ವನಮಹೋತ್ಸವ ಆಚರಣೆಗೆ ಸೀಮಿತ ಆಗದಿರಲಿ


Team Udayavani, Jul 26, 2022, 11:58 AM IST

6plants-‘

ಶಹಾಬಾದ: ಇತ್ತೀಚಿನ ದಿನಗಳಲ್ಲಿ ಪರಿಸರ ದಿನಾಚರಣೆ, ವನಮಹೋತ್ಸವ ಕಾರ್ಯಕ್ರಮಗಳು ಆಚರಣೆಗೆ ಮಾತ್ರ ಸೀಮಿತವಾಗಿದೆ ಎಂದು ಕಾಂಗ್ರೆಸ್‌ ಯುವ ಮುಖಂಡ ರವಿ ಚವ್ಹಾಣ ವಿಷಾದ ವ್ಯಕ್ತಪಡಿಸಿದರು.

ತಾಲೂಕಿನ ಅಲ್ದಿಹಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶನಿವಾರ ಸತ್ಯ ಮೈಕ್ರೋ ಫೈನಾನ್ಸ್‌ ಸಂಸ್ಥೆಯ ಆಯೋಜಿಸಲಾದ ವನಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪರಿಸರ ಕುರಿತಾದ ಹಲವು ಆಚರಣೆಗಳು ಒಂದು ದಿನಕ್ಕೆ ಮಾತ್ರ ಸೀಮಿತವಾಗಿದ್ದು, ಆ ಬಳಿಕ ಇಚ್ಛಾಶಕ್ತಿಯ ಕೊರತೆಯಿಂದಾಗಿ ಪರಿಸರ ದಿನಾಚರಣೆ ತನ್ನ ಮಹತ್ವ ಕಳೆದುಕೊಂಡು ಒಂದು ರೀತಿಯಲ್ಲಿ ಒಣ ಮಹೋತ್ಸವ ಆಗುತ್ತಿದೆ ಎಂದರು.

ಸರಕಾರ, ಅರಣ್ಯ ಇಲಾಖೆ ಇಂತಹ ದಿನಾಚರಣೆಗಳ ಸಂದರ್ಭದಲ್ಲಿ ಪಕ್ಷಿ ಸಂಕುಲದ ಬಗ್ಗೆಯೂ ಚಿಂತನೆ ನಡೆಸಬೇಕಾಗಿದೆ. ಮರಗಳನ್ನೇ ನಂಬಿ ಬದುಕುವ ಪಕ್ಷಿಗಳನ್ನು ಉಳಿಸಲು ಅಕೇಶಿಯಾ, ಹೊನ್ನೆ, ಬೀಟಿ, ತೇಗದಂತಹ ಮರಗಳನ್ನು ಬೆಳೆಸುವ ಬದಲು ಅವುಗಳಿಗೆ ಆಹಾರವಾಗಬಲ್ಲ ಹಣ್ಣಿನ ಗಿಡಗಳನ್ನು ಬೆಳೆಸುವತ್ತ ಚಿಂತಿಸಬೇಕಾದ ಅಗತ್ಯ ಹಿಂದೆಂದಿಗಿಂತಲೂ ಇಂದು ಹೆಚ್ಚಿದೆ. ಬುದ್ಧಿಜೀವಿಯಾದ ಮನುಷ್ಯ ತನ್ನಂತೆ ಇತರ ಜೀವಿಗಳೂ ಬದುಕುವ ಹಕ್ಕನ್ನು ಹೊಂದಿವೆ ಎಂಬುದನ್ನು ಅರಿತು ವನ ಮಹೋತ್ಸವ ದಿನಾಚರಣೆಗಳ ಸಂದರ್ಭದಿಂದ ಮೊದಲುಗೊಂಡು ವರ್ಷಪೂರ್ತಿ ಪೂರಕ ವಾತಾವರಣ ನಿರ್ಮಿಸುವ ಪಣ ತೊಡಬೇಕಿದೆ ಎಂದು ಕರೆ ನೀಡಿದರು.

ಮಾಡಬೂಳ ಪೊಲೀಸ್‌ ಠಾಣೆಯ ಎಎಸ್‌ಐ ಭೀಮಾಶಂಕರ ಮಾತನಾಡಿ, ಗಿಡ-ಮರಗಳ ಮಾರಣ ಹೋಮ ಹೆಚ್ಚುತ್ತಿರುವುದರಿಂದ ಅರಣ್ಯ ಸಂಪತ್ತು ಇನ್ನಿಲ್ಲವಾಗುತ್ತಿದೆ. ಇದರಿಂದಾಗಿ ಸತತ ಬರಗಾಲ ಎದುರಿಸುವ ದುಃಸ್ಥಿತಿ ಬಂದೋದಗಿದೆ. ವರ್ಷದಿಂದ ವರ್ಷಕ್ಕೆ ಮಳೆ ಪ್ರಮಾಣ ಕ್ಷೀಣಿಸುತ್ತಿದೆ. ಹೀಗಾಗಿ ಪ್ರತಿಯೊಬ್ಬರೂ ತಮ್ಮ ತಮ್ಮ ಮನೆ, ಜಮೀನುಗಳಲ್ಲಿ ಸಸಿಗಳನ್ನು ನೆಟ್ಟು ಲಾಲನೆ-ಪಾಲನೆ ಮಾಡುವ ಮೂಲಕ ಅರಣ್ಯ ಸಂಪತ್ತು ವೃದ್ಧಿಸುವ ನಿಟ್ಟಿನಲ್ಲಿ ಶ್ರಮಿಸಿದರೆ, ಖಂಡಿತಾ ಬರಗಾಲ ಅಳಿಸಬಹುದಾಗಿದೆ ಎಂದರು.

ಶಾಲೆಯ ಆವರಣದಲ್ಲಿ ಸುಮಾರು 125 ಸಸಿಗಳನ್ನು ನೆಡಲಾಯಿತು. ಗ್ರಾಮದ ಜನರಿಗೆ ಹಾಗೂ ಸತ್ಯಂ ಮೈಕ್ರೋ ಫೈನಾನ್ಸ್‌ ಗ್ರಾಹಕರಿಗೆ ಸೇರಿದಂತೆ ಸುಮಾರು 300 ಸಸಿ ವಿತರಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ವಿಜಯಕುಮಾರ ಪೊಲೀಸ್‌ ಪಾಟೀಲ, ಉಪಾಧ್ಯಕ್ಷ ವಜೀರ ಪಟೇಲ್‌, ಸತ್ಯ ಮೈಕ್ರೋ ಫೈನಾನ್ಸ್‌ ಸಂಸ್ಥೆಯ ಮುಖ್ಯಸ್ಥರಾದ ಶಿವಪ್ರಸಾದ, ಶಾಲೆಯ ಮುಖ್ಯಗುರುಮಾತೆ ಸಂತೋಷಿ ಕೆ.ಎಂ, ಶಿಕ್ಷಕರಾದ ಪರಶುರಾಮ ಗುತ್ತಲ್‌, ರಜಿಯಾಬೇಗಂ, ಕೌಸರ್‌ ಶಾಹೀನ್‌, ಕೀಮಿಬಾಯಿ ರಾಠೊಡ, ಕೃಷ್ಣ ಗುತ್ತೆದಾರ ಇತರರು ಇದ್ದರು.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.