ಗಣಿಗಾರಿಕೆಯಿಂದ ಪರಿಸರಕ್ಕೆ ಆಗದಿರಲಿ ಧಕ್ಕೆ


Team Udayavani, Feb 15, 2019, 6:00 AM IST

gul-1.jpg

ಕಲಬುರಗಿ: ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆಯಲ್ಲಿ ಅತಿ ಹೆಚ್ಚು ಗಣಿಗಾರಿಕೆಗೆ ಪರವಾನಗಿ ನೀಡಲಾಗಿದೆ. ಗಣಿ ಗುತ್ತಿಗೆ ಪಡೆದವರು ಪರಿಸರ ಹಾಳು ಮಾಡದಂತೆ ಎಚ್ಚರಿಕೆ ವಹಿಸಿ ಗಣಿಗಾರಿಕೆಯಲ್ಲಿ ತೊಡಗಬೇಕಾದ ಅವಶ್ಯಕತೆಯಿದೆ ಎಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ ಹೇಳಿದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಜಿಲ್ಲಾಧಿಕಾರಿ ಕಾರ್ಯಾಲಯ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಗಣಿ ಗುತ್ತಿಗೆ ಪಡೆದವರಿಗೆ ಗಣಿ-ಭೂವಿಜ್ಞಾನ ಇಲಾಖೆ ಕಾಯ್ದೆ ಮತ್ತು ನಿಯಮ, ಗಣಿ ಸುರಕ್ಷತೆ ವಿಧಾನ, ಸ್ಫೋಟಕ ವಿಧಾನ ಮತ್ತು ಪರಿಸರ ಸಂರಕ್ಷಣೆ ಕುರಿತು ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆ ಸಮನಾಗಿ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಕಲಬುರಗಿ ವಿಭಾಗದಲ್ಲಿ ಹೆಚ್‌.ಕೆ.ಆರ್‌.ಡಿ.ಬಿ.ಯಿಂದ ಭೃಹತ್‌ ಕಾಮಗಾರಿಗಳನ್ನು ಹಮ್ಮಿಕೊಂಡಿದ್ದು, ಅವುಗಳಿಗೆ ಅವಶ್ಯಕವಿರುವ ಮರಳು, ಜೆಲ್ಲಿ, ಕಲ್ಲುಗಳಂತಹ ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ. 

ಗಣಿ ಗುತ್ತಿಗೆ ಪಡೆದವರು ಗಣಿ ಮತ್ತು ಭೂ ವಿಜ್ಞಾನಗಳ ಅಧಿನಿಯಮ ಪರಿಪಾಲಿಸಬೇಕು. ಈ ಹಿಂದೆ ಪರಿಸರಕ್ಕೆ ಸಂಬಂಧಪಟ್ಟ ಕಾಳಜಿ ಕಡಿಮೆ ಇತ್ತು. ಇತ್ತೀಚೆಯ ಎರಡು ದಶಕಗಳಿಂದ ಪರಿಸರ ಜಾಗೃತಿ ಹೆಚ್ಚಾಗಿದ್ದು, ವಿವಿಧ ಸಂಸ್ಥೆಗಳು ಪರಿಸರ ಸಂರಕ್ಷಣೆಯಲ್ಲಿ ತೊಡಗಿವೆ. ರಾಷ್ಟ್ರೀಯ ಹಸಿರು ಟ್ರಿಬುನಲ್‌ ಸಹಿತ ಪರಿಸರಕ್ಕೆ ಹಾನಿ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುತ್ತಿದೆ ಎಂದರು. 

ಜಿಲ್ಲೆಯಲ್ಲಿ 16 ಬೃಹತ್‌ ಮತ್ತು 180 ಸಣ್ಣ ಗಣಿ ಗುತ್ತಿಗೆಗೆ ಪರವಾನಗಿ ನೀಡಲಾಗಿದೆ. ಗಣಿ ಗುತ್ತಿಗೆ ಪಡೆದವರು ಗಣಿ ನಿಯಮ ಪಾಲಿಸದಿದ್ದಲ್ಲಿ ಗಣಿ ನಿಯಮಗಳ ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ವಹಿಸಲಾಗುವುದು. ಜಿಲ್ಲೆಯಲ್ಲಿ ಮರಳು ಗಣಿಗಾರಿಕೆ ಸೂಕ್ತ ರೀತಿಯಲ್ಲಿ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ನ್ಯಾಯಯುತವಾಗಿ ಮರಳು ಗಣಿಗಾರಿಕೆ ಮಾಡುವವರಿಗೆ ಯಾವುದೇ ತೊಂದರೆಯಿಲ್ಲ.

ಅಕ್ರಮ ಮರಳು ಸಾಗಾಣಿಕೆ ತಡೆಯಲು ಕಟ್ಟಿಸಂಗಾವಿ ಹತ್ತಿರ ಚೆಕ್‌ಪೋಸ್ಟ್‌ ನಿರ್ಮಿಸಲಾಗಿದ್ದು, ದೇವದುರ್ಗ, ಶಹಾಪುರ ಕಡೆಗಳಿಂದ ಜಿಲ್ಲೆಗೆ ಆಗಮಿಸುವ ಮರಳಿನ ಮೇಲೆ ನಿಗಾ ಇಡಲಾಗಿದೆ ಎಂದರು.

ಬಳ್ಳಾರಿ ವಲಯದ ಮೈನ್ಸ್‌ ಸೇಫ್ಟ ನಿರ್ದೇಶಕ ಮನೀಶ ಮುರುಕುಟೆ ಮಾತನಾಡಿ, ಗಣಿ ವ್ಯವಸ್ಥಾಪಕರು ಗಣಿಯಲ್ಲಿ ಸಣ್ಣ ಪ್ರಮಾಣದ  ಸ್ಪೋಟಕ ಬಳಸಲು ಸಶಕ್ತರಾಗಿರುತ್ತಾರೆ. 33 ಮಿಲಿ ಮೀಟರ್‌ ವ್ಯಾಸ ಹಾಗೂ ಎರಡು ಮೀಟರ್‌ಗಿಂತ ಹೆಚ್ಚಿನ ಆಳದಲ್ಲಿ ಸ್ಪೋಟಕ ಬಳಸುವವರು ಡಿ.ಜಿ.ಎಂ. ಎಸ್‌.ದಿಂದ ವಿಶೇಷ ಪರವಾನಗಿ ಪಡೆಯಬೇಕು. ಪರವಾನಗಿ ಇಲ್ಲದೇ ಸ್ಪೋಟಕ ಬಳಸುವುದು ಗಂಭೀರ ಅಪರಾಧವಾಗಿದೆ ಎಂದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪಿ. ರೇಣುಕಾದೇವಿ, ಭೂ ವಿಜ್ಞಾನಿಗಳು, ಗಣಿ ಗುತ್ತಿಗೆ ಪಡೆದವರು ಹಾಜರಿದ್ದರು. ಪರವಾನಗಿ ಕಡ್ಡಾಯ ದೇಶದಲ್ಲಿ 89 ತರಹದ ಖನಿಜಗಳ ಗಣಿಗಾರಿಕೆ ನಡೆಯುತ್ತಿದೆ. ದೇಶದ ಒಟ್ಟು ದೇಶಿಯ ಉತ್ಪಾದನೆಯ ಶೇ. 2.5ರಷ್ಟು ಭಾಗ ಖನಿಜ ಗಣಿಗಾರಿಕೆಯದ್ದಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಬಳ್ಳಾರಿಯ ಡಿ.ಜಿ.ಎಂ.ಎಸ್‌. ಕಚೇರಿಯಿಂದ 13 ಲೈಮ್‌ ಸ್ಟೋನ್‌ ಹಾಗೂ ಎರಡು ಸ್ಟೋನ್‌ ಪಾಲಿಶ್‌ ಗಣಿಗಾರಿಕೆಗೆ ಪರವಾನಗಿ ನೀಡಲಾಗಿದೆ. ಪರವಾನಗಿ ಪಡೆದ ಗಣಿಗಳ ಮೇಲೆ ಡಿ.ಜಿ.ಎಂ.ಎಸ್‌. ಕಚೇರಿ ಕಾಲಕಾಲಕ್ಕೆ ತಪಾಸಣೆ ಕೈಗೊಂಡು ಪರಿಶೀಲಿಸುತ್ತದೆ. ಪರವಾನಗಿ ಪಡೆಯದ ಗಣಿಗಳ ಮೇಲೆ ರಾಜ್ಯ ಸರ್ಕಾರ ರಾಜ್ಯದ ಖನಿಜ ಕಳುವು ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳುತ್ತದೆ. ಕಾರಣ ಗಣಿಗಾರಿಕೆಯಲ್ಲಿ ತೊಡಗಿರುವ ಎಲ್ಲರೂ ಕಡ್ಡಾಯವಾಗಿ ಪರವಾನಗಿ ಪಡೆಯಬೇಕು.  ಮನೀಶ ಮುರುಕುಟೆ, ಬಳ್ಳಾರಿ ವಲಯದ ಮೈನ್ಸ್‌ ಸೇಫ್ಟಿ ನಿರ್ದೇಶಕ 

ಟಾಪ್ ನ್ಯೂಸ್

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.