ಬೀದರನಿಂದ ಕೆಎಸ್‌ಆರ್‌ಪಿ ಸೈಕಲ್‌ ಜಾಥಾಕ್ಕೆ ಚಾಲನೆ


Team Udayavani, Jul 13, 2017, 9:56 AM IST

13-GUB-2.jpg

ಬೀದರ: ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಆಯೋಜಿಸಿರುವ ಕೆಎಸ್‌ಆರ್‌ಪಿ ಕರ್ನಾಟಕ ದರ್ಶನ ರಾಜ್ಯ ಮಟ್ಟದ ಸೈಕಲ್‌ ಜಾಥಾಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಬುಧವಾರ ಪಾರಿವಾಳ ಹಾಗೂ ಬಲೂನ್‌ ಹಾರಿ ಬಿಡುವ ಮೂಲಕ ಚಾಲನೆ ನೀಡಿದರು.

ನಗರದ ಬಸವೇಶ್ವರ ವೃತ್ತದಲ್ಲಿ ಜಿಲ್ಲಾ ಪೊಲೀಸ್‌ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಪೊಲೀಸ್‌ ಅ ಧಿಕಾರಿಗಳು ಹಾಗೂ ಸಿಬ್ಬಂದಿ ನಿತ್ಯ ಒಂದಿಲ್ಲೊಂದು ಒತ್ತಡದಲ್ಲಿಯೇ ಕೆಲಸ ಮಾಡುತ್ತಾರೆ. ಅವರು ಒತ್ತಡ ಮುಕ್ತ ಬದುಕು ಸಾಗಿಸಲಿ ಎನ್ನುವ ಉದ್ದೇಶದಿಂದ ಜಾಥಾ ಆಯೋಜಿಸಿರುವುದು ಶ್ಲಾಘನೀಯ. ಜಾಥಾ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ ಸಂಬಂಧ ಜಾಗೃತಿ ಮೂಡಿಸುತ್ತಿರುವುದು ಅಭಿನಂದನಾರ್ಹ ಕೆಲಸವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.. ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ ಮಾತನಾಡಿ, ಆರೋಗ್ಯದ ಹಿತದೃಷ್ಟಿಯಿಂದ ಸೈಕಲ್‌ ಬಳಕೆ ಅಗತ್ಯತೆ ಅತಿ ಅವಶ್ಯವಾಗಿದೆ ಎಂಬುದನ್ನು ಒತ್ತಿ ಹೇಳುವ ಉದ್ದೇಶದಿಂದ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮ ಯಶ ಕಾಣಲಿ. ಜನತೆಗೆ ಸೂಕ್ತ ರೀತಿಯಲ್ಲಿ ಸಂದೇಶ ತಲುಪುವಂತಾಗಲಿ ಎಂದು ಶುಭ ಹಾರೈಸಿದರು.

ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ಭಾಸ್ಕರ್‌ ರಾವ್‌ ಮಾತನಾಡಿ, ಕೆಎಸ್‌ಆರ್‌ಪಿ ರಾಜ್ಯ ಪೊಲೀಸ್‌ ಇಲಾಖೆಯ ಬಹುಮುಖ್ಯ ಅಂಗವಾಗಿದೆ. ಬೆಂಗಳೂರಿನಲ್ಲಿ 4, ಬೆಳಗಾವಿ, ಮೈಸೂರು, ಕಲಬುರಗಿ, ಮಂಗಳೂರು, ಶಿವಮೋಗ್ಗ, ಶಿಗ್ಗಾವಿ ಹಾಗೂ ಹಾಸನದಲ್ಲಿ ತಲಾ ಒಂದು ಕೆಎಸ್‌ಆರ್‌ಪಿ ಪಡೆಗಳಿವೆ. ಮುನಿರಾಬಾದ್‌ ಹಾಗೂ ವಿಜಯಪುರದಲ್ಲಿ ತಲಾ ಒಂದು ಇಂಡಿಯಾ ರಿಸರ್ವ್‌ ಬೆಟಾಲಿಯನ್‌ ಹಾಗೂ ಮುನಿರಾಬಾದ್‌ ಮತ್ತು ಬೆಳಗಾವಿಯಲ್ಲಿ ತಲಾ ಒಂದು ತರಬೇತಿ ಶಾಲೆಗಳಿವೆ. ಈ ಎಲ್ಲ ಕೇಂದ್ರಗಳಿಂದ ತಲಾ ಮೂವರು ಸಿಬ್ಬಂದಿ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಜುಲೈ 25ರಂದು ಬೆಂಗಳೂರಿನ ವಿಧಾನಸೌಧದ ಮುಂದೆ ಸೈಕಲ್‌
ಜಾಥಾ ಸಮಾವೇಶಗೊಳ್ಳಲಿದೆ. ಜಾಥಾ ವೇಳೆ ಪ್ಲಾಸ್ಟಿಕ್‌ ಬಳಕೆ ದುಷ್ಪರಿಣಾಮ, ಶೌಚಾಲಯದ ಮಹತ್ವ, ಪರಿಸರ ಸಂರಕ್ಷಿಸಲು ಸಸಿ
ನೆಡುವಂತೆ ಜನತೆಗೆ ತಿಳಿ ಹೇಳಲಾಗುವುದು ಎಂದು ಹೇಳಿದರು.

ಶಾಸಕ ರಹೀಮ್‌ ಖಾನ್‌, ಜಿಪಂ ಸಿಇಒ ಡಾ| ಆರ್‌. ಸೆಲ್ವಮಣಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿ ಪ್ರಕಾಶ ನಿಕ್ಕಂ, ಹೆಚ್ಚುವರಿ
ಪೊಲೀಸ್‌ ವರಿಷ್ಠಾ ಧಿಕಾರಿ ಶ್ರೀಹರಿ ಬಾಬು ಹಾಗೂ ಪೊಲೀಸ್‌ ಅಧಿ ಕಾರಿಗಳು ಮತ್ತು ಸಿಬ್ಬಂದಿ ಇದ್ದರು. ಪಿಎಸ್‌ಐ ವೀರಣ್ಣ ಮಗ್ಗಿ
ನಿರೂಪಿಸಿದರು. 

ಜಾಥಾ ಸಂಚರಿಸುವ ಮಾರ್ಗ
ಸೈಕಲ್‌ ಜಾಥಾ ಮೊದಲ ದಿನ ಬೀದರನಿಂದ ಕಲಬುರಗಿಗೆ 115 ಕಿಮೀ ಸಂಚರಿಸಿತು. ಜುಲೈ 13ರಂದು ಕಲಬುರಗಿಯಿಂದ ವಿಜಯಪುರ 115 ಕಿಮೀ, 14ರಂದು ವಿಜಯಪುರದಿಂದ ಜಮಖಂಡಿ ಮಾರ್ಗವಾಗಿ ಬೆಳಗಾವಿಗೆ 210 ಕಿಮೀ ಸಂಚರಿಸಲಿದೆ. 15ರಂದು ವಿಶ್ರಾಂತಿ ದಿನ. 16ರಂದು ಬೆಳಗಾವಿಯಿಂದ ಬಾಗಲಕೋಟೆ 141 ಕಿಮೀ, 17ರಂದು ಬಾಗಲಕೋಟೆಯಿಂದ ಮುನಿರಾಬಾದ್‌ 146 ಕಿಮೀ, 18ರಂದು ಮುನಿರಾಬಾದ್‌ನಿಂದ ಗದಗ ಮಾರ್ಗವಾಗಿ ಶಿಗ್ಗಾವಿ 158 ಕಿಮೀ, ಜು. 19ರಂದು
ಶಿಗ್ಗಾವಿಯಿಂದ ಶಿವಮೋಗ್ಗ 165 ಕಿಮೀ ಸಂಚರಿಸಲಿದೆ. 20ರಂದು ವಿಶ್ರಾಂತಿ ದಿನ. 21ರಂದು ಶಿವಮೋಗ್ಗದಿಂದ ಮಂಗಳೂರು 220 ಕಿಮೀ, 22ರಂದು ಮಂಗಳೂರದಿಂದ ಹಾಸನ 168 ಕಿಮೀ, 23ರಂದು ಹಾಸನದಿಂದ ಮೈಸೂರು 125 ಕಿಮೀ ಸಂಚರಿಸಲಿದೆ. 24ರಂದು ವಿಶ್ರಾಂತಿ ದಿನ. 25ರಂದು ಸೈಕಲ್‌ ಜಾಥಾ ಮೈಸೂರಿನಿಂದ ಹೊರಟು ಬೆಂಗಳೂರಿಗೆ (140 ಕಿಮೀ) ಪಯಣ ಬೆಳೆಸಲಿದೆ.

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.