ಸಮಾನ ವೇತನಕ್ಕೆ ಆಗ್ರಹ
Team Udayavani, Feb 23, 2018, 11:42 AM IST
ಜೇವರ್ಗಿ: ಕೇಂದ್ರಿಯ ವಿದ್ಯಾಲಯಗಳಲ್ಲಿ ಶಿಕ್ಷಕರಿಗೆ ನೀಡುವ ವೇತನದಂತೆ ರಾಜ್ಯ ಸರ್ಕಾರ ಧೀನದ ಶಿಕ್ಷಕರಿಗೂ ಸಮಾನ ವೇತನ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘ ತಾಲೂಕು ಘಟಕದ ವತಿಯಿಂದ ತಹಶೀಲ್ದಾರ್ ಬಸಲಿಂಗಪ್ಪ ನಾಯ್ಕೋಡಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ದೇಶದ ಬಹುತೇಕ ರಾಜ್ಯಗಳು ಕೇಂದ್ರ ಸರ್ಕಾರ ನಡೆಸುವ ಕೇಂದ್ರಿಯ ವಿದ್ಯಾಲಯ, ನವೋದಯ ವಿದ್ಯಾಲಯಗಳಲ್ಲಿ ಶಿಕ್ಷಕರಿಗೆ ನೀಡುವ ವೇತನವನ್ನು ರಾಜ್ಯ ಸರ್ಕಾರದ ಅಧೀನ ಶಾಲೆಗಳ ಶಿಕ್ಷಕರಿಗೂ ನೀಡುತ್ತಿದ್ದು, ಕರ್ನಾಟಕ ರಾಜ್ಯದಲ್ಲಿ ಇದನ್ನು ಜಾರಿಗೆ ತರುವಂತೆ ಮಾಧ್ಯಮಿಕ ಶಿಕ್ಷಕರ ಒತ್ತಾಯಿಸುತ್ತಾ ಬಂದರೂ ಯಾವುದೇ ಪ್ರಯೋಜನವಾಗಿಲ್ಲ. 6ನೇ ವೇತನ ಆಯೋಗ ಕರ್ನಾಟಕ ಸರ್ಕಾರಿ ನೌಕರರಿಗೂ ಶೇ.30ರಷ್ಟು ವೇತನ ಹೆಚ್ಚಳ ಮಾಡಲು ವರದಿ ನೀಡಿದೆ ಎಂದು ಹೇಳಲಾಗುತ್ತಿದ್ದರೂ ಕೇಂದ್ರ ಹಾಗೂ ರಾಜ್ಯದ ಶಿಕ್ಷಕರ ವೇತನದಲ್ಲಿ ಶೇ.67ರಷ್ಟು ವ್ಯತ್ಯಾಸವಿದೆ. ಆದ್ದರಿಂದ ಶಿಕ್ಷಕರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ನಡೆಸುವ ಶಾಲೆಗಳ ಶಿಕ್ಷಕರಿಗೆ ನೀಡುವ ವೇತನವನ್ನು ರಾಜ್ಯ ಸರ್ಕಾರ ನಡೆಸುವ ಶಾಲೆಗಳ ಶಿಕ್ಷಕರಿಗೂ ನೀಡಲು ಮನವಿ ಪತ್ರದ ಮೂಲಕ ಆಗ್ರಹಿಸಲಾಯಿತು.
ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘ ತಾಲೂಕು ಘಟಕದ ಅಧ್ಯಕ್ಷ ಅಶೋಕ ಜೋಶಿ, ವಿಭಾಗ ಪ್ರಮುಖ ಮಹೇಶ ಬಸರಕೋಡ, ಎಸ್.ಬಸಣ್ಣ, ಬಸವರಾಜ ಹದಗಲ್, ಪಂಡಿತ ನೆಲ್ಲಗಿ, ಧನಸಿಂಗ್ ರಾಠೊಡ, ಅಮೋಪ್ಪ, ಮಲ್ಲಿಕಾರ್ಜುನ, ಎಸ್.ಎಸ್.ಗೊಂಬಿಮಠ, ಎಸ್.ಆರ್. ಪರಸಗೊಂಡ, ಸಿದ್ದಪ್ಪ ಕಕ್ಕಳಮೇಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ