ರೈಲ್ವೆ ಮೇಲ್ಸೇತುವೆ ಪೂರ್ಣಕ್ಕೆ ನಿರ್ದೇಶನ


Team Udayavani, Oct 2, 2019, 1:37 PM IST

gb-tdy-1

ಕಲಬುರಗಿ: ಹಲವು ವರ್ಷಗಳಿಂದ ಪೂರ್ಣಗೊಳ್ಳದೇ ನನೆಗುದಿಗೆ ಬಿದ್ದಿರುವ ನಗರದ ಬಿದ್ದಾಪುರ ಕಾಲೋನಿಯ ಅಫ‌ಜಲಪುರ ರಸ್ತೆಯ ರೈಲ್ವೆ ಮೇಲ್ಸೇತುವೆ ಹಾಗೂ ಮದರ ತೆರೆಸಾ ಬಳಿಯ ಜೇವರ್ಗಿ ರಸ್ತೆಯ ರೈಲ್ವೆ ಕಾಮಗಾರಿಯನ್ನು ಯಾವುದೇ ಸಬೂಬು ಹೇಳದೇ ಬರುವ ಡಿಸೆಂಬರ್‌ ಅಂತ್ಯದೊಳಗೆ ಪೂರ್ಣ ಮಾಡಬೇಕೆಂದು ಸಂಸದ ಡಾ| ಉಮೇಶ ಜಾಧವ ರೈಲ್ವೆ ಹಾಗೂ ಲೋಕೋಪಯೋಗಿ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಂಗಳವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ 2019-20ನೇ ಸಾಲಿನ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣೆ ಸಮಿತಿ ( ದಿಶಾ) ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಅಫ‌ಜಲಪುರ ರಸ್ತೆಯ ರೈಲ್ವೆ ಮೇಲ್ಸೆತುವೆ ಕಾಮಗಾರಿ 2015ರಲ್ಲಿಯೇ ಮುಗಿಯಬೇಕಿತ್ತು. ಇದಕ್ಕೆ ಎಲ್ಲರೂ ಜವಾಬ್ದಾರರಾಗಿದ್ದಿರಿ. ಈಗಲಾದರೂ ಕಾಮಗಾರಿ ಪೂರ್ಣಗೊಳಿಸುವತ್ತ ಮುಂದಾಗಿ ಎಂದು ತಾಕೀತು ಮಾಡಿದರು.

ಅಫ‌ಜಲಪುರ ರಸ್ತೆ ಮೇಲ್ಸೆತುವೆ ಕಾಮಗಾರಿ ಅರ್ಧಕ್ಕೆ ನಿಂತಿದ್ದರಿಂದ ಆ ಭಾಗದ ಜನರು ನರಕಯಾತನೆ ಅನುಭವಿಸುತ್ತಿದ್ದಾರೆ ಎಂಬುದು ತಮಗೆ ಗೊತ್ತಿಲ್ಲವೇ ಎಂದು ಪ್ರಶ್ನಿಸಿದರಲ್ಲದೇ ಇನ್ಮುಂದೆ ಆಮೆಗತಿ ಕಾಮಗಾರಿ ಸಲ್ಲದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಯ ಗಡಿ ಗ್ರಾಮ ಕುಲಾಲಿ ಸ್ಟೇಷನ್‌ ಬಳಿ ಮೇಲ್ಸೆತುವೆ ಹಾಗೂ ನೀಲೂರ ಬಳಿಯ ರೈಲ್ವೆ ಕೆಳ ಸೇತುವೆ ಕಾಮಗಾರಿ ಹಾಗೂ ಅದಕ್ಕೆ ಸಂಬಂಧಪಟ್ಟ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ತಮ್ಮೊಂದಿಗೆ ಇಲ್ಲಿಯ ವರೆಗೆ ಯಾಕೆ ಚರ್ಚೆ ಮಾಡಿಲ್ಲ ಎಂದು ಸಂಸದರು ಅಧಿಕಾರಿಗಳನ್ನು ಪ್ರಶ್ನಿಸಿದರು. ರೈಲ್ವೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸೊಲ್ಲಾಪುರ, ಸಿಕಂದ್ರಾಬಾದ್‌ ರೈಲ್ವೆ ವಿಭಾಗೀಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾಮಗಾರಿಗಳ ವಾಸ್ತವ ವರದಿ ಪಡೆಯಿರಿ ಎಂದು ಜಿಲ್ಲಾಧಿಕಾರಿಗೆ ಸಂಸದರು ಸೂಚನೆ ನೀಡಿದರು.

ರೈಲ್ವೆ ಅಧಿಕಾರಿ ತರಾಟೆಗೆ: ಕಲಬುರಗಿ ಜಿಲ್ಲೆಯಲ್ಲಿ ರೈಲ್ವೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಪೂರ್ಣ ಮಾಹಿತಿ ಇಲ್ಲದೇ ಸಭೆಗೆ ಬಂದಿದ್ದ ರೈಲ್ವೆ ಅಧಿಕಾರಿ ಅಭಿದೇಶ ಅವರನ್ನು ಸಂಸದರು ಹಾಗೂ ಶಾಸಕ ಪ್ರಿಯಾಂಕ್‌ ಖರ್ಗೆ ತರಾಟೆಗೆ ತೆಗೆದುಕೊಂಡರು. ಬೇಕಾಬಿಟ್ಟಿಯಾಗಿ ಹಾಳೆಯೊಂದರಲ್ಲಿ ಅರ್ಧ ಅಳಿಸಿ, ಇನ್ನರ್ಧ ಏನೇನೂ ಬರೆದುಕೊಂಡು ಬಂದಿದ್ದೀರಿ? ನಾಚಿಕೆ ಆಗುವುದಿಲ್ಲವೇ? ಸಭೆ ಬಗ್ಗೆ ಗಂಭೀರತೆ ಇಲ್ಲವೇ ಎಂದು ತರಾಟೆಗೆ ತೆಗೆದುಕೊಂಡರು.

ಶಾಲಾ ಕಾಂಪೌಂಡ್‌: ಉದ್ಯೋಗ ಖಾತ್ರಿ ಯೋಜನೆ ಅಡಿ ಶಾಲಾ ಕಾಂಪೌಂಡ್‌ಗಳನ್ನು ಕೈಗೊಳ್ಳಿ. ಶಾಲಾ ಕಾಂಪೌಂಡ್‌ಗಳು ಮಾದರಿ ಎನ್ನುವಂತೆ ನಿರ್ಮಾಣಗೊಳ್ಳಬೇಕು. ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಬೇಡಿ ಎಂದು ಸಂಸದ ಡಾ| ಉಮೇಶ ಜಾಧವ ಜಿಲ್ಲಾ ಪಂಚಾಯತ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಾಸಕ ಪ್ರಿಯಾಂಕ್‌ ಖರ್ಗೆ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆ ಕೆಲಸ ಮಾಡಿದ ಕೂಲಿಕಾರರಿಗೆ ಸಕಾಲಕ್ಕೆ ಕೂಲಿ ಸಿಗಬೇಕೆಂದರು.

ಸಿಆರ್‌ಎಫ್ ಸೇರಿದಂತೆ ಇತರ ಯೋಜನೆ ಅಡಿ ಕೇಂದ್ರದಿಂದ ಬಿಡುಗಡೆಯಾಗಬೇಕು. ಅದನ್ನು ಬಿಡುಗಡೆ ಮಾಡಬೇಕೆಂದು ಶಾಸಕ ಖರ್ಗೆ ಸಭೆ ಗಮನ ಸೆಳೆದರು. ಹಡಗಿಲ್‌ ಹಾರೂತಿಯಿಂದ ಸಾವಳಗಿ ನಡುವಿನ ರಸ್ತೆ ಖಾಸಗಿ ಜಮೀನ್ದಾರರೊಬ್ಬರು ನ್ಯಾಯಾಲಯಕ್ಕೆ ಹೋಗಿದ್ದರಿಂದ ರಸ್ತೆಯೇ ನೀರಲ್ಲಿ ಹೋಮ ಮಾಡಿದಂತಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಲಾಜಿ, ಶಾಸಕರಾದ ಎಂ.ವೈ.ಪಾಟೀಲ, ಸುಭಾಷ ಆರ್‌. ಗುತ್ತೇದಾರ, ಡಾ| ಅವಿನಾಶ ಜಾಧವ, ಖನಿಜ್‌ ಫಾತಿಮಾ, ವಿಧಾನ ಪರಿಷತ್‌ ಸದಸ್ಯ ಬಿ.ಜಿ. ಪಾಟೀಲ, ಜಿಲ್ಲಾಧಿಕಾರಿ ಬಿ. ಶರತ್‌, ಜಿಲ್ಲಾ ಪಂಚಾಯತ್‌ ಸಿಇಒ ಡಾ| ಪಿ. ರಾಜಾ, ಪಾಲಿಕೆ ಆಯುಕ್ತ ರಾಹುಲ್‌ ಪಾಂಡ್ವೆ ಮುಂತಾದವರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.