ಅನುದಾನ ಹಂಚಿಕೆಯಲ್ಲೂ ತಾರತಮ್ಯ


Team Udayavani, Mar 22, 2019, 10:20 AM IST

gul-1.jpg

ಆಳಂದ: ತಾಲೂಕಿನ ಒಟ್ಟು 104 ಹಳ್ಳಿ 36 ತಾಂಡಾಗಳಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಸದ್ಯ ಹಲವೆಡೆ ಭೀಕರ
ಪರಿಸ್ಥಿತಿ ಎದುರಾಗಿದ್ದರೆ, ಇನ್ನರ್ಧ ಹಳ್ಳಿಗಳಲ್ಲಿ ಸಮಸ್ಯೆ ಹೇಳತೀರದಂತಾಗಿದೆ. ಹೀಗಿದ್ದರೂ ರಾಜ್ಯ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನೀತಿ ಅನುಸರಿಸಿದೆ.

ಮುಂಗಾರು ಮತ್ತು ಹಿಂಗಾರು ಮಳೆ ಸಕಾಲಕ್ಕೆ ಬಾರದೆ ಇರುವುದು, ನಿರೀಕ್ಷಿತ ಮಟ್ಟದಲ್ಲಿ ಅಂತರ್ಜಲ ಮಟ್ಟ ಸುಧಾರಿಸದೇ ಮತ್ತಷ್ಟು ಕುಸಿಯುತ್ತಿರುವುದು ಭೀಕರ ಜಲಕ್ಷಾಮಕ್ಕೆ ಕಾರಣವಾಗಿದೆ. ಇದರಿಂದ ಜನ-ಜಾನುವಾರುಗಳು ಪರದಾಡುವಂತೆ ಆಗಿದೆ. ಮತ್ತೂಂದೆಡೆ ರೈತರು ಜಾನುವಾರುಗಳಿಗೆ ಮೇವು ಸಂಗ್ರಹವಿಲ್ಲದೆ ಚಿಂತಾಕ್ರಾಂತರಾಗಿದ್ದಾರೆ. 

ಅನುದಾನ ಹಂಚಿಕೆ ತಾರತಮ್ಯ: ವಾಸ್ತವ್ಯದಲ್ಲಿ ಆಳಂದ ತಾಲೂಕು ಹಿಂಗಾರು ಹಾಗೂ ಮುಂಗಾರು ಮಳೆ, ಬೆಳೆ ಇಲ್ಲದೆ
ಜನ ನರಕಯಾತನೆ ಅನುಭವಿಸಿದ್ದಾರೆ. ಆದರೆ ಬರ ಅಧ್ಯಯನ ತಂಡಕ್ಕೆ ಸ್ಥಳೀಯ ಮಟ್ಟದ ಅಧಿಕಾರಿಗಳು ಮುಂಗಾರು ಕೈಬಿಟ್ಟು ಬರೀ ಹಿಂಗಾರು ಕುರಿತು ಬರ ಆವರಿಸಿದ ವರದಿ ನೀಡಿದ್ದರಿಂದ ಸರ್ಕಾರವು ಮುಂಗಾರಿನ ಪರಿಸ್ಥಿತಿ ಕೈಬಿಟ್ಟು ಹಿಂಗಾರಿಗೆ ಸೀಮಿತವಾಗಿ ನೀರಿನ ಪ್ರತಿಕಂತಿಗೆ 25ಲಕ್ಷ ರೂ. ಮಾತ್ರ ನೀಡತೊಡಗಿದೆ. 

ಹೀಗಾಗಿ ಬೆಳೆ ಪರಿಹಾರದಲ್ಲೂ ಅನ್ಯಾಯ ಎದುರಿಸುವಂತಾಗಿದೆ. ಆದರೆ ಮೇಲ್ಮಟ್ಟದ ಅಧಿಕಾರಿಗಳು ವಾಸ್ತವ್ಯ ವರದಿಯನ್ನಾಧರಿಸಿ ನೀರಿನ ಸಮಸ್ಯೆ ನಿವಾರಣೆಗೆ ಮುಂದಾಗದೆ ಹೋದರೆ ಜನ ರೊಚ್ಚಿಗೇಳುವುದು ನಿಶ್ಚಿತವಾಗಿದೆ. ಇಂಥ ಭೀಕರ ಪರಿಸ್ಥಿತಿ ಇಟ್ಟುಕೊಂಡು ಇದರ ನಿವಾರಣೆಗೆ ತಾಲೂಕು ಆಡಳಿತ ಅಂದಾಜಿನಂತೆ ತುರ್ತು ಕ್ರಮ ಕೈಗೊಳ್ಳಲು ಸಲ್ಲಿಸಿದ 3 ಕೋಟಿ ರೂ. ಅನುದಾನದ ಬೇಡಿಕೆಯಲ್ಲಿ 50 ಲಕ್ಷ ರೂ. ಮಾತ್ರ ನೀಡಿದ್ದು, ಬಾಕಿ ಅನುದಾನ ಬಿಡುಗಡೆಗಾದರೂ ರಾಜ್ಯ ಸರ್ಕಾರ ತಕ್ಷಣವೇ ಸ್ಪಂದಿಸುತ್ತದೆಯೇ ಎನ್ನುವುದನ್ನು ಕಾಯ್ದು ನೋಡಬೇಕಿದೆ.

ಸರ್ಕಾರ ಈಗಾಗಲೇ 3ನೇ ಕಂತಿನ ಹಣ ಸೇರಿ ಕೊಟ್ಟಿದ್ದು ಕೇವಲ 75 ಲಕ್ಷ ರೂ. ಮಾತ್ರ. ಹೀಗಾದರೆ ಯಾವ ಊರಿನ
ಸಮಸ್ಯೆ ನಿವಾರಣೆ ಮಾಡಲು ಸಾಧ್ಯವಿದೆ ಎನ್ನುವ ಪ್ರಶ್ನೆ ಅಧಿಕಾರಿಗಳದ್ದಾಗಿದೆ. 

ಕನಿಷ್ಠ ಒಂದು ಹಳ್ಳಿಗೆ ಕೊಳವೆ ಬಾವಿ, ಪಂಪಸೆಟ್‌, ಪೈಪಲೈನ್‌ ಹೀಗೆ ಕನಿಷ್ಠ 1ರಿಂದ 2 ಲಕ್ಷ ರೂ. ವರೆಗೆ ಖರ್ಚು
ತಗಲುತ್ತದೆ. ಈಗಾಗಲೇ ಎರಡು ಕಂತಿನಲ್ಲಿ ಬಿಡುಗಡೆಯಾದ 50 ಲಕ್ಷ ರೂ. ವೆಚ್ಚದಲ್ಲಿ ಪೂರ್ಣ ಪ್ರಮಾಣದಲ್ಲಿ ಹಳ್ಳಿಗಳಿಗೆ ನೀರುಣಿಸಲು ಸಾಧ್ಯವೇ ಇಲ್ಲ ಎನ್ನಲಾಗುತ್ತಿದೆ. 3ನೇ ಕಂತಿಗೆ 25 ಲಕ್ಷ ರೂ. ಬಿಡುಗಡೆ ಆದಲ್ಲಿ ಯಾವುದಾದರೂ ಒಂದಿಷ್ಟು ಹಳ್ಳಿಗಳಿಗೆ ಸಮಾಧಾನ ಮಾಡಬಹುದು ಎನ್ನಲಾಗುತ್ತಿದೆ.

11 ಹಳ್ಳಿಗೆ ಟ್ಯಾಂಕರ್‌: ತಾಲೂಕಿನ ಹೋಬಳಿ ಕೇಂದ್ರ ಮಾನದಹಿಪ್ಪರಗಾ, ಮೋಘಾ (ಬಿ), ಗೋಳಾ (ಬಿ), ಕಾಮನಳ್ಳಿ, ಕಾತ್ರಾಬಾದ, ವಿ.ಕೆ. ಸಲಗರ, ದಣ್ಣೂರ, ಧರಿ ತಾಂಡಾದಲ್ಲಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಕೈಗೊಳ್ಳಲಾಗುತ್ತಿದೆ. ಅಲ್ಲದೆ, ತೀರ್ಥ ಜಮಗಾ ಆರ್‌. ತಾಂಡಾಗಳಲ್ಲಿ ಖಾಸಗಿಯವಾಗಿ ನೀರು ಖರೀದಿಸಿ ಪೂರೈಸಲಾಗುತ್ತಿದ್ದು, ಇನ್ನು 40 ಹಳ್ಳಿಗೆ ಟ್ಯಾಂಕರ್‌ ನೀರಿನ ಬೇಡಿಕೆ ಇದೆ ಎನ್ನುತ್ತಾರೆ ಅಧಿಕಾರಿಗಳು. 

ಬರ ಪರಿಹಾರ ಕಾಮಗಾರಿ ಮತ್ತು ಕುಡಿಯುವ ನೀರು ಪೂರೈಕೆ ಅನುದಾನ ಬಿಡುಗಡೆಯಲ್ಲಿ ಆಳಂದ ತಾಲೂಕನ್ನು ರಾಜ್ಯ ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಕಡೆಗಣಿಸಿದ್ದಾರೆ. ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಮೂರು ಕಂತುಗಳಲ್ಲಿ ಒಟ್ಟು 1.50 ಕೋಟಿ ರೂ. ಅನುದಾನ ಒದಗಿಸಿದ್ದು, ಆಳಂದ ತಾಲೂಕಿಗೆ ಕೇವಲ 50 ಲಕ್ಷ ರೂ. ಅನುದಾನ ನೀಡಲಾಗಿದೆ. ಬರಗಾಲ ಅನುದಾನ ಬಿಡುಗಡೆಯಲ್ಲೂ ತಾರತಮ್ಯ ನೀತಿ ಅನುಸರಿಸಿರುವುದು ಖಂಡನೀಯ
 ಸುಭಾಷ ಗುತ್ತೇದಾರ, ಶಾಸಕರು

„ಮಹಾದೇವ ವಡಗಾಂವ

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.