ಬಡ್ಡಿ ಮನ್ನಾಕ್ಕೆ ಆಗ್ರಹಿಸಿ ಬೆಂಗಳೂರಿಗೆ ನಿಯೋಗ
Team Udayavani, Dec 15, 2019, 2:27 PM IST
ಕಲಬುರಗಿ: ಕಲಬುರಗಿ ಮತ್ತು ಯಾದಗಿರಿ ಡಿಸಿಸಿ ಬ್ಯಾಂಕ್ನಲ್ಲಿ ಟ್ರಾಕ್ಟರ್, ಪೈಪ್ಲೈನ್ ಮತ್ತು ಪಾಲಿಹೌಸ್ ಹಾಗೂ ತೋಟಗಾರಿಕೆ ಬೆಳೆಗೆ ಪಡೆದ ದೀರ್ಘಾವಧಿ ಸಾಲದ ಒಟ್ಟಾರೆ 39 ಕೋಟಿ ರೂ. ಬಡ್ಡಿ ಮನ್ನಾಗೊಳಿಸುವಂತೆ ರವಿವಾರ ಬೆಂಗಳೂರಿಗೆ ನಿಯೋಗ ತೆರಳು ನಿರ್ಧರಿಸಲಾಗಿದೆ.
ಶನಿವಾರ ನಗರದ ಹಿಂದಿ ಪ್ರಚಾರ ಸಭೆಯಲ್ಲಿ ನಡೆದ ಸಾಲಗಾರರ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ, ರವಿವಾರ ಬೆಂಗಳೂರಿಗೆ ಹೊರಟು ಸೋಮವಾರ ಬೆಂಗಳೂರಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಹಕಾರ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಸಂಬಂಧಪಟ್ಟ ಸಚಿವರಿಗೆ ಮನವಿ ಸಲ್ಲಿಸಿ, ಬಡ್ಡಿ ಮನ್ನಾಮಾಡುವಂತೆ ನಿಯೋಗ ತೆರಳಲು ನಿರ್ಧರಿಸಲಾಯಿತು. ಸತತ ಮೂರು ವರ್ಷಗಳಿಂದ ಬರಗಾಲದ ಪರಿಸ್ಥಿತಿ ಇದ್ದುದರಿಂದ ರೈತರು ಕಷ್ಟದಲ್ಲಿದ್ದಾರೆ. ರೈತರು ಬಡ್ಡಿ ಕಟ್ಟುವ ಸ್ಥಿತಿಯಲ್ಲಿಲ್ಲ. ಆದ್ದರಿಂದ ಬಡ್ಡಿ ಮನ್ನಾಮಾಡುವುದು ಅವಶ್ಯವಾಗಿದೆ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಶರಣಬಸವಪ್ಪ ಪಾಟೀಲ ಅಷ್ಠಗಾ ರೈತ ಮುಖಂಡರಾದ ಚಂದ್ರಶೇಖರ ಹರಸೂರ, ಬಸವರಾಜ ಇಂಗಿನ್ ಹೇಳಿದರು.
ಪ್ರಮುಖರಾದ ಅಶೋಕ ಗುರೂಜಿ, ರಾಜೇಂದ್ರ ಕರೆಕಲ್, ಎಂ.ಎಸ್. ಪಾಟೀಲ ನರಿಬೋಳ, ಜಂಡೆಕರ್ ಎಸ್.ಪಿ., ಸೇರಿಕಾರ, ಬಸವರಾಜ ಪಾಟೀಲ ಅಂಕಲಗಿ ಹಾಗೂ ಇನ್ನಿತರ ರೈತರು ಭಾಗವಹಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ