ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಪರ್ವ ಶುರು
Team Udayavani, Jan 31, 2019, 9:00 AM IST
ಕಲಬುರಗಿ: ಚುನಾವಣೆ ಸಂದರ್ಭದಲ್ಲಿ ಕಲಬುರಗಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಗೆ ನೀಡಲಾದ ಭರವಸೆಗಳನ್ನು ಈಡೇರಿಸಲು ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಬಸವರಾಜ ಮತ್ತಿಮಡು ಹೇಳಿದರು.
ಬುಧವಾರ ಕಲಬುರಗಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ವಿ.ಕೆ. ಸಲಗರ, ಅಂಬಲಗಾ, ಅಪಚಂದ, ಜವಳಗಾ, ಮಡಕಿ, ಲಾಡಮುಗಳಿ, ಶ್ರೀಚಂದ, ಮಡಕಿ, ಕಮಲಾ ನಗರ, ಬೆಟ್ಟಜೇವರ್ಗಿ, ವಾಗ್ಧಾರಗಿ ಗ್ರಾಮಗಳಲ್ಲಿ ಸಿಸಿ ರಸ್ತೆಗಳು, ಅಂಗನವಾಡಿ ಕೇಂದ್ರ, ಶಾಲಾ ಆಟದ ಮೈದಾನ ನಿರ್ಮಾಣ ಸೇರಿದಂತೆ ಒಟ್ಟಾರೆ 40 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಕ್ಷೇತ್ರದಲ್ಲಿ ರಸ್ತೆಗಳ ನಿರ್ಮಾಣ, ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸ್ಪಂದಿಸುವುದರ ಜತೆಗೆ ಸೂರಿಲ್ಲದವರಿಗೆ ಸೂರು ಕಲ್ಪಿಸುವ ಹಾಗೂ ಶೈಕ್ಷಣಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲು ಮುಂದಾಗಲಾಗಿದೆ. ಇದೇ ನಿಟ್ಟಿನ ಕಾಮಗಾರಿಗಳಿಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಕ್ಷೇತ್ರದ ಶಹಾಬಾದ ನಗರಸಭೆ ಸೇರಿದಂತೆ ಇತರ ಎಲ್ಲ ಹಳ್ಳಿಗಳಲ್ಲಿ ಯಾವ್ಯಾವ ಸಮಸ್ಯೆಗಳಿವೆ ಎನ್ನುವುದನ್ನು ಪಟ್ಟಿ ಮಾಡಲಾಗಿದೆ. ಇವುಗಳಿಗೆ ಸ್ಪಂದಿಸಲು ದೃಢ ಹೆಜ್ಜೆ ಇಡಲಾಗಿದೆ. ಎಲ್ಲರ ಆಶೀರ್ವಾದದಿಂದ ವಿಧಾನ ಸಭೆಗೆ ಹೋಗಿದ್ದೇನೆ. ಈಗಲೂ ಎಲ್ಲರ ಸಲಹೆ-ಸೂಚನೆ ಪಡೆದು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು. ಪ್ರಸಕ್ತವಾಗಿ ಬರಗಾಲ ಛಾಯೆ ವ್ಯಾಪಕವಾಗಿದ್ದರಿಂದ ಕಂಗಾಲಾಗಿರುವ ರೈತರಿಗೆ ಹಾಗೂ ಕೃಷಿ ಕೂಲಿ ಕಾರ್ಮಿಕರಿಗೆ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿ ಉದ್ಯೋಗ ಕಲ್ಪಿಸಿಕೊಡಲು ಕೃಷಿ ಇಲಾಖೆ, ಅರಣ್ಯ ಸೇರಿದಂತೆ ಇತರ ಇಲಾಖೆಗಳು ಕ್ರಿಯಾ ಯೋಜನೆ ರೂಪಿಸಿ ಕಾರ್ಯಾನುಷ್ಠಾನಕ್ಕೆ ಮುಂದಾಗಲಾಗಿದೆ. ಜತೆಗೆ ಉದ್ಯೋಗ ಖಾತ್ರಿ ಅಡಿ ಹೊಲದಲ್ಲಿ ಕಲ್ಲುಗಳನ್ನು ಆಯುವುದು, ಹೊಲ ಸ್ವಚ್ಛತೆ, ಬದುಗಳ ನಿರ್ಮಾಣ ಸೇರಿದಂತೆ ಇತರ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಹೊಲಗಳಲ್ಲಿ ಬದು ನಿರ್ಮಾಣ, ಕೃಷಿ ಹೊಂಡ ನಿರ್ಮಾಣ ಹಾಗೂ ಮರಗಳನ್ನು ಬೆಳೆಸುವ ಮುಖಾಂತರ ಜತೆಗೆ ರೇಷ್ಮೆ, ತೋಟಗಾರಿಕೆ ಕ್ಷೇತ್ರದಲ್ಲೂ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಗಳನ್ನು ವ್ಯಾಪಕವಾಗಿ ಕೈಗೊಳ್ಳಬೇಕು. ರೇಷ್ಮೆ ಬೆಳೆಗಳಿಗೆ ಅನುಕೂಲವಾಗಲು ಕೃಷಿ ಹೊಂಡಗಳನ್ನು ನಿರ್ಮಿಸಬೇಕು. ಈಗಲೇ ಎನ್ಎಂಆರ್ ನೀಡಿ ಎಂದು ತಾಕೀತು ಮಾಡಿದ್ದಲ್ಲದೇ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳು ಸಮುದಾಯವಾಗಿರಲಿ ಎಂಬುದಾಗಿ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ತಿಳಿಸಿದರು.
ಮುಖಂಡರಾದ ಕಲ್ಯಾಣರಾವ ಗೊನಾಕಿ, ಸಿದ್ಧಣ್ಣಗೌಡ ಧಮ್ಮೂರ, ಶಿವರಾಯಗೌಡ ಮುದ್ದಡಗಾ, ಸತೀಶ ಸೋರಡೆ, ಸಿದ್ರಾಮಪ್ಪ ಮಾಲಿಪಾಟೀಲ ಕಮಲಾನಗರ, ರೇವಣಸಿದ್ದಪ್ಪ ಮೂಲಗೆ, ರೇಣುಕಾಚಾರ್ಯ, ವೀರೂ ಸ್ವಾಮಿ, ನರೋಣಾ, ಬಸವರಾಜ ವಾಲಿ, ಶಂಭು ಗೂಗಳೆ, ನಾಗರಾಜ ಮೂಲಗೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು