ಸಕ್ರಿಯ ವಿರೋಧ ಪಕ್ಷ ದಿಂದ ಪ್ರಜಾಪ್ರಭುತ್ವ ಗಟ್ಟಿ


Team Udayavani, Aug 6, 2022, 2:51 PM IST

5party

ಶಹಾಬಾದ: ಸಕ್ರಿಯ ವಿರೋಧ ಪಕ್ಷ ಹಾಗೂ ಸಕ್ರಿಯವಾಗಿ, ಸ್ವತಂತ್ರವಾಗಿ ಮತ್ತು ಸ್ವಾಭಿಮಾನಿಗಳಾಗಿ ಕೆಲಸ ಮಾಡುವ ಪತ್ರಕರ್ತರು ಇದ್ದಾಗ ಮಾತ್ರ ಪ್ರಜಾಪ್ರಭುತ್ವದ ಆಶಯಗಳು ಗಟ್ಟಿಯಾಗಿ ಉಳಿಯುತ್ತವೆ ಎಂದು ಮಾಜಿ ಸಚಿವ ಹಾಗೂ ಶಾಸಕರಾದ ಪ್ರಿಯಾಂಕ್‌ ಖರ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು.

ಶುಕ್ರವಾರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಪತ್ರಿಕಾದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಾಧ್ಯಮಗಳ ತನಿಖಾ ವರದಿಗಳಿಂದಾಗಿ ಸರ್ಕಾರಗಳ ನೀತಿಗಳು ಬದಲಾಗಿವೆ. ರಾಜಕಾರಣಿಗಳು ರಾಜಿನಾಮೆ ನೀಡಿದ್ದಾರೆ. ಭ್ರಷ್ಟಾಚಾರ ಬಯಲಿಗೆ ಬಂದಿವೆ. ಪಿಎಸ್‌ಐ ಪರೀಕ್ಷಾ ಅಕ್ರಮವೂ ಬಯಲಿಗೆ ಬಂದು ಅನೇಕರು ಬಂಧನಕ್ಕೊಳಗಾದರು. ಇದು ಮಾಧ್ಯಮಗಳ ನಿಜವಾದ ಶಕ್ತಿ ಎಂದರು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸದಸ್ಯ ಡಾ| ಶಿವರಂಜನ್‌ ಸತ್ಯಂಪೇಟೆ ಮಾತನಾಡಿ, ಪತ್ರಕರ್ತರು ಏಕತಾನತೆ ಸುದ್ದಿಗಳ ಕಡೆಗೆ ಗಮನ ಕೊಡದೇ ವಿಭಿನ್ನ ತರದ ಸುದ್ದಿಗಳ ಕಡೆಗೆ ಗಮನ ಕೊಡಬೇಕು ಎಂದು ಸಲಹೆ ನೀಡಿದರು.

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಮಾತನಾಡಿ, ಖರ್ಗೆ ಚಿತ್ತಾಪುರ ಪಟ್ಟಣದ ಪತ್ರಕರ್ತರಿಗಾಗಿ ನಿವೇಶನ ಒದಗಿಸಲು ಎರಡು ಎಕರೆ ಜಮೀನು ಕೊಟ್ಟಿದ್ದಾರೆ. ಹಾಗೆ ಪತ್ರಿಕಾ ಭವನ ನಿರ್ಮಾಣಕ್ಕಾಗಿ 40×80 ಅಳತೆಯ ನಿವೇಶನ ಹಾಗೂ 50ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ತಿಳಿಸಿದರು.

ಕ.ರಾ.ರ.ಸಾ.ಸಂ ಮಾಜಿ ಅಧ್ಯಕ್ಷ ಇಲಿಯಾಸ್‌ ಭಾಗವಾನ, ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಪತ್ರಕರ್ತ ಸಂಘದ ಅಧ್ಯಕ್ಷ ರಘುವೀರ್‌ಸಿಂಗ್‌ ಠಾಕೂರ ಮಾತನಾಡಿದರು.

ಬಿಜೆಪಿ ಮುಖಂಡ ಗೋರಕನಾಥ ಶಾಖಾಪುರ, ಕಾ.ನಿ.ಪ.ಸಂ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್‌ ಠಾಕೂರ, ಕಾ.ನಿ.ಪ.ಸಂ ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ, ಕಾ.ನಿ.ಪ.ಸಂ ಜಿಲ್ಲಾ ಉಪಾಧ್ಯಕ್ಷ ದೇವಿಂದ್ರಪ್ಪ ಅವಂಟಿ, ತಹಶೀಲ್ದಾರ್‌ ಸುರೇಶ ವರ್ಮಾ, ಜಿಪಂ ಮಾಜಿ ಸದಸ್ಯ ಶಿವಾನಂದ ಪಾಟೀಲ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಡಾ| ರಷೀದ್‌ ಮಚಂìಟ್‌, ಕಾಂಗ್ರೆಸ್‌ ಮುಖಂಡ ಡಾ| ರವಿ ಚವ್ಹಾಣ, ನಗರ ಯೋಜನಾ ಪ್ರಾ ಧಿಕಾರದ ಅಧ್ಯಕ್ಷ ಕನಕಪ್ಪ ದಂಡಗುಲಕರ್‌, ಜೆಡಿಎಸ್‌ ಅಧ್ಯಕ್ಷ ರಾಜ ಮಹಮ್ಮದ್‌, , ಅಡತ್‌ ಹಾಗೂ ದಾಲಮಿಲ್‌ ಸಂಘದ ಅಧ್ಯಕ್ಷ ಶಿವಕುಮಾರ ಇಂಗನಶೆಟ್ಟಿ, ಎಪಿಎಂಸಿ ಸದಸ್ಯ ವಿಶ್ವಾರಾಧ್ಯ ಬಿರಾಳ, ಚಿತ್ತಾಪುರ ಎಪಿಎಂಸಿ ಅಧ್ಯಕ್ಷ ಸಿದ್ಧುಗೌಡ ಅಫಜಲಪುರಕರ್‌, ನಗರಸಭೆ ಪೌರಾಯುಕ್ತ ಬಸವರಾಜ ಹೆಬ್ಟಾಳ, ತಾಪಂ ಇಒ ಡಾ| ಬಸಲಿಂಗಪ್ಪ ಡಿಗ್ಗಿ, ನಾಗರಾಜ ದಂಡಾವತಿ ಮತ್ತಿತರರಿದ್ದರು.

ರಾಜು ಕೋಬಾಳ ಮತ್ತು ದಶರಥ ಕೋಟನೂರ ನಾಡಗೀತೆ ಹಾಡಿದರು, ಲೋಹಿತ್‌ ಕಟ್ಟಿ ನಿರೂಪಿಸಿದರು, ಮಲ್ಲಿನಾಥ ಪಾಟೀಲ ಸ್ವಾಗತಿಸಿದರು, ಶಿವಕುಮಾರ ಕುಸಾಳೆ ವಂದಿಸಿದರು.

ಕ್ವಾಲಿಟಿ ಆಫ್‌ ಜರ್ನಲಿಸಂ ಕುರಿತಂತೆ ಮಾತನಾಡುವುದೇ ಬೇಡದಂತಾಗಿದೆ. ಮಾಧ್ಯಮಗಳು ಉದ್ಯಮಗಳಾಗಿ ಬದಲಾಗಿವೆ. ಜಾಹೀರಾತಿನ ಮೂಲಕ ಆರ್ಥಿಕತೆ ನಿರೀಕ್ಷೆ ಮಾಡುತ್ತಿರುವುದರಿಂದಾಗಿ ಕ್ವಾಲಿಟಿ ಕಡಿಮೆಯಾಗಿದೆ. ಇದರಲ್ಲಿ ಜನಪ್ರತಿನಿಧಿಗಳ ಪಾಲು ಇದೆ. ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗವೂ ದಾರಿಯಲ್ಲಿ ನಡೆಯಬೇಕು. ಕಾರ್ಯಾಂಗ ಜೀ ಹೂಜೂರ್‌ ಕೆಲಸ ಮಾಡುತ್ತಿದೆ. ನ್ಯಾಯಾಂಗ ಕಾರ್ಯಾಂಗದ ಕೆಲಸ ಮಾಡುತ್ತಿದೆ. ಮಾಧ್ಯಮರಂಗ ನ್ಯಾಯಾಂಗದ ಕೆಲಸ ಮಾಡುತ್ತಿದೆ. ಇದರ ಬದಲು ಈ ಎಲ್ಲ ಅಂಗಗಳು ಪ್ರಭುದ್ದ ಭಾರತ ನಿರ್ಮಾಣಕ್ಕೆ ಕೈ ಜೋಡಿಸಬೇಕು. -ಪ್ರಿಯಾಂಕ್‌ ಖರ್ಗೆ, ಶಾಸಕ

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.