ಪಿಎಸ್ಐ ನೇಮಕಾತಿ ಅಕ್ರಮ : ದಿವ್ಯಾ ಹಾಗರಗಿ ಸೇರಿ ಆರು ಮಂದಿಗೆ ಬಂಧನ ವಾರೆಂಟ್ ಜಾರಿ
Team Udayavani, Apr 26, 2022, 10:19 PM IST
ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ತಲೆಮರೆಸಿಕೊಂಡಿರುವ ಮಾಸ್ಟರ್ ಮೈಂಡ್ ಆಗಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸೇರಿ ಆರು ಜನರಿಗೆ ಅರೆಸ್ಟ್ ವಾರಂಟ್ ಜಾರಿಗೊಂಡಿದೆ. ಇದರಿಂದ ಅವರಿಗೆ ಹೊಸ ಕಂಟಕ ಎದುರಾದಂತಾಗಿದೆ.
ದೇಶದ ಗಮನ ಸೆಳೆದಿದ್ದ ಮುಂಬೈ ಸ್ಫೋಟ ಪ್ರಕರಣದಲ್ಲಿ ದಾವೂದ್ ಇಬ್ರಾಹಿಂಗೆ ಜಾರಿಗೊಳಿಸಿದ ಮಾದರಿಯಲ್ಲಿಯೇ ತಲೆ ಕರೆಸಿಕೊಂಡು ಓಡಾಡುವ ಮೂಲಕ ತನಿಖೆಗೆ ಅಸಹಕಾರ ತೋರುತ್ತಿರುವ ಆರು ಜನ ಆರೋಪಿತರಿಗೆ ನ್ಯಾಯಾಲಯ ಬಂಧನ ವಾರೆಂಟ್ ಜಾರಿ ಮಾಡಿದೆ.
ರಾಜ್ಯದಲ್ಲಿ ಜರಗಿದ ಕ್ರಿಮಿನಲ್ ಕೇಸ್ ಗಳಲ್ಲಿ ಈ ತೆರನಾದ ಅರೆಸ್ಟ್ ವಾರೆಂಟ್ ಜಾರಿ ಮಾಡುವುದು ತೀರಾ ವಿರಳ.
ಅದರಲ್ಲೂ ತನಿಖಾ ಹಂತದಲ್ಲಿ ವಾರೆಂಟ್ ಜಾರಿಯಾದರೆ ಆರೋಪಿತರು ಎಲ್ಲಿದ್ದರೂ ಬಂದು ಸಿಐಡಿಗೆ ಇಲ್ಲವೇ ನ್ಯಾಯಾಲಯದ ಹಾಜರಾಗಲೇಬೇಕಾಗುತ್ತದೆ. ಇಲ್ಲದಿದ್ದರೆ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶವಿದೆ.
ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮದ ಮಾಸ್ಟರ್ ಮೈಂಡ್ ದಿವ್ಯಾ ಹಾಗರಗಿ, ಮಂಜುನಾಥ್ ಮೇಳಕುಂದಿ, ರವೀಂದ್ರ ಮೇಳಕುಂದಿ, ಅರ್ಚನಾ, ಕಾಶಿನಾಥ್, ಶಾಂತಿಬಾಯಿಗೆ ಕಲಬುರಗಿಯ 3ನೇ ಜೆಎಂಎಫ್ಸಿ ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿದೆ.
ಇದನ್ನೂ ಓದಿ : ಕರುಣಾನಿಧಿ ಬರ್ತ್ಡೇ ಇನ್ನು ಸರ್ಕಾರಿ ಕಾರ್ಯಕ್ರಮ: ಎಂ.ಕೆ.ಸ್ಟಾಲಿನ್
ಮುಂಬೈ ಸ್ಫೋಟ ಪ್ರಕರಣ ಉಲ್ಲೇಖಿಸಿ ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಅದನ್ನು ಮನ್ನಿಸಿ ನ್ಯಾಯಾಲಯವು ವಾರಂಟ್ ಜಾರಿ ಮಾಡಿದೆ.
ವಾರದೊಳಗಡೆ ಆರೋಪಿತರು ಶರಣಾಗದಿದ್ದರೆ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.
ಕಳೆದ 15 ದಿನಗಳಿಂದ ದಿವ್ಯಾ ಸೇರಿ ಆರು ಜನ ಆರೋಪಿಗಳು ಸಿಐಡಿಯಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದಾರೆ.
ಸಿಐಡಿಯಿಂದ 6 ವಿಶೇಷ ತಂಡ ರಚನೆ: ದಿವ್ಯಾ ಹಾಗರಗಿ ಮತ್ತಿತರರ ಬಂಧನಕ್ಕೆ ಸಿಐಡಿ ತೀವ್ರ ಶೋಧ ಕಾರ್ಯಾರಂಭಿಸಿದೆ. ಡಿಜಿಪಿ ಪಿ.ಎಸ್. ಸಂಧು ಸೂಚನೆಯಂತೆ ಬಂಧನಕ್ಕೆ ಆರು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ.
ಸಿಐಡಿಯ ಆರು ತಂಡಗಳು ಕೆಲಸ ಮಾಡುತ್ತಿವೆ. ಶೋಧ ನಡೆಸುತ್ತಿದ್ದರೂ ಇದುವರೆಗೂ ದಿವ್ಯಾ ಎಲ್ಲಿ ಇದ್ದಾರೆ ಸುಳಿವು ಇದುವರೆಗೂ ಪತ್ತೆ ಆಗಿಲ್ಲ. ಇದು ಸಿಐಡಿಗೆ ತಲೆ ನೋವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ