ವೈಮನಸ್ಸು ಬಿಟ್ಟು ಸಂಘಟಿತರಾದರೆ ಸಮಾಜದ ಅಭಿವೃದ್ಧಿ: ಡಾ| ಅರಿಕೇರಿ
Team Udayavani, Feb 12, 2018, 11:44 AM IST
ಕಾಳಗಿ: ರಾಜ್ಯದಲ್ಲಿ ಸುಮಾರು 60 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಕೋಲಿ ಸಮಾಜಕ್ಕೆ ರಾಜಕೀಯ ಸ್ಥಾನಮಾನ ದೊರೆತಿಲ್ಲ. ಆಂತರಿಕ ಭಿನ್ನಾಭಿಪ್ರಾಯ ಮತ್ತು ವೈಮನಸ್ಸು ತೊರೆದು ಎಲ್ಲರು ಒಗ್ಗೂಡಿ ಸಂಘಟನೆ ಮಾಡಿದಾಗ ಮಾತ್ರ ಸಮಾಜ ಅಭಿವೃದ್ಧಿ ಸಾಧ್ಯ ಎಂದು ಉಪನ್ಯಾಸಕ ಡಾ| ಭೀಮರಾವ ಅರಿಕೇರಿ ಹೇಳಿದರು. ಇಲ್ಲಿನ ನೀಲಕಂಠ ಕಾಳೇಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಪ್ರಚಾರ ಸಮಿತಿ ವತಿಯಿಂದ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೋಲಿ ಸಮಾಜ ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ತೀರಾ ಹಿಂದುಳಿದೆ. ಸಮಾಜ ಮುಖ್ಯವಾಹಿನಿಗೆ ಬರಬೇಕಾದರೆ ಅದು ಶಿಕ್ಷಣದಿಂದ ಮಾತ್ರ ಸಾಧ್ಯ. ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ರೀತಿಯ ಶಿಕ್ಷಣ ಕೊಡಿಸಲು ಮುಂದಾಗಬೇಕು ಎಂದು ಹೇಳಿದರು.
ತೊನಸನಳ್ಳಿ ಅಲ್ಲಮಪ್ರಭು ಮಠದ ಪೂಜ್ಯ ಮಲ್ಲಣ್ಣಪ್ಪ ಮಹಾಸ್ವಾಮಿಗಳು, ಗೌರಿಗುಡ್ಡ ರಟಕಲ್ನ ಪೂಜ್ಯ ರೇವಣಸಿದ್ದ ಶರಣರು, ದತ್ತಾತ್ರೇಯ ಮಹಾಸ್ವಾಮಿಗಳು, ಸಾಲಹಳ್ಳಿ ಸಂತಾಶ್ರಮದ ಬಾಲಯೋಗಿನಿ ಅಕ್ಕಮಹಾದೇವಿ ಅಮ್ಮನವರು, ಕೋಲಿ ಸಮಾಜದ ಯುವ ನಾಯಕ ವಿಕ್ರಮ ನಾಮದಾರ, ಪ್ರಭು ರಟಕಲ್, ಭೀಮರಾಯ ಚಿತ್ತಾಪುರ, ಪೃಥ್ವಿರಾಜ ನಾಮದಾರ, ಮಾರುತಿ ನಾಯಿಕೊಡಿ,
ರಮೇಶ ನಾಮದಾರ, ಭಾಗಣ್ಣ ಪೊಲೀಸ್, ಶರಣು ತಳವಾರ, ಅಮೃತಪ್ಪ ಹುಸೇನಗೋಳ, ಸಿದ್ದು ಹಲಚೇರಾ, ಮಾರುತಿ ಕೋಡ್ಲಿ ಇದ್ದರು.
ಪ್ರವೀಣ ನಾಮದಾರ ಸ್ವಾಗತಿಸಿದರು. ನಾಗಣ್ಣ ಕಮಕನೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಸವರಾಜ ಪಂಗರಗಾ ನಿರೂಪಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ