲೋರೈಟ್‌ ಮಿಶ್ರಿತ ದಾವಣನಿಂದ ಸೋಂಕು ರಹಿತಗೊಸಬೇಕು ಎಂದು ಅವರು ತಿಳಿಸಿದ್ದಾರೆ.

ಕಿರಿಯ ಪ್ರಾಥಮಿಕ ಶಾಲೆಗಳು ಆರಂಭವಾದ ಹಿನ್ನೆಲೆಯಲ್ಲಿ ಎರಡು ಡೋಸ್‌ ಕೋವಿಡ್‌ ಲಸಿಕೆ ಪಡೆದಂತಹ ಶಿಕ್ಷಕರು ಮತ್ತು ಸಿಬ್ಬಂದಿಗೆ ಮಾತ್ರ 1ರಿಂದ 5ನೇ ತರಗತಿ ಕೊಠಡಿಗಳಿಗೆ ಪ್ರವೇಶಿಸಲು ಅವಕಾಶ ಕಲ್ಪಿಸಬೇಕು. 50 ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷಕರು ಕಡ್ಡಾಯವಾಗಿ ಫೇಸ್‌ ಶೀಲ್ಡ್‌ ಬಳಸಬೇಕು. -ವಿ.ವಿ.ಜ್ಯೋತ್ಸ್ನಾ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.