ರಸ್ತೆ ತುಂಬಾ ತಗ್ಗು-ಧೂಳಿನದ್ದೇ ಕಾರುಬಾರು

ಸಿಮೆಂಟ್‌ ಲಾರಿಗಳ ಸಂಚಾರದಿಂದ ಹದಗೆಟ್ಟ ರಸ್ತೆ

Team Udayavani, Oct 11, 2020, 6:26 PM IST

gb-tdy2

ಚಿತ್ತಾಪುರ: ಪಟ್ಟಣದ ಲಾಡ್ಜಿಂಗ್‌ ಕ್ರಾಸ್‌ನಿಂದ ಇಟಗಾ, ಮೋಗಲಾ, ಮೋಗಲಾ ತಾಂಡಾ, ದಿಗ್ಗಾಂವಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಸಂಪೂರ್ಣ ಹದಗೆಟ್ಟಿದ್ದು, ರಸ್ತೆಯುದ್ದಕ್ಕೂ ತಗ್ಗು, ಗುಂಡಿಗಳುಬಿದ್ದಿವೆ.

ರಸ್ತೆಯಲ್ಲಿ ಕೆಲವೆಡೆ ದೊಡ್ಡ ಹೊಂಡಗಳೇ ನಿರ್ಮಾಣವಾಗಿವೆ. ಅಲ್ಲದೇ ಅಲ್ಲಲ್ಲಿ ಜಲ್ಲಿಕಲ್ಲು ಎದ್ದಿದ್ದರಿಂದ ರಸ್ತೆಯ ಮೇಲೆ ಧೂಳು ಆವರಿಸಿಕೊಂಡಿದೆ. ಹೀಗಾಗಿ ಇಲ್ಲಿ ಸಂಚರಿಸುವ ವಾಹನಗಳ ಸವಾರರು, ಜನ-ಜಾನುವಾರುಗಳು ಧೂಳಿನಿಂದ ಕಂಗೆಟ್ಟಿವೆ.

ಕಳೆದ ನಾಲ್ಕೈದು ವರ್ಷಗಳಿಂದ ರಸ್ತೆ ಹಾಳಾಗಿದ್ದರೂ ದುರಸ್ತಿ ಕಾರ್ಯ ಕೈಗೊಂಡಿಲ್ಲ. ಇದೇ ರಸ್ತೆ ಬದಿಯಲ್ಲಿ ಓರಿಯಂಟ್‌ ಸಿಮೆಂಟ್‌ ಕಂಪೆನಿ ನಿರ್ಮಾಣವಾಗಿದೆ. ನೂರಾರು ಲಾರಿಗಳು ಲೋಡ್‌ ತುಂಬಿಕೊಂಡು ನಿತ್ಯ ಸಂಚರಿಸುತ್ತವೆ. ಇದರಿಂದ ರಸ್ತೆಯಲ್ಲಿ ದೊಡ್ಡ ಹೊಂಡಗಳೇ ನಿರ್ಮಾಣವಾಗಿವೆ. ಸುಮಾರು 10 ಕಿ.ಮೀ. ಉದ್ದದ ರಸ್ತೆ ಸಂಪೂರ್ಣ ಹಾಳಾಗಿ ಧೂಳು ಮಯವಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸವಾರರಿಗೆ ಧೂಳಿನ ಸ್ನಾನ ಹಾಗೂ ಕಣ್ಣಲ್ಲಿ ಕಸ, ಕಡ್ಡಿ ಬಿದ್ದು ಅಪಘಾತಗಳು ಸಂಭವಿಸಿವೆ ಎಂದು ಸ್ಥಳೀಯರು ದೂರಿದ್ದಾರೆ.

ದ್ವಿಚಕ್ರ ವಾಹನ, ಆಟೋ ಸೇರಿದಂತೆ ಇತರೆ ವಾಹನಗಳಲ್ಲಿ ಕುಳಿತು ಇಟಗಾ, ದಿಗ್ಗಾಂವ, ಮೋಗಲಾ, ಮೋಗಲಾ ತಾಂಡಾದ ಜನರು ಚಿತ್ತಾಪುರಕ್ಕೆ ಬರಬೇಕಾದರೆ ನಿತ್ಯ ಧೂಳಿನಿಂದ ಮೂಗು ಮುಚ್ಚಿಕೊಂಡು ಸಂಚರಿಸುವಂತಾಗಿದೆ. ಪಟ್ಟಣದ ಲಾಡ್ಗಿಂಗ್‌ ಕ್ರಾಸ್‌ಯಿಂದ ಬಸ್‌ ಡಿಪೋವರೆಗೆ ಧೂಳು ಮೇಲೆ ಏಳುತ್ತಿರುವುದರಿಂದ ಅಕ್ಕ-ಪಕ್ಕದ ಹೋಟೆಲ್‌, ದಾಬಾಗಳಲ್ಲಿ ಧೂಳು ಸೇರಿಕೊಳ್ಳುತ್ತಿದೆ. ರಸ್ತೆ ಬದಿಯ ವ್ಯಾಪಾರಿಗಳಿಗೂ ತೊಂದರೆಯಾಗಿದ್ದು, ಅವರು ತಯಾರಿಸಿದ ಆಹಾರ ಪದಾರ್ಥಗಳ ಮೇಲೂ ಧೂಳು ಬೀಳುತ್ತಿದೆ. ಇದನ್ನೇ ತಿಂದ ಗ್ರಾಹಕರಿಗೆ ಅಸ್ತಮಾ, ಕೆಮ್ಮು, ದಮ್ಮು, ಜ್ವರ ಸೇರಿದಂತೆ ಇತರೆ ಕಾಯಿಲೆ ಬರುತ್ತಿವೆ ಎಂದು ಸ್ಥಳೀಯ ನಿವಾಸಿ ಲಕ್ಷಿŒàಕಾಂತ ಅಸಮಾಧಾನ ವ್ಯಕ್ತಪಡಿಸುತ್ತಾರೆ.

ಮಳೆ ಬಂದರಂತೂ ಪಟ್ಟಣದ ರಸ್ತೆ ಸಂಪೂರ್ಣ ಕೆಸರುಮಯವಾಗಿ ಬೀಡುತ್ತದೆ. ಎಲ್ಲಿ ತಗ್ಗು ಇದೆ ಅನ್ನುವುದೇ ಸವಾರರಿಗೆ ಕಾಣಲ್ಲ. ರಸ್ತೆ ಮೇಲೆ ಹಾಕಿದಕಟ್ಟಿಂಗ್‌ ಚಿಂಪ್‌ ಹಾಗೂ ಮುರಮ್‌ನಿಂದ ಏಳುತ್ತಿರುವ ಧೂಳಿನಿಂದ ಬೈಕ್‌ಗಳು ಸ್ಕೀಡ್‌ ಆಗಿ ಬಿದ್ದು ಸವಾರರು ಕೈ-ಕಾಲು ಮುರಿದುಕೊಂಡ ಘಟನೆಗಳು ನಡೆದಿವೆ. ಧೂಳಿನಿಂದ ಜಮೀನಿನಲ್ಲಿ ಬೆಳೆದ ಮೇವನ್ನುಜಾನುವಾರುಗಳು ತಿನ್ನುತ್ತಿಲ್ಲ. ಧೂಳು ಏಳದಂತೆ ಪ್ರತಿದಿನ ನೀರು ಸಿಂಪಡಿಸಬೇಕು ಎಂದು ಓರಿಯಂಟ್‌ ಕಂಪೆನಿ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈಗಲಾದರೂ ಸಂಬಂಧಪಟ್ಟ ಅಧಿ ಕಾರಿಗಳು ಕೂಡಲೇ ರಸ್ತೆ ದುರಸ್ತಿ ಮಾಡಿ ಬೆಳೆಗಳನ್ನು ರಕ್ಷಿಸಿ, ರೈತರಿಗೆ ಹಾಗೂ ಜನ ಸಾಮಾನ್ಯರಿಗೆ ಆಗುತ್ತಿರುವ ತೊಂದರೆ ದೂರ ಮಾಡಬೇಕು ಎಂದು ಸಾರ್ವಜನಿಕರು ಮತ್ತು ಈ ಭಾಗದ ರೈತರು ಆಗ್ರಹಿಸಿದ್ದಾರೆ.

ಹದಗೆಟ್ಟ ರಸ್ತೆಯನ್ನು ದುರಸ್ತಿ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ. ಈ ರಸ್ತೆ ಮೂಲಕವೇ ಓರಿಯಂಟ್‌ ಕಂಪೆನಿಗೆ 10-14 ಚಕ್ರದ ಲಾರಿ, ಬಂಕರ್‌ಗಳಲ್ಲಿ ಟನ್‌ಗಟ್ಟಲೇ ಲೋಡ್‌ ತುಂಬಿಕೊಂಡು ಸಂಚರಿಸುತ್ತವೆ. ಹೀಗಾಗಿ ರಸ್ತೆಯಲ್ಲಿ ತಗ್ಗು-ಗುಂಡಿಗಳು ಬಿದ್ದಿದ್ದರಿಂದ ಲಾರಿ ಹಾಗೂ ಬಂಕರ್‌ಗಳ ಟೈರ್‌ಗಳು ಸ್ಫೋಟಗೊಂಡು, ಪಾಟಾಗಳು ಮುರಿದು ವಾರಗಟ್ಟಲೇ ರಸ್ತೆಯಲ್ಲಿಯೇ ನಿಲ್ಲುವುದರಿಂದ ಬೇರೆ ವಾಹನಗಳು ಸಂಚರಿಸಲು ತೊಂದರೆ ಉಂಟಾಗುತ್ತಿದೆ. – ಮಲ್ಲೇಶಿ ಮಾಕಾ ನಾಗಾವಿ, ಲಾರಿ ಯುನಿಯನ್‌ ಸಂಘದ ಅಧ್ಯಕ್ಷ

ಓರಿಯಂಟ್‌ ಕಂಪೆನಿ ಸ್ಥಾಪನೆ ಆದಾಗಿನಿಂದ ಇಲ್ಲಿ ಬಾರಿ ವಾಹನಗಳು ಸಂಚರಿಸುತ್ತಿವೆ. ಇದರಿಂದ ತಗ್ಗು ಗುಂಡಿಗಳು ಬಿದ್ದಿವೆ. ಜತೆಗೆ ಧೂಳಿನಲ್ಲಿವಾಹನಗಳು ಸಂಚರಿಸುವಂತಾಗಿದೆ. ಸಂಬಂಧಪಟ್ಟವರು ಇತ್ತ ಗಮನ ಹರಿಸಿ ಧೂಳು ಬಾರದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. -ಜಾವೀದ್‌, ಸ್ಥಳೀಯ ನಿವಾಸಿ

 

-ಎಂ.ಡಿ ಮಶಾಖ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.