250 ಮನೆ ನಿರ್ಮಾಣಕ್ಕೆ ಶಾಸಕ ಗುತ್ತೇದಾರ ಚಾಲನೆ


Team Udayavani, Feb 5, 2019, 6:58 AM IST

gul-5.jpg

ಆಳಂದ: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಪ್ರಧಾನ ಮಂತ್ರಿ ಆವಾಸ್‌ ಯೋಜನೆ ಅಡಿ ಪಟ್ಟಣದ ಕೊಳಚೆ ಪ್ರದೇಶದ ನಿವಾಸಿಗಳಿಗಾಗಿ 250 ಮನೆ ನಿರ್ಮಾಣಕ್ಕೆ ಶಾಸಕ ಸುಭಾಷ ಗುತ್ತೇದಾರ ಭೂಮಿಪೂಜೆ ಮಾಡಿ ಕಾಮಗಾರಿಗೆ ಚಾಲನೆ ನೀಡಿದರು.

ಹತ್ತ್ಯಾನ ಗಲ್ಲಿ, ಗೊಲ್ಲರ ಬಡಾವಣೆ ಹಾಗೂ ಕರ್ಪೂರಲಿಂಗೇಶ್ವರ ಬಡಾವಣೆಯಲ್ಲಿ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಿದ ಶಾಸಕರು, ಫಲಾನುಭವಿಗಳ ವಂತಿಗೆ ಭರಿಸಿದ ಬಳಿಕ ಗುತ್ತಿಗೆದಾರರು ಗುಣಮಟ್ಟದ ಮನೆ ನಿರ್ಮಿಸಿಕೊಟ್ಟು ಬಡವರಿಗೆ ಅನುಕೂಲ ಒದಗಿಸಬೇಕು ಎಂದು ತಾಕೀತು ಮಾಡಿದರು.

ಸಾವಿರಾರು ಬಡವರು ಮನೆ ಬಯಸಿ ಅರ್ಜಿ ಸಲ್ಲಿಸಿದ್ದಾರೆ. ಹಂತ, ಹಂತವಾಗಿ ಮನೆಗಳ ನಿರ್ಮಾಣಕ್ಕೆ ಸರ್ಕಾರದ ಅನುಮತಿ ದೊರೆತಿದೆ. ಎಲ್ಲ ಬಡವರಿಗೂ ಈ ಯೋಜನೆಯಲ್ಲಿ ಮನೆ ದೊರೆಯುಂತಾಗಬೇಕು ಎಂದು ಹೇಳಿದರು.

ಮನೆ ಕಟ್ಟಲು 4.98 ಲಕ್ಷ ರೂ. ಮಂಜೂರಾಗಿದೆ. ಅದರಲ್ಲಿ ಮೂರು ಕಂತುಗಳಲ್ಲಿ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಜನಾಂಗದ ಫಲಾನುಭವಿಗಳು 42 ಸಾವಿರ ಹಾಗೂ ಸಾಮಾನ್ಯ ವರ್ಗದದ ಫಲಾನುಭವಿಗಳು 74 ಸಾವಿರ ವಂತಿಗೆ ಹಣ ಭರಿಸಿದರೆ ಒಂದು ಬಿಎಚ್ಕೆ (ಅಡುಗೆ ಕೋಣೆ 1, ವಿಶ್ರಾಂತಿ ಕೋಣೆ 1, ಹಾಲ್‌, ಶೌಚಾಲಯ ಹಾಗೂ ಸ್ನಾನಗೃಹ) ಮನೆ ನಿರ್ಮಿಸುವ ಯೋಜನೆ ಇದಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ 1.50 ಲಕ್ಷ ರೂ. ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಡಕ್ಕೆ 2 ಲಕ್ಷ ಹಾಗೂ ಫಲಾನುಭವಿಗಳಿಗೆ ಬಾಕಿ ಉಳಿದ ಮೊತ್ತ 1.48ಲಕ್ಷ ರೂ. ಭರಿಸಬೇಕಾಗಿದ್ದು, ಈ ಪೈಕಿ ಫಲಾನುಭವಿಗಳು ಶೇ 10ರಂತೆ 49, 800 ರೂ. ಮೊತ್ತದ ಬ್ಯಾಂಕ್‌ ಡಿಡಿ ರೂಪದಲ್ಲಿ ಹಾಗೂ ಬಾಕಿ ಉಳಿದ ಮೊತ್ತ 98,200 ರೂ. ಬ್ಯಾಂಕ್‌ನಿಂದ ಸಾಲ ಪಡೆಯಬೇಕು ಹಾಗೂ ಇತರೆ ವರ್ಗಕ್ಕೆ ಕೇಂದ್ರ ಸರ್ಕಾರದಿಂದ 1.50 ಲಕ್ಷ ರೂ. ಮಾತ್ರ, ರಾಜ್ಯದಿಂದ 1.20ಲಕ್ಷ ರೂ. ಹಾಗೂ ಫಲಾನುಭವಿಗಳಿಗೆ ಬಾಕಿ ಉಳಿದ ಮೊತ್ತ 2.28ಲಕ್ಷ ರೂ. ಭರಿಸತಕ್ಕದ್ದು, ಈ ಪೈಕಿ ಫಲಾನುಭವಿ ಶೇ.15ರಷ್ಟು 74,700 ರೂ. ಡಿಡಿ ರೂಪದಲ್ಲಿ ಹಾಗೂ ಬಾಕಿ ಉಳಿದ ರೂಪಾಯಿ 1,53,300 ಬ್ಯಾಂಕ್‌ನಿಂದ ಸಾಲ ಪಡೆದು ಆಯುಕ್ತರು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಬೆಂಗಳೂರು ಇವರಿಗೆ ಸಲ್ಲಿಸುವ ನಿಯಮದ ಕುರಿತು ಬಡವರಿಗೆ ಪರಿಣಿತರ ಮಾಹಿತಿ ನೀಡಿ ಅನುಕೂಲ ಒದಗಿಸಬೇಕು ಎಂದು ಹೇಳಿದರು.

ಪುರಸಭೆ ಸದಸ್ಯ ಶ್ರೀಶೈಲ ಪಾಟೀಲ, ಮಾಜಿ ಅಧ್ಯಕ್ಷ ಅಂಬಾದಾಸ ಪವಾರ, ಬಿಜೆಪಿ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗುಳೆ, ಮುಖಂಡ ಶ್ರೀಶೈಲ ಖಜೂರಿ, ಶರಣು ನಾಗದೆ, ಬಾಬುರಾವ ರಡ್ಡಿ, ಶಿವುಪುತ್ರ ಹತ್ತಿ, ಮಹಾಂತೇಶ ಡೊಳ್ಳೆ, ಹಣಮಂತರಾವ ಪಾಟೀಲ, ಶಿವಯ್ಯ ಸ್ವಾಮಿ, ಚಂದ್ರಶೇಖರ ಬುಕ್ಕೆ, ಈರಣ್ಣ ವರನಾಳೆ, ಸೋಮಶೇಖರ ಬಿರಾದಾರ, ಶ್ರೀಕಾಂತ ಹತ್ತಿ, ಹುಬ್ಬಣ್ಣ ನಾಗದೆ, ಸಾಗರ ಬೆಲಸೂರೆ, ಶಿವುಕುಮಾರ ಪರಗೆ ಭಾಗವಹಿಸಿದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.