ದತ್ತು ಶಾಲೆ ಪ್ರಗತಿ ಯೋಜನೆಗೆ ಸಿದ್ಧತೆ

27 ಶಾಲೆ ದತ್ತು ಸ್ವೀಕರಿಸಿದ ಒಂಭತ್ತು ಶಾಸಕರು, ಶಿಕ್ಷಣ ಇಲಾಖೆಯಿಂದ ಅಭಿವೃದ್ಧಿ ಮಾಹಿತಿ ಸಂಗ್ರಹ

Team Udayavani, Dec 24, 2020, 3:35 PM IST

gb-tdy-1

ಸಾಂದರ್ಭಿಕ ಚಿತ್ರ

ಕಲಬುರಗಿ: ಸರ್ಕಾರಿ ಶಾಲೆಗಳ ಅಭಿವೃದ್ಧಿ ನಿಟ್ಟಿನಲ್ಲಿ ದತ್ತು ಕಾರ್ಯಕ್ರಮದಡಿ ಜಿಲ್ಲೆಯ ಒಂಭತ್ತು ಶಾಸಕರು 27 ಶಾಲೆಗಳನ್ನು ದತ್ತು ಸ್ವೀಕರಿಸಿದ್ದಾರೆ. ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ತಲಾ ಮೂರು ಶಾಲೆಗಳನ್ನು ಶಾಸಕರು ದತ್ತು ಪಡೆದಿದ್ದಾರೆ. ಅಭಿವೃದ್ಧಿಗಾಗಿ ಸರ್ಕಾರಿ ಶಾಲೆಗಳು ಕಾಯುತ್ತಿವೆ.

ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಬಲಪಡಿಸಲು ಶಾಸಕರು ದತ್ತು ಪಡೆಯುವ ಕಾರ್ಯಕ್ರಮರೂಪಿಸಲಾಗಿದೆ. ದತ್ತು ಪಡೆಯುವ ಮೂಲಕಆಯಾ ಶಾಲೆಗಳಲ್ಲಿ ಆಗಬೇಕಾದ ಅಭಿವೃದ್ಧಿಕಾರ್ಯಗಳನ್ನು ಮಾಡಬೇಕೆಂದು ರಾಜ್ಯ ಸರ್ಕಾರಶಾಸಕರಿಗೆ ಸಲಹೆ ನೀಡಿದೆ. ಅದರಂತೆ ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ಒದಗಿಸುವ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಬ್ಬ ಶಾಸಕರು ಮೂರು ಶಾಲೆಗಳನ್ನು ದತ್ತುಪಡೆದುಕೊಂಡಿದ್ದಾರೆ. ಶಾಸಕರ ಪ್ರದೇಶಾಭಿವೃದ್ಧಿ ನಿಧಿಬಳಸಿಕೊಂಡು ದತ್ತುಗಳ ಶಾಲೆಗಳ ಪ್ರಗತಿ ಯೋಜನೆ ಸಿದ್ಧ ಪಡಿಸಲಾಗುತ್ತಿದೆ.

ಜಿಲ್ಲೆಯ ಒಂಭತ್ತು ವಿಧಾನಸಭೆ ಕ್ಷೇತ್ರಗಳ ಶಾಸಕರುತಾವು ಪ್ರತಿನಿಧಿಸುವ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ಮೂರು ಶಾಲೆಗಳ ದತ್ತು ಸ್ವೀಕಾರ ಪಟ್ಟಿಗೆ ಈಗಾಗಲೇಅನುಮೋದನೆ ಸಿಕ್ಕಿದೆ. ದತ್ತು ಸ್ವೀಕರಿಸಲಾದ ಶಾಲೆಗಳ ಅಭಿವೃದ್ಧಿ ಚಟುಚಟಿಕೆಗಳ ವಿವರ ಸಂಗ್ರಹಿಸಿ, ಅದಕ್ಕೆನಿಗದಿಪಡಿಸಿರುವ ಅಂದಾಜು ವೆಚ್ಚವನ್ನು ಲೆಕ್ಕ ಹಾಕಲಾಗಿದೆ.

ಶಾಲೆಗಳ ಆಯ್ಕೆ ಹೇಗೆ?: ಶಿಕ್ಷಕರು ತಮ್ಮ ಶಾಲೆಗಳಲ್ಲಿನ ಅಭಿವೃದ್ಧಿ ಕಾರ್ಯಗಳು ಹಾಗೂ ಬೋಧನಾ ಸಲಕರಣೆಗಳ ಕೊರತೆಬಗ್ಗೆ ಮೇಲಾಧಿಕಾರಿಗಳಾದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಿ, ಸರ್ಕಾರದಗಮನ ಸೆಳೆಯುವ ಕೆಲಸ ಮಾಡಿದ್ದಾರೆ. ಅಲ್ಲದೇ, ಸ್ವತಃಶಿಕ್ಷಣ ಇಲಾಖೆಯೇ ಮುಖ್ಯ ಶಿಕ್ಷಕರಿಂದ ಆಗಬೇಕಾದಅಭಿವೃದ್ಧಿ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಹೀಗೆಕಲೆ ಹಾಕಿದ ಶಾಲೆಗಳ ಮಾಹಿತಿ ಆಧರಿಸಿ ಅಥವಾಶಾಸಕರೇ ತಮ್ಮ ಮತಕ್ಷೇತ್ರ ವ್ಯಾಪ್ತಿಯ ಮೂರು ಶಾಲೆಗಳನ್ನು ಹೆಸರಿಸಿ ಆಯ್ಕೆ ಮಾಡಿಕೊಂಡಿದ್ದಾರೆ.

ಶಾಲೆಗಳ ಕೊಠಡಿ ನಿರ್ಮಾಣ, ಚಾವಣಿ ದುರಸ್ತಿ, ಕಾಂಪೌಂಡ್‌ ನಿರ್ಮಾಣ ಮಾಡುವುದು, ಕಂಪ್ಯೂಟರ್‌ ಒದಗಿಸುವುದು, ವಿಜ್ಞಾನ ಪ್ರಯೋಗಾಲಯ,ಸಲಕರಣೆ ಕೊಡಿಸುವುದು, ಆಟದ ಮೈದಾನ ಅಭಿವೃದ್ಧಿ, ಪಾಠೊಪಕರಣ ಖರೀದಿ, ಶೌಚಾಲಯ ಮತ್ತಿತರ ಕಾಮಗಾರಿಗಳನ್ನು ಮಾಡಿಕೊಡಲು ಶಾಸಕರು ಮುಂದಾಗಿದ್ದಾರೆ.

ಕೆಪಿಎಸ್‌ ಶಾಲೆ ಕಡ್ಡಾಯ: ಶಾಸಕರ ದತ್ತು ಪಡೆದ ಮೂರು ಶಾಲೆಗಳಲ್ಲಿ ಒಂದು ಕರ್ನಾಟಕ ಪಬ್ಲಿಕ್‌ಶಾಲೆ (ಕೆಪಿಎಸ್‌) ಸೇರುವುದು ಕಡ್ಡಾಯವಾಗಿದೆ. ಒಂದರಿಂದ ಪದವಿ ಪೂರ್ವ ಕಾಲೇಜು ವರೆಗೆ ಒಂದೇ ಆವರಣದಲ್ಲಿ ಕೆಪಿಎಸ್‌ ಶಾಲೆ ಇರುತ್ತದೆ.ಆ ಶಾಲೆಯ ಪ್ರಾಥಮಿಕ,ಪ್ರೌಢ ಹಾಗೂ ಪೂರ್ವ ಪದವಿ ವಿಭಾಗದಲ್ಲಿ ಆಗಬೇಕಾದ ಅಭಿವೃದ್ಧಿಕಾರ್ಯಗಳನ್ನು ಶಾಸಕರು ಮಾಡಬೇಕು. ಉಳಿದ ಎರಡು ಶಾಲೆಗಳಲ್ಲಿ ಒಂದು ಪ್ರಾಥಮಿಕ ಮತ್ತು ಪ್ರೌಢ ಶಾಲೆ ಸೇರಿರುತ್ತದೆ.

ದತ್ತು ಪಡೆದು ಅಭಿವೃದ್ಧಿ ಪಡಿಸುವುದರಜೊತೆಗೆ ಮೂರ್‍ನಾಲ್ಕು ತಿಂಗಳೊಗೊಮ್ಮೆ ಶಾಸಕರು ಆ ಶಾಲೆಗಳಿಗೆ ಭೇಟಿ ಕೊಡಬೇಕು. ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಚರ್ಚಿಸಬೇಕೆಂದು ಶಾಸಕರಿಗೆ ಸರ್ಕಾರದಿಂದ ನಿರ್ದೇಶನ ನೀಡಲಾಗಿದೆ.

ಶಾಸಕರು ತಮ್ಮ ವಿಧಾನಸಭೆ ಕ್ಷೇತ್ರದ ಮೂರು ಶಾಲೆಗಳನ್ನು ಸ್ವತಃ ಆಯ್ಕೆ ಮಾಡಿಕೊಡು ದತ್ತು ಪಡೆದಿದ್ದಾರೆ. ದತ್ತು ಪಡೆದ ಶಾಲೆಗಳ ಅಭಿವೃದ್ಧಿ ಚಟುವಟಿಕೆಗಳನ್ನು ಪಟ್ಟಿ ಮಾಡಿ, ಅದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಿಯಾಯೋಜನೆ ರೂಪಿಸಿದ್ದಾರೆ. ಎಸ್‌.ಪಿ. ಬಾಡಗಂಡಿ, ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ

 

ರಂಗಪ್ಪ ಗಧಾರ

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.