ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ


Team Udayavani, Feb 22, 2019, 6:32 AM IST

gul-2.jpg

ಕಲಬುರಗಿ: ಮಹಾನಗರ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳಡಿ ಬಹೃತ್‌ 114.69 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಸಂಸದ ಮಲ್ಲಿಕಾರ್ಜುನ ಖರ್ಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ನೆರವೇರಿಸಿದರು.

ನಗರದ ರಾಜಾಪುರ ರಸ್ತೆಯ ಡಾ| ಬಿ.ಆರ್‌. ಅಂಬೇಡ್ಕರ ವಸತಿ ನಿಲಯ ಆವರಣದಲ್ಲಿ ಗುರುವಾರ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಗಳ ಒಟ್ಟು 26 ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭ ನಡೆಯಿತು.

ಮೈತ್ರಿ ಸರ್ಕಾರದ ರಚನೆಯಾಗಿ ಕೇವಲ ಆರು ತಿಂಗಳಲ್ಲಿ ಜಿಲ್ಲೆಯಲ್ಲಿ ಸುಮಾರು 115 ಕೋಟಿ ರೂ.ಗಳ ಕಾಮಗಾರಿಗೆ ಚಾಲನೆ ನೀಡುತ್ತಿರುವುದು ಐತಿಹಾಸಿಕವಾಗಿದೆ. ಇದು ಜಿಲ್ಲಾ ಉಸ್ತುವಾರಿ ಸಚಿವರ, ಅಧಿಕಾರಿಗಳ ಹಾಗೂ ಜನಪ್ರತಿನಿ ಗಳ ಸಹಕಾರದಿಂದ ಸಾಧ್ಯವಾಗಿದೆ. ಸ್ನಾತಕೋತ್ತರ, ಮೆಟ್ರಿಕ್‌ ನಂತರದ, ಮಹಿಳೆಯರ, ಅಲ್ಪಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ವಸತಿ ನಿಲಯ ನಿರ್ಮಾಣದಿಂದ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಲಿದೆ ಎಂದು ಸಮಾರಂಭದಲ್ಲಿ ಸಂಸದ ಮಲ್ಲಿಕಾರ್ಜುನ ಖರ್ಗೆ ಶ್ಲಾಘಿಸಿದರು.

ಈ ಹಿಂದೆ ತಾವು ಕಂದಾಯ ಖಾತೆ ಸಚಿವರಿದ್ದಾಗ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ನಿಲಯಗಳನ್ನು ನಿರ್ಮಿಸಲಾಗಿತ್ತು. ಆದರೆ, ಅವುಗಳು 35 ವರ್ಷ ಹಳೆಯದಾಗಿವೆ. ನಿರ್ವಹಣೆಯಿಲ್ಲದೇ ಬಿದ್ದು ಹೋಗುವ ಸ್ಥಿತಿಯಲ್ಲಿವೆ. ಹೊಸ ವಿದ್ಯಾರ್ಥಿ ನಿಲಯಗಳನ್ನು ಗುಣಮಟ್ಟದಿಂದ ನಿರ್ಮಿಸಬೇಕು. ವಿದ್ಯಾರ್ಥಿಗಳು ಸಹ ಒಳ್ಳೆಯ ರೀತಿಯಿಂದ ಕಾಪಾಡಿಕೊಂಡು ಹೋಗಬೇಕೆಂದು ಸಲಹೆ ನೀಡಿದರು.

ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಶಿಕ್ಷಣ, ಆರೋಗ್ಯ, ನೀರಾವರಿ ಕ್ಷೇತ್ರಗಳ ಅಭಿವೃದ್ಧಿ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಅನುದಾನ ನೀಡುವಂತೆ ಈಗಾಗಲೇ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ ಅವರಿಗೆ ಪತ್ರ ಬರೆದು ಚರ್ಚಿಸಲಾಗಿದೆ ಎಂದು ಸಂಸದರು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ, ಜಿಲ್ಲೆಯಲ್ಲಿ ಅತ್ಯಾಧುನಿಕ ಸವಲತ್ತು ಹೊಂದಿರುವ 5 ವಸತಿ ನಿಲಯಗಳು ನಿರ್ಮಾಣಗೊಳ್ಳುತ್ತಿದೆ. ಇದರಿಂದ 1,200 ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ ಎಂದು ಹೇಳಿದರು.

ಶಾಸಕರಾದ ಎಂ.ವೈ. ಪಾಟೀಲ, ಖನೀಜ್‌ ಫಾತೀಮಾ ಮಾತನಾಡಿದರು. ಜಿಪಂ ಅಧ್ಯಕ್ಷೆ ಸುವರ್ಣಾ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಮೇಯರ್‌ ಮಲ್ಲಮ್ಮ ಸಿದ್ರಾಮಪ್ಪ ವಳಕೇರಿ, ಉಪ ಮೇಯರ್‌ ಆಲಿಯಾ ಶಿರೀನ್‌, ಪ್ರಾದೇಶಿಕ ಆಯುಕ್ತ ಸುಬೋಧ ಯಾದವ, ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ, ಜಿಪಂ ಸಿಇಒ ಡಾ| ಪಿ.ರಾಜಾ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಸತೀಶ, ಮುಖಂಡರಾದ ಅಲ್ಲಮಪ್ರಭು ಪಾಟೀಲ, ಜಗದೇವ ಗುತ್ತೇದಾರ, ಆಲಂ ಖಾನ್‌, ಬಸವರಾಜ ಭೀಮಳ್ಳಿ, ನೀಲಕಂಠರಾವ ಮೂಲಗೆ ಹಾಗೂ ಜಿಪಂ ಮತ್ತು ಮಹಾನಗರ ಪಾಲಿಕೆ ಸದಸ್ಯರು, ಮತ್ತಿತರರು ಪಾಲ್ಗೊಂಡಿದ್ದರು.

ಬಿಜೆಪಿ ಪಕ್ಷದ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಗ್ರಾಮೀಣ ಕ್ಷೇತ್ರದ ಬಸವರಾಜ ಮತ್ತಿಮೂಡ, ಎಂಎಲ್‌ಸಿ ಬಿ.ಜಿ.ಪಾಟೀಲ ಸಮಾರಂಭಕ್ಕೆ ಗೈರಾಗಿದ್ದರು.

ಹೈ-ಕ ಭಾಗಕ್ಕೆ ಧರ್ಮಸಿಂಗ್‌ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಸರ್ಕಾರಗಳಿಂದ ಅಧಿಕ ಅನುದಾನ ತಂದು ಅಭಿವೃದ್ಧಿಗೆ ಶ್ರಮಿಸಿದ್ದರು. ಕಲಬುರಗಿಯಲ್ಲಿ ಈಗ ಸಮಾಜ ಕಲ್ಯಾಣ ಇಲಾಖೆ ಪ್ರಿಯಾಂಕ್‌ ಖರ್ಗೆ 114.69 ಕೋಟಿ ರೂ. ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ತಂದು ಇತಿಹಾಸ ಸೃಷ್ಠಿಸಿದ್ದಾರೆ.
 ಎಂ.ವೈ. ಪಾಟೀಲ, ಶಾಸಕರು, ಅಫಜಲಪುರ

ಟಾಪ್ ನ್ಯೂಸ್

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.