ಖರ್ಗೆದ್ವಯರ ವಿರುದ್ಧ ಮಾನನಷ್ಟ ಮೊಕದ್ದಮೆ: ಜಾಧವ್‌ ಎಚ್ಚರಿಕೆ


Team Udayavani, Apr 30, 2019, 12:13 PM IST

gul-2

ಕಲಬುರಗಿ: ತಾವು 50 ಕೋಟಿಗೆ ಬಿಜೆಪಿಗೆ ಮಾರಾಟವಾಗಿದ್ದೇನೆ ಎಂದು ಪದೇ-ಪದೇ ಆರೋಪ ಮಾಡುತ್ತಿರುವ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಚಿವ ಪ್ರಿಯಾಂಕ್‌ ಖರ್ಗೆಯವರು ಆರೋಪ ಸಾಬೀತು ಮಾಡಬೇಕು. ಇಲ್ಲವೇ ಆರೋಪ ಮಾಡುವುದನ್ನು ಕೈಬಿಡಬೇಕು. ಆರೋಪ ಪುನರಾವರ್ತಿಸಿದರೇ ಅಪ್ಪ-ಮಗನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಬೇಕಾಗುತ್ತದೆ ಎಂದು ಬಿಜೆಪಿ ಮುಖಂಡ ಡಾ| ಉಮೇಶ ಜಾಧವ ಎಚ್ಚರಿಸಿದ್ದಾರೆ.

ಅವರು ‘ಉದಯವಾಣಿ’ಯೊಂದಿಗೆ ಮಾತ ನಾಡಿ, ಚಿಂಚೋಳಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಅಪ್ಪ-ಮಗ ಸಹಕಾರ ನೀಡದ ಕಾರಣದಿಂದ ಶಾಸಕ ಸ್ಥಾನಕ್ಕೆ ಹಾಗೂ ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವೆ. ಬಿಜೆಪಿಗೆ ಸೇರಲು ತಮಗೆ ಯಾರು 50 ಕೋಟಿ ಹಣ ನೀಡಿಲ್ಲ. ತಮ್ಮ ಸ್ವಂತ ಇಚ್ಛೆಯಿಂದ ಅಭಿವೃದ್ಧಿಯ ಉದ್ದೇಶದಿಂದ ಪಕ್ಷ ಬಿಟ್ಟಿರುವೆ ಎಂದು ಸ್ಪಷ್ಟಪಡಿಸಿದರು.

ತಾವು ಕಾಂಗ್ರೆಸ್‌ ತ್ಯಜಿಸಿದ ದಿನದಿಂದ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್‌ ಖರ್ಗೆಯವರು ತಾವು 50 ಕೋಟಿಗೆ ಚಿಂಚೋಳಿ ಮಾರಿಕೊಂಡಿದ್ದಾಗಿ ಹೇಳುತ್ತಾ ಬರುತ್ತಿದ್ದಾರೆ. ಅವರ ಬಳಿ ಈ ಬಗ್ಗೆ ಏನು ಸಾಕ್ಷಿ ಇದೆ ಎಂಬುದನ್ನು ಅವರು ಹೊರಗೆ ಹಾಕಲಿ ಎಂದು ಸವಾಲು ಹಾಕಿದರು.

ಮಲ್ಲಿಕಾರ್ಜುನ ಖರ್ಗೆಯವರು 50 ಕೋಟಿ ರೂ. ಅಕ್ರಮ ಆಸ್ತಿ ಮಾಡಿದ್ದಾರೆಂದು ಅವರ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದ್ದು, ಅದರ ಬಗ್ಗೆ ನಾನೇನಾದರೂ ಮಾತನಾಡಿದ್ದೇನಾ? ಎಂದ ಅವರು, ತಮ್ಮ ಬಗ್ಗೆ ಇಲ್ಲ-ಸಲ್ಲದ ಸುಳ್ಳು ಹೇಳುವುದನ್ನು ಬಿಡದಿದ್ದರೇ ಅವರ ಬಗ್ಗೆಯೂ ನಾನು ಮಾತನಾಡಬೇಕಾಗುತ್ತದೆ ಹಾಗೂ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಬೇಕಾಗುತ್ತದೆ ಎಂದು ಗುಡುಗಿದರು.

ಮಲ್ಲಿಕಾರ್ಜುನ ಖರ್ಗೆ ಅಭಿವೃದ್ದಿಯ ಹರಿಕಾರ ಎಂದು ಹೇಳುತ್ತಾರೆ. ಆದರೆ ಗುರಮಿಠಕಲ್ ಕ್ಷೇತ್ರದಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ. ಅಲ್ಲಿನ ಶೇ.80 ರಷ್ಟು ಜನರು ಗುಳೆ ಹೋಗುತ್ತಿದ್ದಾರೆ.ಆದರೆ ಅವರು ಚಿಂಚೋಳಿ ತಾಲೂಕಿನಲ್ಲಿ ಗುಳೆ ಹೋಗುತ್ತಿದ್ದಾರೆ ಎಂದು ಪದೇ-ಪದೇ ಹೇಳುತ್ತಾರೆ. ಚಿಂಚೋಳಿಯಲ್ಲಿರುವವರು ಗುಳೆ ಹೋಗಲು ತಾವು ಕಾರಣರಲ್ಲ. 50 ವರ್ಷ ಅಧಿಕಾರದಲ್ಲಿದ್ದ ಖರ್ಗೆಯವರು ಕಾರಣ ಎಂದು ಟೀಕಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡು 9 ತಿಂಗಳಾದರೂ ಪ್ರಿಯಾಂಕ್‌ ಖರ್ಗೆ ಒಮ್ಮೆಯೂ ಚಿಂಚೋಳಿಗೆ ಬಂದಿಲ್ಲ. ಅಲ್ಲಿನ ಜನರ ಕಷ್ಟ ಸುಖಕ್ಕೆ ಸ್ಪಂದಿಸಿಲ್ಲ. ಕೊಂಚಾವರಂನಲ್ಲಿ ಮಕ್ಕಳ ಮಾರಾಟ ಪ್ರಕರಣ ನಡೆದಾಗ ಅಲ್ಲಿಗೆ ಭೇಟಿ ನೀಡಿ ಅವರು ವಿವರ ಪಡೆದಿಲ್ಲ. ತಾವು ಚಿಂಚೋಳಿಗೆ ತೆರಳಿ ವರದಿ ಪಡೆದು ಈ ಬಗ್ಗೆ ಚರ್ಚೆ ನಡೆಸಲು ಸಭೆ ಕರೆಯುವಂತೆ ಎಷ್ಟು ಬಾರಿ ಮನವಿ ಮಾಡಿದರೂ ಅವರು ಸ್ಪಂದಿಸಿಲ್ಲ. ಇದು ಅವರ ಕಾಳಜಿ ಎಂದು ವ್ಯಂಗ್ಯವಾಡಿದರು.

ಸುಭಾಷ ರಾಠೊಡ ಹೊರಗಿನವರು
ಕಾಂಗ್ರೆಸ್‌ ಅಭ್ಯರ್ಥಿ ಸುಭಾಷ ರಾಠೊಡರು ಚಿಂಚೋಳಿ ಕ್ಷೇತ್ರದವರಲ್ಲ, ಆಳಂದನವರು. ಆದರೆ ತಮ್ಮನ್ನು ಹೊರಗಿನವರು ಎನ್ನುತ್ತಾರೆ. ಸುಭಾಷ ರಾಠೊಡ ಖರ್ಗೆಯವರ ಕಾಲಿಗೆ ಬಿದ್ದು ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿ, ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಖರ್ಗೆಯವರು ಯಾರು ತಮ್ಮ ಕಾಲಿಗೆ ಬಿಳುತ್ತಾರೆ ಅವರಿಗೆ ಟಿಕೆಟ್ ನೀಡುತ್ತಾರೆ ಎಂಬುದಕ್ಕೆ ನಿದರ್ಶನವಾಗಿದೆ. ಚಿಂಚೋಳಿಯ ಜನತೆ ಯಾರು ತಮ್ಮ ಹಿತ ಬಯಸುವವರು ಹಾಗೂ ಯಾರು ಅಲ್ಲ ಎಂಬುದರ ಬಗ್ಗೆ ಚಿಂತಿಸಿ ಮತ ನೀಡಲಿದ್ದಾರೆ ಎಂಬ ಉಮೇಶ ಜಾಧವ್‌ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.