ಸಿಸಿ ರಸ್ತೆ ನಿರ್ಮಾಣಕ್ಕೆ ಆಗ್ರಹ
Team Udayavani, Aug 18, 2022, 4:16 PM IST
ಜೇವರ್ಗಿ: ಪಟ್ಟಣದ ವಾರ್ಡ ನಂ.2ರ ನಿಜಶರಣ ಅಂಬಿಗರ ಚೌಡಯ್ಯ ಬಡಾವಣೆಯ ಮಹಿಳೆಯರಿಗೆ ಶೌಚಾಲಯಕ್ಕೆ ತೆರಳುವ ರಸ್ತೆ ತೀರಾ ಹದಗೆಟ್ಟು ಹೋಗಿದ್ದು, ಕೂಡಲೇ ಸಿಸಿ ರಸ್ತೆ ನಿರ್ಮಾಣ ಮಾಡುವಂತೆ ಒತ್ತಾಯಿಸಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನವ ತರುಣ ಸಂಘದ ವತಿಯಿಂದ ತಹಶೀಲ್ದಾರ್ಗೆ ಮನವಿ ಪತ್ರ ಸಲ್ಲಿಸಲಾಯಿತು.
ವಾರ್ಡ್ ನಂ.2 ರ ಚೌಡಯ್ಯ ನಗರದ ಮಹಿಳೆಯರಲ್ಲದೇ ಸುತ್ತಮುತ್ತಲಿನ ಬಡಾವಣೆ ಮಹಿಳೆಯರಿಗಾಗಿ ಅಂಚೆ ಕಚೇರಿ ಕಟ್ಟಡದ ಹಿಂಬದಿಯಲ್ಲಿ ಮಹಿಳಾ ಶೌಚಾಲಯ ನಿರ್ಮಿಸಲಾಗಿದೆ. ಆದರೆ ಸಮರ್ಪಕ ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಮಳೆಗಾಲದಲ್ಲಿ ಮಹಿಳೆಯರು ತೊಂದರೆಪಡುವಂತಾಗಿದೆ. ಆದ್ದರಿಂದ ಕೂಡಲೇ ಸಿಸಿ ರಸ್ತೆ ನಿರ್ಮಾಣ ಮಾಡುವ ಮೂಲಕ ಮಹಿಳೆಯರಿಗೆ ಅನುಕೂಲ ಮಾಡಿಕೊಡಬೇಕು. ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆಗಾಲದಲ್ಲಿ ಮಳೆ ನೀರು ನಿಜಶರಣ ಅಂಬಿಗರ ಚೌಡಯ್ಯ ದೇವಸ್ಥಾನದ ಒಳಗೆ ಬರುತ್ತಿದ್ದು, ಸಂಬಂಧಪಟ್ಟವರು ಕೂಡಲೇ ಚರಂಡಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸೂಕ್ರ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ್ದೇ ಆದಲ್ಲಿ ತಹಶೀಲ್ದಾರ್ ಕಚೇರಿ ಎದುರು ಮಹಿಳೆಯರೊಂದಿಗೆ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಮನವಿ ಪತ್ರದ ಮೂಲಕ ಎಚ್ಚರಿಸಿದರು.
ನವ ತರುಣ ಸಂಘದ ಅದ್ಯಕ್ಷ ಮರೆಪ್ಪ ಕೋಳಕೂರ, ಭೀಮಾಶಂಕರ ಬಸವಪಟ್ಟಣ, ಕರಣಪ್ಪ ಶಹಬಾದಿ, ಸಾಯಬಣ್ಣ ಗಸ್ತಗಾರ, ರಾಜು ತಳವಾರ, ಚಂದಪ್ಪ ಗಂವ್ಹಾರ, ಸಾಧು ನಾಟಿಕಾರ, ರಾಜು ಸರಗರ, ಸಿದ್ಧು ತಳವಾರ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ