ಕೊಲೆ ಆರೋಪಿಗಳ ಬಂಧನಕ್ಕೆ ಒತ್ತಾಯ
Team Udayavani, Feb 24, 2022, 11:01 AM IST
ಆಳಂದ: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಗ್ರಾಮದವರಾದ ಭಾರತೀಯ ಅರೆಸೇನಾ ಪಡೆಯಲ್ಲಿ ಬಿಎಸ್ಫ್ ಸೇವಾ ನಿರತರಾಗಿರುವ ಯೋಧ ಅಮರೇಶ ಅವರ ತಾಯಿ ಹತ್ಯೆಯಾಗಿರುವ ಕುರಿತು ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೈನಿಕರ ಅಭಿವೃದ್ಧಿ ಸಂಘ ಒತ್ತಾಯಿಸಿದೆ.
ತಹಶೀಲ್ದಾರ್, ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವರಿಗೆ ಸಂಘದ ಅಧ್ಯಕ್ಷ ಮಾಣಿಕರಾವ್ ಎಸ್. ಬಿರಾದಾರ ನೇತೃತ್ವದಲ್ಲಿ ಪ್ರಮುಖರು ಈ ಕುರಿತು ಮನವಿ ಸಲ್ಲಿಸಿ, ಒತ್ತಾಯಿಸಿದರು.
ಯೋಧ ಅಮರೇಶ ರಜೆ ಮೇಲೆ ಊರಿಗೆ ಬಂದಾಗ ಅವರ ಮೇಲೆ ಹಲ್ಲೆ ನಡೆಸಿದ್ದಲ್ಲದೇ, ಅವರ ತಾಯಿಯನ್ನು ಕೊಲೆ ಮಾಡಲಾಗಿದೆ. ಆದ್ದರಿಂದ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಸಂಘದ ಪ್ರಮುಖ ಸಿದ್ಧಲಿಂಗಪ್ಪ ಮಲಶೆಟ್ಟಿ, ಈರಣ್ಣಾ ಹೂಗಾರ, ಹನುಮಂತ ಪಾಟೀಲ, ಶಶಿ ಯಳಮೇಲಿ, ರಾಜು ಕೋರಳ್ಳಿ ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ