ಅವ್ಯವಹಾರ: ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಮುತ್ತಿಗೆ


Team Udayavani, Jan 31, 2019, 9:03 AM IST

gul-2.jpg

ಅಫಜಲಪುರ: ಹೊರಗುತ್ತಿಗೆ ನೌಕರರ ವೇತನದಲ್ಲಿ ಸುಮಾರು 4.5 ಲಕ್ಷ ರೂ.ಗೂ ಹೆಚ್ಚು ಅವ್ಯವಹಾರವಾಗಿದೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಹೊರಗುತ್ತಿಗೆ ನೌಕರರು ಬುಧವಾರ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿದರು.

ಈ ಕುರಿತಂತೆ ಪ್ರಥಮ ದರ್ಜೆ ಸಹಾಯಕ ಶ್ರೀಶೈಲ ಸಾಲೋಟಗಿಯನ್ನು ತರಾಟೆ ತೆಗೆದುಕೊಂಡ ಹೊರಗುತ್ತಿಗೆ ಕಾರ್ಮಿಕರು ತಾಲೂಕಿನಲ್ಲಿ ಒಟ್ಟು 32 ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರತಿ ತಿಂಗಳು ಅವರ ಸಂಬಳದಲ್ಲಿ ಶೇ. 2ರಷ್ಟು ಟಿಡಿಎಸ್‌ ಕಡಿತವಾಗಿ ಉಳಿದ ಹಣ ಸಂದಾಯವಾಗಬೇಕು. ಆದರೆ ನೀವು ಎಸ್‌ಟಿಒ ಮೌಖೀಕ ಆದೇಶದ ಮೇರೆಗೆ ಶೇ. 20ರಷ್ಟು ಟಿಡಿಎಸ್‌ ಕಡಿತಗೊಳಿಸಿದ್ದಾಗಿ ಒಪ್ಪಿಕೊಂಡಿದ್ದಿರಿ. ಈ ಕುರಿತು ಎಸ್‌ಟಿಒ ಅವರನ್ನು ದೂರವಾಣಿ ಮುಖಾಂತರ ಕೇಳಿದರೆ ಅವರು ಇದನ್ನು ತಳ್ಳಿಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ರಾಜು ಆರೇಕರ್‌, ಎಸ್‌ಟಿಒ ಅವರು ದೂರವಾಣಿಯಲ್ಲಿ ಈ ಆರೋಪ ತಳ್ಳಿ ಹಾಕಿದ್ದು, ಸರ್ಕಾರಿ ಆದೇಶವಿಲ್ಲದ್ದನ್ನು ಮಾಡಲು ಬರುವುದಿಲ್ಲ. ಯಾವುದೇ ಮೌಖೀಕ ಆದೇಶ ನೀಡಿಲ್ಲ ಎಂದಿದ್ದಾರೆ. ಹಾಗಾದರೆ ಒಬ್ಬ ನೌಕರರಿಂದ ಪ್ರತಿ ತಿಂಗಳಿಗೆ ಎರಡು ಸಾವಿರ ರೂ. ಉಳಿಕೆಯಾಗುತ್ತಿದೆ. ಈ ಹಣ ಏನಾಗಿದೆ? ಏನು ಮಾಡಿದ್ದೀರಿ ಎಂದು ಪ್ರಥಮ ದರ್ಜೆ ಸಹಾಯಕರನ್ನು ಪ್ರಶ್ನಿಸಿದರೆ ವಾರದೊಳಗೆ ಸೆಟಲ್‌ಮೆಂಟ್ ಮಾಡುತ್ತೇನೆ. ನೀವ್ಯಾಕೆ ಕಚೇರಿಗೆ ಬಂದಿದ್ದೀರಿ ಎಂದು ಜೋರು ಮಾಡುತ್ತಿದ್ದಿರಾ ಎಂದು ತರಾಟೆ ತೆಗೆದುಕೊಂಡರು.

ಮುಖಂಡರಾದ ಶ್ರೀಶೈಲ ಸಿಂಗೆ, ರವಿ ಗೌರ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿದೆ. ಇಲ್ಲಿನವರಿಗೆ ಯಾರು ಹೇಳುವವರು ಇಲ್ಲದಂತಾಗಿದೆ. ಪದೆ ಪದೇ ಸೆಟಲ್‌ ಮೆಂಟ್ ಎನ್ನುತ್ತಾರೆ. ಇವರು ಸರ್ಕಾರಿ ನೌಕರರೋ ಅಥವಾ ರಿಯಲ್‌ ಎಸ್ಟೇಟ್ ಬ್ರೋಕರೋ ತಿಳಿಯುತ್ತಿಲ್ಲ. ಕಡಿತಗೊಳಿಸಿದ ಹಣವನ್ನು ನೌಕರರಿಗೆ ವಿತರಿಸಬೇಕು. ಇಲ್ಲದಿದ್ದರೆ ಪ್ರ.ದ ಸಹಾಯಕನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗುತ್ತದೆ ಎಂದು ಎಚ್ಚರಿಸಿದರು.

ಮುಖಂಡರಾದ ಶಾಮರಾವ್‌ ದೊಡ್ಮನಿ ಬಂದರವಾಡ, ರಾಜು ಹೊಸ್ಮನಿ, ಜೈಭೀಮ ಹೊಸ್ಮನಿ ಹಾಗೂ 32 ಜನ ಹೊರ ಗುತ್ತಿಗೆ ನೌಕರರು ಈ ಸಂದರ್ಭದಲ್ಲಿದ್ದರು.

ಎರಡು ದಿನಗಳಲ್ಲಿ ಸಂಪೂರ್ಣ ಮಾಹಿತಿ ಪಡೆದು ಆರೋಪಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅವ್ಯವಹಾರ ವಾದ ಎಲ್ಲ ಹಣವನ್ನು ಪ್ರಥಮ ದರ್ಜೆ ಸಹಾಯಕ ಹಾಗೂ ಅವರಿಗೆ ಸಹಕರಿಸಿದವರಿಂದ ಪಡೆದು ಹೊರಗುತ್ತಿಗೆ ನೌಕರರ ಖಾತೆಗೆ ಜಮಾ ಮಾಡಲಾಗುತ್ತದೆ.
• ಚೇತನ ಗುರಿಕಾರ,ತಾಲೂಕು ಸಮಾಜ ಕಲ್ಯಾಣಾಧಿಕಾರಿ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.