ಕರ್ನಾಟಕ ಲಾಕ್ ಡೌನ್- ದೇವಸ್ಥಾನಗಳಿಗೆ ಪ್ರವೇಶ ನಿಷೇಧ: ಗೇಟ್ ನಲ್ಲಿ ಭಕ್ತರ ಪೂಜೆ!
Team Udayavani, Mar 24, 2020, 12:47 PM IST
ಕಲಬುರಗಿ: ಕೋವಿಡ್-19 ಸೋಂಕು ಭೀತಿಯಿಂದಾಗಿ ಸರ್ಕಾರ ರಾಜ್ಯಾದ್ಯಂತ ಲಾಕ್ ಡೌನ್ ಆದೇಶ ಮಾಡಿದ್ದು, ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ನಿರ್ಬಂಧ ಮಧ್ಯೆಯೂ ನಗರದ ಐತಿಹಾಸಿಕ ಶರಣಬಸವೇಶ್ವರ ದೇವಸ್ಥಾನದ ಗೇಟ್ ನಲ್ಲಿ ಮಂಗಳವಾರ ಭಕ್ತರು ಪೂಜೆ ಸಲ್ಲಿಸಿದರು. ಬೆಳಿಗ್ಗೆ ಮನೆಗಳಿಂದ ಬಂದು ಗೇಟ್ ನಲ್ಲೇ ತೆಂಗಿನ ಕಾಯಿ ಒಡೆದು ಹೂ, ಹಣ್ಣು ಅರ್ಪಿಸಿ ಭಕ್ತಿ ಮೆರೆದರು.
ಚಿತ್ತಾಪುರ ತಾಲೂಕಿನ ಇತಿಹಾಸ ಪ್ರಸಿದ್ದ ಚಂದ್ರಲಾಂಬಾ ದೇವಸ್ಥಾನದಲ್ಲೂ ಭಕ್ತರಿಗೆ ನಿಷೇಧ ಹೇರಲಾಗಿದೆ. ಮಾ. 31ರ ತನಕ ಯಾವುದೇ ಭಕ್ತರು ದೇಗುಲಕ್ಕೆ ಬರಬೇಡಿ. ಮನೆಯಲ್ಲಿಯೇ ಕುಳಿತು ಕುಟುಂಬದ ಮತ್ತು ನಾಡಿನ ಒಳಿತಿಗಾಗಿ ಜಗನ್ಮಾತೆಗೆ ಪ್ರಾರ್ಥಿಸಿ ಎಂದು ದೇವಸ್ಥಾನದ ಆಡಳಿತ ಮಂಡಳಿ ವಿನಂತಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು