ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಸೌಲಭ್ಯ ವಂಚಿತ ಅಂಗವಿಕಲನ ಉಗ್ರವಾದ


Team Udayavani, Jul 29, 2021, 7:19 PM IST

ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಸೌಲಭ್ಯ ವಂಚಿತ ಅಂಗವಿಕಲನ ಉಗ್ರವಾದ

ವಾಡಿ (ಚಿತ್ತಾಪುರ): ಪದೇಪದೇ ಸರಕಾರಿ ಸೌಲಭ್ಯಗಳಿಂದ ವಂಚಿತವಾಗುತ್ತಿರುವ ಅಂಗವಿಕಲ ನೋರ್ವ ಕಣ್ಣೀರು ಹಾಕುತ್ತಲೆ ಪುರಸಭೆ ಮುಖ್ಯಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಉಗ್ರವಾಗಿ ವರ್ತಿಸಿದ ಘಟನೆ  ಗುರುವಾರ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಸಂಭವಿಸಿದೆ.

ಪಟ್ಟಣದ ನಿವಾಸಿ ಧರ್ಮ ರಾಥೋಡ್, ಸರಕಾರಿ ಸೌಲಭ್ಯಗಳಿಂದ ವಂಚಿತವಾದ ಅಂಗವಿಕಲ. ಸ್ಥಳೀಯ ರೈಲು ನಿಲ್ದಾಣದಲ್ಲಿ ವಾಹನಗಳ ಪಾರ್ಕಿಂಗ್ ಸೇವೆ ನಿರ್ವಹಿಸುತ್ತಿದ್ದ ಈತ ಲಾಕ್ಡೌನ್ ಸಂಕಷ್ಟಕ್ಕೆ ಸಿಲುಕಿ ಇದ್ದ ತಾತ್ಕಾಲಿಕ ಉದ್ಯೋಗವೂ ಕೈತಪ್ಪಿತು. ಪ್ರಧಾನಮಂತ್ರಿ ಅವಾಸ್ ಯೋಜನೆ ಅಡಿ ಮನೆ ನಿರ್ಮಿಸಿಕೊಳ್ಳಲು ಸಹಾಯಧನ ಲಭಿಸಲಿದೆ ಎಂಬ ಆಶಾಭಾವನೆಯಿಂದ ಉಳಿಸಿ ಅನುದಾನ ಬೀದಿಗೆ ಬಿದ್ದಿರುವ ಈ ವಿಕಲಾಂಗ ವ್ಯಕ್ತಿ, ಸಾಕಲು ಸಾದ್ಯವಾಗದೆ ಹೆಂಡರು ಮಕ್ಕಳನ್ನು ತವರಿಗೆ ಕಳುಹಿಸಿ ಗೋಳಾಡುತ್ತಿದ್ದಾನೆ. ಬದುಕು ಕಟ್ಟಿಕೊಳ್ಳಲು ಪರದಾಡುತ್ತಿದ್ದಾನೆ.

ಇತ್ತೀಚೆಗೆ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆಯವರು ಪುರಸಭೆ ಅನುದಾನದಲ್ಲಿ ಖರೀದಿಸಲಾಗಿದ್ದ ತ್ರೀಚಕ್ರ ವಾಹನಗಳನ್ನು ಇತರ ಅಂಗವಿಕಲರಿಗೆ ನೀಡಿರುವ ಸುದ್ದಿ ತಿಳಿದು ಕೆಂಡಾಮಂಡಲವಾದ ವಿಕಲಾಂಗ ಧರ್ಮಸಿಂಗ್ ರಾಠೋಡ, ನೇರವಾಗಿ ಪುರಸಭೆ ಕಚೇರಿಗೆ ಆಗಮಿಸುವ ಮೂಲಕ ಮುಖ್ಯಾಧಿಕಾರಿ ಚಿದಾನಂದ ಸ್ವಾಮಿ ಅವರೊಂದಿಗೆ ವಾಗ್ವಾದ ನಡೆಸಿದ್ದಾನೆ.

ಇದನ್ನೂ ಓದಿ: ನಟಿ ಶಿಲ್ಪಾ ಶೆಟ್ಟಿ ತಾಯಿಗೆ 1.6 ಕೋಟಿ ರೂ. ವಂಚನೆ

ಎಲ್ಲರಿಗೂ ಪದೇಪದೇ ವಿವಿಧ ಸೌಲತ್ತುಗಳನ್ನು ಓದಗಿಸುತ್ತೀರಿ. ಕಾಲುಗಳಿಲ್ಲದ ನನಗೇಕೆ ಅನ್ಯಾಯ ಮಾಡಿದಿರಿ ಎಂದು ಪ್ರಶ್ನಿಸುವ ಮೂಲಕ ಕಚೇರಿಯಲ್ಲೇ ಕೂಗಾಡಿದ್ದಾನೆ. ಕೋಪ ನೆತ್ತಿಗೇರಿಸಿಕೊಂಡು ಕಣ್ಣೀರು ಸುರಿಸಿದ್ದಾನೆ. ನಾನೇ ತಪ್ಪು ಮಾಡಿದ್ದೇನೆ? ಮನೆ ಕಟ್ಟಲು ಮಂಜೂರಾದ ಸರಕಾರದ ಸಹಾಯಧನ ಕೈ ಸೇರಲಿಲ್ಲ. ಉರುಳಿಸಿದ ಗುಡಿಸಲು ಮನೆ ಪುನಃಹ  ಕಟ್ಟಿಕೊಳ್ಳಲು ಸಾಧ್ಯವಾಗದೆ ಬೀದಿಗೆ ಬಿದ್ದಿದ್ದೇನೆ. ಕೊರೊನಾ ಲಾಕ್ಡೌನ್ ದಿಂದಾಗಿ  ರೈಲು ನಿಲ್ದಾಣದಲ್ಲಿ ವಾಹನ ಪಾರ್ಕಿಂಗ್ ಕೆಲಸವೂ ಹೋಗಿದೆ. ಯಾವೂದೇ ಪರಿಹಾರ ಸಿಕ್ಕಿಲ್ಲ.

ಈಗ ತ್ರೀಚಕ್ರ ವಾಹನದಿಂದಲೂ ವಂಚಿಸಿದ್ದೀರಿ. ನಾನು ಎಲ್ಲಿ ಹೋಗಿ ಸಾಯಲಿ? ನನಗೇಕೆ ಈ ಕಷ್ಟ? ನಾನು ಭೂಮಿ ಮೇಲೆ ಬದುಕಬಾರದೇ? ನಾನು ಮಾಡಿದ ಪಾಪವಾದರೂ ಏನು? ನಾನು ಅಂಕವಿಕಲನಲ್ಲವೇ? ಹೆಂಡರು ಮಕ್ಕಳಿಂದ ದೂರ ಇದ್ದು ದಿನವೂ ಸಾಯುತ್ತಿದ್ದೇನೆ. ಸೌಲಭ್ಯ ಕೊಡಿ ಅಥವ ಪುರಸಭೆ ಕಚೇರಿ ಮುಂದೇ ನನಗೆ ವಿಷ ಕೊಟ್ಟು ಸಾಯಿಸಿಬಿಡಿ. ಸಾಕಾಗಿದೆ ಈ ಜೀವನ ಎಂದು ಅವಲತ್ತುಕೊಂಡ ಪ್ರಸಂಗ ನಡೆದಿದೆ.

ಅಂಗವಿಕಲನ ಗೋಳಾಟ ತಿಳಿದು ಮೂಖವಿಸ್ಮಿತರಾದ ಪುರಸಭೆ ಅಧಿಕಾರಿಗಳು ಹಾಗೂ ಪುರಸಭೆ ಸದಸ್ಯರು, ಧರ್ಮಸಿಂಗ್ ನನ್ನು ಸಮಾಧಾನಪಡಿಸಲು ಮುಂದಾದರು. ಯಾವುದಕ್ಕೂ ಜಗ್ಗದ ನೋಂದ ಅಂಗವಿಕಲ ಧರ್ಮಸಿಂಗ್, ನನಗೆ ನ್ಯಾಯ ಕೊಡಿ ಎಂದು ಪಟ್ಟು ಹಿಡಿದು ಏಕಾಂಗಿಯಾಗಿಯೇ ಪ್ರತಿಭಟಿಸಿ ಪುರಸಭೆ ಆಡಳಿತವನ್ನೇ ನಡುಗಿಸಿದ್ದಾನೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.