ಶಹಾಬಾದನಲ್ಲಿ ನಾಲ್ವರಿಗೆ ಡೆಂಘೀ ಪತ್ತೆ: ಜಾಗೃತಿಗೆ ಕ್ರಮ
Team Udayavani, Oct 10, 2018, 11:43 AM IST
ಶಹಾಬಾದ: ನಗರದಲ್ಲಿ ಡೆಂಘೀ ವದಂತಿ ಹರಡಿದ ಬೆನ್ನಲ್ಲೇ ಆರೋಗ್ಯ ಇಲಾಖೆ ನಗರದ ವಿವಿಧ ಭಾಗಗಳಲ್ಲಿನ ಜನರ ರಕ್ತ ಸಂಗ್ರಹಿಸಿ ಜಿಲ್ಲಾ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದು, 25 ಜನರಲ್ಲಿ ನಾಲ್ವರಿಗೆ ಡೆಂಘೀ ಇರುವುದು ಪತ್ತೆಯಾಗಿದೆ.
ತಾಲೂಕು ಆರೋಗ್ಯ ಅಧಿಕಾರಿ ಸುರೇಶ ಮೇಕಿನ್ ಅವರು ಈ ಕುರಿತು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಜತೆ ಡೆಂಘೀ ನಿಯಂತ್ರಣದ ಕುರಿತು ಸಮಗ್ರವಾಗಿ ಚರ್ಚಿಸಿದರಲ್ಲದೇ ನಗರದ ಮಜ್ಜಿದ್ ಮುಂಭಾಗದಲ್ಲಿ
ಸಂಗ್ರಹಿಸಿಡಲಾಗಿದ್ದ ಹಳೆ ಸಾಮಗ್ರಿಗಳಲ್ಲಿ ತುಂಬಿಕೊಂಡಿದ್ದ ಮಳೆ ನೀರನ್ನು ಸ್ವತ್ಛಗೊಳಿಸಲು ಕ್ರಮ ಕೈಗೊಂಡರು. ನಂತರ, ಬಡಾವಣೆಗಳಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್ ಮಾಡಲು, ನೀರು ನಿಲ್ಲದಂತೆ ಸ್ವತ್ಛತೆ ಬಗ್ಗೆ
ಹೆಚ್ಚಿನ ಗಮನಹರಿಸಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು. ಡೆಂಘೀ ಕುರಿತು ಜಾಗೃತಿ ಮೂಡಿಸಲು ನಗರದಲ್ಲಿ ಕರಪತ್ರ ಹಂಚಬೇಕು. ಶುದ್ಧವಾದ ಕುಡಿಯುವ ನೀರು ಒದಗಿಸಬೇಕು.
ಕುಡಿಯುವ ನೀರಿನ ಟ್ಯಾಂಕ್ನ ಕ್ಲೋರಿನೇಷನ್ ಮಾಡಲು ಅರಿವು ಮೂಡಿಸಬೇಕೆಂದು ನಗರಸಭೆ ಆರೋಗ್ಯ ನಿರೀಕ್ಷಕ ಶಿವರಾಜಕುಮಾರ ತಿಳಿಸಿದರಲ್ಲದೇ, ನಗರಸಭೆ ಪೌರಾಯುಕ್ತರಿಗೆ ಮನವಿ ಪತ್ರ ಸಲ್ಲಿಸಿದರು. ನಗರಾದ್ಯಂತ ಪ್ರತಿ ಮನೆಮನೆಗೆ ನಗರಸಭೆ ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತರು ಭೇಟಿ ನೀಡಿ ಡೆಂಘೀ ರೋಗ ನಿಯಂತ್ರಣ ನಿಮಿತ್ತ ಲಾರ್ವಾ ಸಮೀಕ್ಷೆ ಮಾಡಿ ಲಾರ್ವಾ ಪತ್ತೆ ಮಾಡಿ ನಾಶಪಡಿಸುವ ಬಗ್ಗೆ ಕರಪತ್ರ ವಿತರಿಸಲಿದ್ದಾರೆ. ಸಾರ್ವಜನಿಕರು ಸಹಕರಿಸಬೇಕು ಎಂದು ತಾಲೂಕು ಆರೋಗ್ಯ ಅಧಿಕಾರಿಗಳು ಮನವಿ ಮಾಡಿದರು.
ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಪಿ.ಎಂ. ಸಜ್ಜನ್, ಮಕ್ಕಳ ತಜ್ಞ ಡಾ| ರಹೀಮ್, ತಾಲೂಕು ಆರೋಗ್ಯ ಮೇಲ್ವಿಚಾರಕ ಮಜ್ಜಿದ್ ಪಟೇಲ್, ಅಧೀಕ್ಷಕ ಮೋಹನ ಗಾಯಕವಾಡ, ಕೌಸರ್ ನಿಯಾಜ್ ಮಹ್ಮದ್, ಯೂಸುಫ್ ನಾಕೇದಾರ, ಆಶಾ ಕಾರ್ಯಕರ್ತೆಯರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ