ಆಲಸ್ಯ ಬಿಟ್ಟು ತಪ್ಪದೇ ಮತದಾನ ಮಾಡಿ
Team Udayavani, Apr 8, 2018, 4:55 PM IST
ಕಲಬುರಗಿ: ನಾನು ಮತದಾನ ಮಾಡದಿದ್ದರೆ ಅಥವಾ ನನ್ನ ಒಂದು ಮತದಾನದಿಂದ ಏನಾದೀತು ಎಂಬ ಆಲಸ್ಯತನ ಬಿಟ್ಟು, ಮೇ 12ರಂದು ನಡೆಯುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಪ್ರೋಬೇಷನರ್ ಐ.ಎ.ಎಸ್. ಅಧಿಕಾರಿ ಆಕೃತಿ ಸಾಗರ ಕರೆ ನೀಡಿದರು.
ನಗರದ ಇಎಸ್ಐಸಿ ಆಸ್ಪತ್ರೆ ಆಡಿಟೋರಿಯಂ ಸಭಾಂಗಣದಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ನಿರಂತರ ವೈದ್ಯಕೀಯ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಗರ ನಿವಾಸಿಗಳು ಮತದಾನ ದಿನದಂದು ರಜಾ
ದಿನವನ್ನಾಗಿ ಪರಿಗಣಿಸಿ ಮತದಾನದಿಂದ ವಿಮುಖರಾಗುತ್ತಿರುವುದು ಉತ್ತಮ ನಾಯಕರನ್ನು ಆಯ್ಕೆ ಮಾಡುವ ಅವಕಾಶದಿಂದ ತಪ್ಪಿಸಿಕೊಂಡಂತೆ ಎಂದು ಹೇಳಿದರು. ಗ್ರಾಮೀಣ ಪ್ರದೇಶದಲ್ಲಿ ಮತದಾನ ಪ್ರಮಾಣ ಹೆಚ್ಚಿದೆ. ಆದರೆ ನಗರ ಪ್ರದೇಶದಲ್ಲಿ ಮತದಾರರು ಮತದಾನ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬಾರದಿರುವುದು ವಿಷಾಧನೀಯ.
ಇದರಿಂದಲೆ ರಾಜಧಾನಿ ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ತುಂಬಾ ಕಡಿಮೆ ಇದೆ. ಉತ್ತಮ ನಾಯಕರ ಆಯ್ಕೆಗೆ ಪ್ರತಿ ಮತ ಇಲ್ಲಿ ಮುಖ್ಯ ಎಂಬುದನ್ನು ಪ್ರಜೆಗಳು ಮನಗಾಣಬೇಕು ಎಂದು ಹೇಳಿದರು. ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸ್ವೀಪ್ ಸಮಿತಿಯಿಂದ ಮತದಾರರಲ್ಲಿ ಜಾಗೃತಿ ಮೂಡಿಸಲು ಮತ್ತು ಮತದಾನದ ಹಕ್ಕು ತಿಳಿಸಲು ಹಮ್ಮಿಕೊಂಡಿರುವ
ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.
ಇಎಸ್ಐಸಿ ಮೆಡಿಕಲ್ ಕಾಲೇಜಿನ ಡೀನ್ ಡಾ| ಪ್ರಶಾಂತ ಪೌನಿಪಗಾರ, ಆಸ್ಪತ್ರೆ ಅಕಾಡೆಮಿಕ್ ರಿಜಿಸ್ಟ್ರಾರ್ ಡಾ| ಎಚ್.ಎಸ್. ಕಡ್ಲಿಮಟ್ಟಿ, ಉಪನಿರ್ದೇಶಕ(ಆಡಳಿತ) ವಿಜಯಕುಮಾರ, ಜಿಲ್ಲಾ ಆರ್.ಸಿ. ಎಚ್. ಅಧಿಕಾರಿ ಡಾ| ಎ.ಎಸ್. ರುದ್ರವಾಡಿ, ಸುವರ್ಣಾ ಆರೋಗ್ಯ ಸುರಕ್ಷಾ ಟ್ರಸ್ಟ್ನ ಪ್ರಾದೇಶಿಕ ಸಂಯೋಜಕ ಡಾ|ಅಲಿ ಬಾಬಾ, ಎಂ.ಆರ್. ಮೆಡಿಕಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ಕೆ.ಎಂ.ಸಿ. ವೀಕ್ಷಕಿ ಡಾ| ರೂಪಾ, ಡಾ| ಅನೀಲ ತಾಳಿಕೋಟಿ, ಡಾ|ವಿನೋದ ಕಾಂಬ್ಳೆ, ಡಾ| ಐ. ಅಮೃತಾ ಸ್ವಾತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ