ಆಳಂದ ಬರ ತಾಲೂಕು ಘೋಷಣೆಗೆ ಸರ್ಕಾರಕ್ಕೆ ಒತ್ತಾಯ


Team Udayavani, Oct 6, 2018, 10:53 AM IST

gul-4.jpg

ಆಳಂದ: ಮಳೆ, ಬೆಳೆ ಇಲ್ಲದೆ ಜನ ಜಾನುವಾರ ಸಂಕಷ್ಟದಲ್ಲಿದ್ದರೂ ಸಹಿತ ಬರ ಘೋಷಣೆಯಿಂದ ತಾಲೂಕನ್ನು ಕೈಬಿಟ್ಟಿರುವ ಸರ್ಕಾರದ ಕ್ರಮ ಸರಿಯಲ್ಲ. ಆದ್ದರಿಂದ ಕೂಡಲೇ ಬರ ಘೋಷಣೆ ಕೈಗೊಂಡು ಪರಿಹಾರ
ಒದಗಿಸಬೇಕು ಎಂದು ತಾಪಂ ಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರು ಒತ್ತಾಯಿಸಿದರು.

ತಾಪಂ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕರೆದ ತಾಪಂ ಅಧ್ಯಕ್ಷೆ ನಾಗಮ್ಮ ಅಶೋಕ ಗುತ್ತೇದಾರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸಹಾಯಕ ಕೃಷಿ ನಿರ್ದೇಶಕ ಶರಣಗೌಡ ವರದಿ ಮಂಡಿಸುವಾಗ ಮಧ್ಯ ಪ್ರವೇಶಿಸಿದ ಸದಸ್ಯರು ಬರ ಘೋಷಣೆಗಾಗಿ ಸರ್ಕಾರವನ್ನು ಆಗ್ರಹಿಸಿದರು.

ಜೂನ್‌ನಿಂದ ಆಗಸ್ಟ್‌ ವರೆಗೆ ನಿರೀಕ್ಷಿತ ಮಳೆ ಬಂದ ಅಂಕಿಅಂಶಗಳಿಂದಾಗಿ ತಾಲೂಕು ಬರಘೋಣೆ ಆಗಿಲ್ಲ.
ನಂತರ ಮಳೆ ಕೊರತೆಯಾಗಿ ಬೆಳೆ ಬಾಡುತ್ತಿವೆ. ಕೆಲವು ಕಡೆ ಉತ್ತಮ ಬೆಳೆಯಾಗಿಲ್ಲ ಎಂದು ಸಹಾಯಕ ಕೃಷಿ ನಿರ್ದೇಶಕ ಶರಣಗೌಡ ಪಾಟೀಲ ಹೇಳಿದಾಗ ಸದಸ್ಯರು ಆಕ್ಷೇಪಿಸಿ ಬರ ಘೋಷಣೆ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ಆಗ ಮಧ್ಯ ಪ್ರವೇಶಿಸಿದ ಸದಸ್ಯ ದತ್ತಾತ್ರೇಯ ದುರ್ಗದ, ಬಸವರಾಜ ಸಾಣಕ ನಿಂಬರಗಾ, ಮಾದನಹಿಪ್ಪರಗಾ ಹೋಬಳಿಯಲ್ಲಿ ಮಳೆಯ ಕೊರತೆಯಿಂದ ಬೆಳೆ ಬಾರದೆ ನಷ್ಟವಾಗಿದ್ದು, ಬರ ಕುರಿತು ಸರ್ಕಾರಕ್ಕೆ ನೈಜ ವರದಿ ನೀಡುವಂತೆ ಆಗ್ರಹಿಸಿದರು.

ಅಧಿಕಾರಿ ಶರಣಗೌಡ ಇಲಾಖೆ ವರದಿ ಮಂಡಿಸಿ, ನಾಲ್ಕು ವಿಧಗಳಲ್ಲಿ 541 ಕೃಷಿ ಹೂಂಡ ನಿರ್ಮಾಣಕ್ಕೆ ಅವಕಾಶವಿದ್ದು,
ರೈತರು ಅರ್ಜಿ ಸಲ್ಲಿಸಬೇಕು. ಸ್ಪಿಂಕ್‌ರ್‌ಗೆ ಶೇ. 90 ರಷ್ಟು ಸಹಾಯಧನವಿದೆ ಎಂದು ಮಾಹಿತಿ ಒದಗಿಸಿದರು.
ಯಾವುದೇ ಇಲಾಖೆ ಅಧಿ ಕಾರಿಗಳು ತಮ್ಮ ಇಲಾಖೆಗೆ ಸರ್ಕಾರ ನೀಡಿದ ಯೋಜನೆಗಳ ಅನುಷ್ಠಾನದ ಕುರಿತು
ಪೂರ್ಣವಾಗಿ ಲಿಖೀತ ಮತ್ತು ಸ್ಪಷ್ಟ ವರದಿಯನ್ನು ಸಭೆಗೆ ನೀಡಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅನಿತಾ ಕೊಂಡಾಪುರ ಅಧಿಕಾರಿಗಳಿಗೆ ತಾಕೀತು ನೀಡಿದರು.

ಸಿಡಿಪಿಒ ಶ್ರೀಕಾಂತ ಮೇಂಗಜಿ ಇಲಾಖೆ ವರದಿ ಮಂಡಿಸಿದರು. ಅಂಗನವಾಡಿ ಕೇಂದ್ರಗಳಲ್ಲಿ ಸೌಲಭ್ಯಗಳನ್ನು
ಸಮಪರ್ಕವಾಗಿ ವಿತರಿಸಲು ಕ್ರಮಕೈಗೊಳ್ಳಬೇಕು ಎಂದು ಸದಸ್ಯ ದೀಪಕ ಹೊಡ್ಲ್, ಬಸವರಾಜ ಸಾಣಕ, ಸಿದ್ಧರಾಮ
ವಾಘಮೋರೆ ಸಭೆ ಗಮನಕ್ಕೆ ತಂದರು.

ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿ ಮೌಲಾಲಿ ವರದಿ ಮಂಡಿಸುವಾಗ ಉಪಾಧ್ಯಕ್ಷ ಗುರುನಾಥ ಪಾಟೀಲ, ಸದಸ್ಯೆ
ಸುಜಾತಾ ಖೋಬರೆ, ಸಂಗೀತಾ ರಾಠೊಡ ಅವರುಗಳು ಮಾತನಾಡಿ ಅಧಿಕಾರಿಗಳು ಸುಳ್ಳು ದಾಖಲೆ ನೀಡುತ್ತಿದ್ದಾರೆ
ಎಂದು ಹರಿಹಾಯ್ದರು. ಈ ಕುರಿತು ಲಿಖೀತವಾಗಿ ಮಾಹಿತಿ ಒದಗಿಸುವಂತೆ ಇಒ ಅನಿತಾ ಆದೇಶಿಸಿದರು.

ತಾಲೂಕು ತೋಟಗಾರಿಕೆ ಅಧಿಕಾರಿ ಸುರೇಂದ್ರನಾಥ ಇಲಾಖೆ ಯೋಜನೆ ಸೌಲಭ್ಯಗಳ ಕುರಿತು ವಿವರಿಸಿದರು. ಕ್ಷೇತ್ರ ಶಿಕ್ಷಣಾ ಧಿಕಾರಿ ದೊಡ್ಡರಂಗಪ್ಪ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆಯಲ್ಲೇ ತಾಲೂಕು ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದರು. ಈ ವೇಳೆ ರುದ್ರವಾಡಿ ಶಾಲೆಗೆ ಶಿಕ್ಷಕರ ಕೊರತೆಯಿದೆ ಎಂದು ಸದಸ್ಯೆ ಸುಜಾತಾ ಖೋಬರೆ ಶಿಕ್ಷಣಾ ಧಿಕಾರಿ ಗಮನಕ್ಕೆ ತಂದರು.

ವ್ಯವಸ್ಥಾಪಕ ಬಸವರಾಜ ಪಾಟೀಲ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭು ಸರಸಂಬಿ, ಸದಸ್ಯ ಶಿವಪ್ಪ ವಾರಿಕ, ಮಹಾದೇವಿ ಘಂಟೆ, ಪಾರ್ವತಿ ಶಿವರಾಜ ಮಹಾಗಾಂವ ಹಾಗೂ ಸದಸ್ಯರು ಹಾಜರಿದ್ದರು. ಡಾ| ಸಂಜಯ ರೆಡ್ಡಿ, ಜಿಪಂ ಅಧಿಕಾರಿಗಳು ಹಾಜರಿದ್ದರು. 

ಟಾಪ್ ನ್ಯೂಸ್

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.