ಜೀವ ಉಳಿಸಲು ರಕ್ತದಾನ ಮಾಡಿ


Team Udayavani, Oct 31, 2018, 5:10 PM IST

31-october-20.gif

ಗದಗ: ರಕ್ತದಾನ ಅತ್ಯಂತ ಪವಿತ್ರ ಕೆಲಸ. ರಕ್ತದಾನದಿಂದ ಒಂದು ಜೀವ ಉಳಿಯುತ್ತದೆ ಎಂದು ಜಿ.ಪಂ. ಅಧ್ಯಕ್ಷ ಶಿವಲಿಂಗಪ್ಪ ಬಳಿಗಾರ ಹೇಳಿದರು. ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್‌ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ವಾರ್ತಾ ಇಲಾಖೆ, ಜಿಲ್ಲಾ ರೆಡ್‌ ಕ್ರಾಸ್‌ ಸಂಸ್ಥೆ ಸೇರಿದಂತೆ ವಿವಿಧ ಇಲಾಖೆ ಹಾಗೂ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ನಗರದ ಕನಕದಾಸ ಶಿಕ್ಷಣ ಸಮಿತಿಯ ಎಂಎಸ್‌ಡಬ್ಲ್ಯೂ ಕಾಲೇಜಿನಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ವೈದ್ಯಕೀಯ ಕ್ಷೇತ್ರದಲ್ಲಿ ಆಗಿರುವ ಸಂಶೋಧನೆಗಳ ಫಲವಾಗಿ ಮಾನವನ ಅಂಗಾಂಗ ಬದಲಾವಣೆ ಸಾಧ್ಯವಾಗಿದ್ದರೂ ಕೃತಕವಾಗಿ ರಕ್ತವನ್ನು ತಯಾರಿಸುವಷ್ಟು ವಿಜ್ಞಾನ ಬೆಳೆದಿಲ್ಲ. ಅಪಘಾತ, ಹೆರಿಗೆ, ಗಂಭೀರ ಕಾಯಿಲೆಗಳ ಶಸ್ತ್ರ ಚಿಕಿತ್ಸೆ ವೇಳೆ ರೋಗಿಗಳಿಗೆ ರಕ್ತ ಅಗತ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಅಗತ್ಯ ಪ್ರಮಾಣದಲ್ಲಿ ರಕ್ತಕ್ಕಾಗಿ ಪರದಾಡುವಂತಾಗುತ್ತದೆ. 18ರಿಂದ 60 ವರ್ಷ ವಯಸ್ಸಿನ ಆರೋಗ್ಯವಂತರು ರಕ್ತದಾನ ಮಾಡಬಹುದಾಗಿದೆ. ಈ ಹಿನ್ನೆಲೆಯಲ್ಲಿ ಯುವ ಸಮೂಹ ಮೇಲಿಂದ ಮೇಲೆ ರಕ್ತದಾನದ ಮೂಲಕ ಸಾವು-ಬದುಕಿನ ಹೋರಾಟ ನಡೆಸುವವರಿಗೆ ಜೀವದಾನ ನೀಡಿದಂತಾಗುತ್ತದೆ ಎಂದು ತಿಳಿಸಿದರು. ಜಿ.ಪಂ. ಸಿಇಒ ಮಂಜುನಾಥ ಚವ್ಹಾಣ ಮಾತನಾಡಿ, ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ರಕ್ತದಾನದ ಅವಶ್ಯಕತೆ ಉಂಟಾಗುತ್ತದೆ. ರಕ್ತದಾನದಿಂದ ದೇಹದಲ್ಲಿ ಹೊಸ ರಕ್ತ ಉತ್ಪಾದನೆಯಾಗುತ್ತದೆ. ದೇಹದಲ್ಲಿನ ಕೊಲೆಸ್ಟ್ರಾಲ್‌ ಕಡಿಮೆಯಾಗುತ್ತದೆ. ರಕ್ತದಾನ ಮಾಡುವುದು ಪ್ರತಿ ಆರೋಗ್ಯವಂತ ವ್ಯಕ್ತಿಯ ಕರ್ತವ್ಯವೆಂದು ಭಾವಿಸಬೇಕು ಎಂದು ಹೇಳಿದರು.

ತಾ.ಪಂ. ಅಧ್ಯಕ್ಷ ಮೋಹನ ದುರಗಣ್ಣವರ ಮಾತನಾಡಿ, ದಾನಗಳಲ್ಲೇ ರಕ್ತದಾನ ಶ್ರೇಷ್ಠವಾದದ್ದು. ರಕ್ತದಾನದ ಬಗ್ಗೆ ಗ್ರಾಮೀಣ ಜನರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು. ಕನಕದಾಸ ಶಿಕ್ಷಣ ಸಮಿತಿ ಅಧ್ಯಕ್ಷ ಬಿ.ಎಫ್‌. ದಂಡಿನ ಮಾತನಾಡಿ, ಅನ್ನದಾನ, ವಿದ್ಯಾದಾನ ಹಾಗೆಯೇ ರಕ್ತದಾನವೂ ಮಹತ್ವದ್ದಾಗಿದೆ. ರಕ್ತಕ್ಕೆ ಪರ್ಯಾಯವಾದ ವಸ್ತುವಿಲ್ಲ. ರಕ್ತವನ್ನು ಮತ್ತೊಬ್ಬರ ದಾನದಿಂದ ಮಾತ್ರ ಪಡೆಯಬಹುದು. ವಿದ್ಯಾರ್ಥಿಗಳು ನಿಯಮಿತವಾಗಿ ರಕ್ತದಾನ ಮಾಡಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ಏಡ್ಸ್‌ ನಿಯಂತ್ರಣ ಅ ಧಿಕಾರಿ ಡಾ| ಚಂದ್ರಕಲಾ ಜೆ. ಮಾತನಾಡಿ, ಜಿಲ್ಲೆಯಲ್ಲಿ ಮಾಸಿಕ 10,000 ಯುನಿಟ್‌ ರಕ್ತದ ಅವಶ್ಯಕತೆಯಿದ್ದು, ಈಗ ಶೇ. 90ಕ್ಕಿಂತ ಹೆಚ್ಚಿಗೆ ರಕ್ತ ಸಂಗ್ರಹಣೆಯಾಗುತ್ತಿದೆ. ಎಲ್ಲ ಗರ್ಭಿಣಿ ಮಹಿಳೆಯರಿಗೆ ಉಚಿತವಾಗಿ ವಿತರಿಸಲಾಗುತ್ತದೆ ಎಂದು ಹೇಳಿದರು.

ನಗರಸಭೆ ಅಧ್ಯಕ್ಷ ಸುರೇಶ ಕಟ್ಟಿಮನಿ, ಕೆಎಸ್‌ಎಸ್‌ ಸಮಾಜಕಾರ್ಯ ಸ್ನಾತಕೋತ್ತರ ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ಅಂಬರೀಶ ಕಂಪ್ಲಿ, ಕೆ.ಎಸ್‌.ಎಸ್‌. ಸ್ನಾತಕೋತ್ತರ ಕೇಂದ್ರದ ಮುಖ್ಯ ಸಂಯೋಜಕ ಜೆ.ಸಿ. ಜಂಪಣ್ಣವರ, ಸಿ.ಎಸ್‌. ಬೊಮ್ಮನಹಳ್ಳಿ, ವಸಂತ ಅಗಸಿಮನಿ, ಶೇಖರ ಅಡಗಿ, ಪಿ.ಎಸ್‌. ಗಾಣಿಗೇರ, ಎಸ್‌.ಎಸ್‌. ಬೆನಕನಾಳ, ಜ್ಯೋತಿ ಅಂದಪ್ಪನವರ, ಗಿರೀಶ ಪಂತರ, ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಆರೋಗ್ಯ ಇಲಾಖೆಯ ಗೀತಾ ಕಾಂಬಳೆ ಉಪಸ್ಥಿತರಿದ್ದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಇಲಾಖೆ ಪ್ರಭಾರಿ ಅಧಿಕಾರಿ ವೈ.ಕೆ. ಭಜಂತ್ರಿ ಸ್ವಾಗತಿಸಿದರು. ಪ್ರಕಾಶ ಗಾಣಿಗೇರ ನಿರೂಪಿಸಿದರು. ಆರೋಗ್ಯ ಇಲಾಖೆಯ ಬಸವರಾಜ ಲಾಳಗಟ್ಟಿ ವಂದಿಸಿದರು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.