ದೇವಲ್ ಗಾಣಗಾಪುರ ನಕಲಿ ವೆಬ್ ಸೈಟ್: ಕೊನೆಗೂ ವಿಚಾರಣೆಗೆ ಹಾಜರಾದ ಅರ್ಚಕರು
Team Udayavani, Jul 9, 2022, 8:23 PM IST
ಕಲಬುರಗಿ: ದಕ್ಷಿಣ ಭಾರತದ ಪ್ರಸಿದ್ದ ಯಾತ್ರಾಸ್ಥಳ ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲ್ ಗಾಣಗಾಪುರ ದೇವರ ಹೆಸರಿನಲ್ಲಿ ನಕಲಿ ವೆಬ್ ಸೈಟ್ ತೆರೆದು ಸರ್ಕಾರದ ಬೊಕ್ಕಸಕ್ಕೆ ಹಾನಿ ಮಾಡಿರುವ ದೇವಾಲಯದ ಐವರು ಅರ್ಚಕರು ಕೊನೆಗೂ ವಿಚಾರಣೆಗೆ ಹಾಜರಾಗಿದ್ದಾರೆ.
ಅರ್ಚಕರಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಈ ಹಿಂದೆ ಎರಡು ನೋಟಿಸ್ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗಿರಲಿಲ್ಲ.
ವಂಚನೆ ಸಂಬಂಧ ದೇವಾಲಯದ ಐವರ ಅರ್ಚಕರ ವಿರುದ್ದ ಮೊದಲು ದೇವಲ್ ಗಾಣಗಾಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿ ತದನಂತರ ಜಿಲ್ಲಾ ಸೈಬರ್ ಕ್ರೈಂ ( ಸಿಇಎನ್) ಠಾಣೆಗೆ ವರ್ಗಾವಣೆಯಾಗಿದ್ದರಿಂದ ಠಾಣಾ ಇನ್ಸಪೆಕ್ಟರ್ ಸೋಮಲಿಂಗ ಕಿರದಳ್ಳಿ ಈ ಮೊದಲು ಕಳೆದ ಜೂನ್ 27ರಂದು ವಿಚಾರಣೆಗೆ ಹಾಜರಾಗುವಂತೆ ಮೊದಲ ನೋಟೀಸ್ ನೀಡಿದ್ದರು. ಆದರೆ ಅರ್ಚಕರು ವಿಚಾರಣೆಗೆ ಗೈರು ಹಾಜರಾಗಿದ್ದರು.ತದನಂತರ ನೀಡಲಾಗಿದ್ದ ಎರಡನೇ ನೋಟಿಸ್ ಗೂ ಗೈರು ಹಾಜರಾಗಿದ್ದರು.
ಮೂರನೇ ನೋಟೀಸ್ ನೀಡಿ ಜುಲೈ 9 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಹೀಗಾಗಿ ಅರ್ಚಕರು ಶನಿವಾರ ವಿಚಾರಣೆಗೆ ಹಾಜರಾದರು. ನಕಲಿ ವೆಬ್ ಸೈಟ್ ವಿಳಾಸ ಹಾಗೂ ಖಾತೆಗಳ ಮಾಹಿತಿಯನ್ನು ಪಡೆದುಕೊಳ್ಳಲಾಯಿತು. ಮತ್ತೆ ಎರಡ್ಮೂರು ದಿನದೊಳಗೆ ವಿಚಾರಣೆಗೆ ಕರೆಯಲಾಗುವುದು ಎಂದು ತಿಳಿಸಿ ವಾಪಸ್ಸು ಕಳುಹಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ