ದೇವರ ವಿಗ್ರಹಗಳನ್ನು ಕದಿಯುತ್ತಿದ್ದ ಖತರ್ನಾಕ್ ಕಳ್ಳಿಯ ಬಂಧನ
Team Udayavani, Sep 29, 2019, 3:07 PM IST
ಕಲಬುರಗಿ: ನಗರದಲ್ಲಿ ಬೆಳ್ಳಿಯ ದೇವರ ವಿಗ್ರಹಗಳನ್ನು ಕಳ್ಳತನ ಮಾಡುತ್ತಿದ್ದ ಮಹಿಳೆಯೊಬ್ಬಳನ್ನು ಎಂ.ಬಿ. ನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲೂಕಿನ ಫರಹತಾಬಾದ್ ಗ್ರಾಮದ ಬಸಮ್ಮ ನಂದಿಕೂರ ಬಂಧಿತ ಮಹಿಳೆ. 2.62 ಲಕ್ಷ ರೂ. ಮೌಲ್ಯದ ಬೆಳ್ಳಿಯ ವಿಗ್ರಹಗಳನ್ನು ಕಳ್ಳತನ ಮಾಡಿದ್ದಳು ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ ತಿಳಿಸಿದರು.
ಕಳೆದ ಒಂದು ತಿಂಗಳಿಂದ ನಾಲ್ಕು ಮನೆಗಳಲ್ಲಿ ಕಳ್ಳತನ ಮಾಡಿದ್ದಳು. ನೀರು ಕೇಳುವ ನೆಪದಲ್ಲಿ ಮನೆಗಳಿಗೆ ವಿಗ್ರಹಗಳನ್ನು ಕಳ್ಳತನ ಮಾಡುತ್ತಿದ್ದಳು. ಮರುದಿನ ಪೂಜೆ ಮಾಡುವಾಗಲೇ ವಿಗ್ರಹಗಳು ಕಳ್ಳತನವಾಗಿದ್ದು ಮಾಲೀಕರ ಗಮನಕ್ಕೆ ಬರುತ್ತಿತ್ತು.
ದೇವರ ವಿಗ್ರಹಗಳನ್ನು ಕದ್ದರೆ ಸಿಕ್ಕಿ ಬೀಳುವುದಿಲ್ಲ ಎಂಬ ನಂಬಿಕೆಯಿಂದ ಕಳ್ಳತನದಲ್ಲಿ ತೊಡಗಿದ್ದಳು ಎಂದು ತನಿಖೆ ವೇಳೆ ತಿಳಿದು ಬಂದಿದೆ ಎಂದು ಹೇಳಿದರು.
ಕಳ್ಳತನ ಮಾಡುವ ದೃಶ್ಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎಂ.ಬಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ