ದಿಗ್ಗಾಂವ ಶಂಭುಲಿಂಗೇಶ್ವರ ಜಾತ್ರೆ ಇಂದಿನಿಂದ
Team Udayavani, Apr 21, 2017, 3:24 PM IST
ಚಿತ್ತಾಪುರ: ತಾಲೂಕಿನ ದಿಗ್ಗಾಂವ ಶ್ರೀ ಶಂಭುಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಏ.21ರಂದು ಮಹಾ ರಥೋತ್ಸವ ನಡೆಯಲಿದೆ ಎಂದು ಶಂಭುಲಿಂಗೇಶ್ವರ ದೇವಸ್ಥಾನ ಸಮಿತಿ ಪ್ರಕಟಣೆ ತಿಳಿಸಿದೆ.
ಏ.21ರಂದು ಸಂಜೆ 4:00ಕ್ಕೆ ಮಾಲಿಗೌಡರ ಮನೆಯಿಂದ ಕುಂಭಮೇಳ ಹಾಗೂ ಪೊಲೀಸ್ ಗೌಡರ ಮನೆಯಿಂದ ತೇರಿನ ಕಳಸ ಮತ್ತು ಅಣ್ಣೆಪ್ಪಗೌಡರ ಮನೆಯಿಂದ ಮಾಯೆಮರ್ತಪ ದಿವಟಿಗೆ, ಪುರವಂತರ ಆಟದೊಂದಿಗೆ ಸಕಲ ಮಂಗಲ ವಾದ್ಯಗಳೊಂದಿಗೆ ದೇವಾಲಯಕ್ಕೆ ತಲುಪುವುದು.
ಸಂಜೆ 6:00ಕ್ಕೆ ಮಹಾ ರಥೋತ್ಸವ ನಡೆಯಲಿದೆ. ರಾತ್ರಿ 8:00ಕ್ಕೆಪಂಚಗೃಹ ಹಿರೇಮಠದ ಶ್ರೀ ಸಿದ್ದವೀರ ಶಿವಾಚಾರ್ಯರು ಮತ್ತು ಕಂಚಗಾರಹಳ್ಳ ಶ್ರೀ ಮಲ್ಲಯ್ಯಸ್ವಾಮಿ ಸ್ಥಾವರಮಠ ಅವರಿಂದ ಆಶೀವರ್ಚನ ಕಾರ್ಯಕ್ರಮ ನಡೆಯಲಿದೆ.
ರಾತ್ರಿ 9:30ಕ್ಕೆ ಗೀಗೀ ಪದ ಹಾಡುಗಾರಿಕೆ ಕಾರ್ಯಕ್ರಮ, ಏ. 22ರಂದು ಬೆಳಗ್ಗೆ 8:00ರಿಂದ 10:00ರ ವರೆಗೆ ಮತ್ತು ಸಂಜೆ 4:00ರಿಂದ 6:00ರ ವರೆಗೆ ಕುಸ್ತಿ ನಡೆಯಲಿದೆ. ಪ್ರತಿದಿನ ರಾತ್ರಿ 10:00ಕ್ಕೆ ನಾ ಸಾಕಿದ ಗಿಣಿ ಸಾಮಾಜಿಕ ನಾಟಕ ನಡೆಯಲಿದೆ ಎಂದು ತಿಳಿಸಿದ್ದಾರೆ.
ಇತಿಹಾಸ: ತಾಲೂಕಿನ ದಿಗ್ಗಾಂವದ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನ ಶ್ರೀಶೈಲ ಮಲ್ಲಿಕಾರ್ಜುನ ಕ್ಷೇತ್ರದ ಪ್ರತಿರೂಪವಾಗಿದೆ. ದಿಗ್ಗಾಂವ ಗ್ರಾಮದ ಮೂಲ ಹೆಸರು ದಿಗ್ಗಾವಿ. ಕಲ್ಯಾಣ ಚಾಲುಕ್ಯರ ಕಾಲದಿಂದ 14 ಗ್ರಾಮಗಳ ಮಧ್ಯದಲ್ಲಿರುವ ದಿಗ್ಗಾವಿ ಗ್ರಾಮದಲ್ಲಿ 360 ಲಿಂಗಗಳು, 360 ಬಾವಿಗಳು ಹಾಗೂ 360 ಚಾವುಲಿ ಭೂಮಿ ಇವೆ.
ಶಂಭುಲಿಂಗೇಶ್ವರ ದೇವಸ್ಥಾನಕ್ಕೆ ಅತ್ಯಂತ ವೈಭವದ ಗೋಪುರ ನಿರ್ಮಿಸಲಾಗಿದೆ. ಇಲ್ಲಿ ಉದ್ಬವ ಲಿಂಗವಾಗಿ ಹೊಂದಿರುವ ಶಂಭುಲಿಂಗೇಶ್ವರ ದೇವಸ್ಥಾನ ಪ್ರಸಿದ್ಧ ಪಡೆದಿದೆ. ಪೂಜೆ ಬಾವಿ, ಸ್ನಾನದ ಬಾವಿ, ತೀರ್ಥದ ಬಾವಿ, 60 ಲಿಂಗದ ಪರುಷ ಸ್ನಾನದ ಬಾವಿ, ಹೂವಿನ ಬಾವಿ, ಗಂಗಾ ಸ್ಥಳದ ಬಾವಿ, ಮನುಕುಲದ ಷಡುಣಗಳ ಶುದ್ಧಿಕರಣದ ಬಾವಿಗಳಿವೆ.
ಪೂರ್ವಾಭಿಮುಖವಾಗಿರುವ ಗುಡಿ ಆವರಣದಲ್ಲಿ 12 ಜ್ಯೋತಿ ರ್ಲಿಂಗಗಳಿವೆ. ಮಲ್ಲಿಕಾರ್ಜುನ ದೇವಾಲಯ, ಶ್ರೀ ವೀರಭದ್ರೇಶ್ವರ ದೇವಾಲಯ, ಭ್ರಮರಾಂಭೆ, ಕಾಳಿಕಾ ದೇವಾಲಯವಿದೆ. ಪಂಚಮುಖೀ ಪರಮೇಶ್ವರ ತ್ರಿಮೂರ್ತಿ ಲಿಂಗಗಳಿವೆ. ಮಲ್ಲಿಕಾರ್ಜುನ ಹಾಗೂ ಭ್ರಮರಾಂಬಿಕೆ ಹೊಂದಿರುವ 360 ಲಿಂಗಗಳು ಇರುವುದರಿಂದಲೇ ಇದು ಸಾಕ್ಷಾತ್ ಶ್ರೀಶೈಲ ಚಿಕ್ಕ ಕ್ಷೇತ್ರ ಎಂದು ಹೇಳಲಾಗುತ್ತಿದೆ.
ಇಲ್ಲಿ ಅನೇಕ ಶಾಸನಗಳನ್ನು ನೋಡಬಹುದಾಗಿದೆ. ನೂರಾರು ವರ್ಷಗಳ ಹಿಂದಿನ ರಥದ ಕಲ್ಲಿನ ಚಕ್ರಗಳು ಶಕ್ತಿಯುತವಾಗಿವೆ. ಹಿಂದೆ ರಥಕ್ಕೆ ಇದ್ದ ಬಿದರಿನ ತಡಕಿ ತೆಗೆದು 1985ರಲ್ಲಿ ಕಬ್ಬಿಣದ ತಡಕಿ ತಯಾರಿಸಿ ಅಲಂಕೃತಗೊಳಿಸಲಾಗಿದೆ. ಗ್ರಾಮಸ್ಥರು ಸೇರಿ ಜೀರ್ಣೋದ್ಧಾರ ಸಮಿತಿ ರಚಿಸಿಕೊಂಡಿದ್ದು, ದೇವಸ್ಥಾನ ಕಟ್ಟಡಗಳ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್