ನನ್ನ ಸಂಪತ್ತು ಪತ್ತೆ ಹಚ್ಚಿ ಜೈಲಿಗೆ ಹಾಕಿ
Team Udayavani, May 5, 2018, 6:30 AM IST
ಕಲಬುರಗಿ: ಜಿಲ್ಲೆಯ ಕಾಳಗಿಯಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದೀಯ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ, “ಮೋದಿ ಅವರೇ ನೀವು ಪ್ರಧಾನಿ ಇದ್ದೀರಿ. ನನ್ನ ಸಂಪತ್ತು ಎಷ್ಟಿದೆ ಎನ್ನುವುದನ್ನು ಪತ್ತೆ ಹಚ್ಚಿ. ಜೈಲಿಗೆ ಹಾಕ್ತಿರಾ ಹಾಕಿ. ಹೋಗಲು ನಾನು ಸಿದ್ಧನಿದ್ದೇನೆ. ಗುರುವಾರ ಒಂದೆಡೆ ಮೋದಿ ಅವರು ಮಾತನಾಡುತ್ತಿದ್ದರೆ ಇನ್ನೊಂದೆಡೆ ಇಬ್ಬರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಮನೆ ಮೇಲೆ ಐಟಿ ದಾಳಿ ನಡೆದಿದೆ.
ಇಂತಹ ದಾಳಿಗಳಿಗೆಲ್ಲ ನಾವು ಹೆದರೋದಿಲ್ಲ’ ಎಂದು ಕಿಡಿ ಕಾರಿದರು.ಜನರು ತಿರುಗಿ ಬಿದ್ರೆ ನೀವು ಪಾತಾಳಕ್ಕೆ ಹೋಗ್ತಿರಿ.
ಐಟಿ ದಾಳಿ ಮಾಡಿದ್ರೆ ತಪ್ಪಲ್ಲ. ಆದ್ರೆ ಚುನಾವಣೆ ಸಂದರ್ಭದಲ್ಲಿ ದಾಳಿ ಮಾಡಿದ್ದು ಸರಿಯಲ್ಲ.
ಮೋದಿ ಅವರೇ ನೆನಪಿರಲಿ, ಮುಂದೆ ಇದು ನಿಮಗೂ ತಿರುಗುಬಾಣ ಆಗುತ್ತದೆ. ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಸಿಗಲಿಲ್ಲ ಎಂದು ಮೋದಿ ನನ್ನ ಬಗ್ಗೆ ಅನುಕಂಪ ವ್ಯಕ್ತಪಡಿಸಿದ್ದಾರೆ. ಅವರಿಗೆ ದಲಿತರ ಬಗ್ಗೆ ನಿಜವಾದ ಕಾಳಜಿ ಇದ್ರೆ ನನಗೆ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಎಂದು ಮಾನ್ಯತೆ ಕೊಡಬಹುದಿತ್ತು. ಅದನ್ನು ಕಾರ್ಯರೂಪಕ್ಕೆ ತರದೇ ಬರೀ ಅನುಕಂಪ ವ್ಯಕ್ತಪಡಿಸಿದ್ದನ್ನು ನೋಡಿದರೆ ಮೋದಿ ಒಬ್ಬ ಸುಳ್ಳಿನ ಸರದಾರ ಎನ್ನುವುದನ್ನು ಸಾಬೀತು ಪಡಿಸುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ