ಬಿಜೆಪಿ ಹಿನ್ನಡೆಗೆ ಬಂಡಾಯ ಕಾರಣ
Team Udayavani, Apr 10, 2017, 3:26 PM IST
ವಾಡಿ: ಇಲ್ಲಿಯ ಪುರಸಭೆ ಚುನಾವಣೆಯಲ್ಲಿ ಟಿಕೆಟ್ ವಂಚಿತ ನಮ್ಮ ಪಕ್ಷದ ಕಾರ್ಯಕರ್ತರೆ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದರಿಂದ ಇನ್ನೂ ಆರು ವಾಡ್ìಗಳಲ್ಲಿ ಗೆಲ್ಲಬೇಕಿದ್ದ ಬಿಜೆಪಿ ಸೋತಿದೆ. ವಾಡಿಯಲ್ಲಿ ಬಿಜೆಪಿ ಬಲಿಷ್ಟವಾಗಿದ್ದು, ನಮ್ಮನ್ನು ಸೋಲಿಸುವ ಶಕ್ತಿ ಕಾಂಗ್ರೆಸ್ಸಿಗಿಲ್ಲ ಎಂದು ಮಾಜಿ ಶಾಸಕ ವಾಲ್ಮೀಕಿ ನಾಯಕ ಪ್ರತಿಕ್ರಿಯಿಸಿದ್ದಾರೆ.
ಪಟ್ಟಣದ ಪುರಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಬಿಜೆಪಿ ಕೇವಲ ಏಳು ಸ್ಥಾನ ಗಳಿಸಿಕೊಂಡ ಬಳಿಕ ಉದಯವಾಣಿಯೊಂದಿಗೆ ಮಾತನಾಡಿದ ವಾಲ್ಮೀಕಿ, ನಮ್ಮ ಯಾವ ಅಭ್ಯರ್ಥಿಗಳಿಗೂ ಪಕ್ಷದ ನಿಧಿ ನೀಡಲು ಸಾಧ್ಯವಾಗಿಲ್ಲ. ಕಾಂಗ್ರೆಸ್ ಅಭ್ಯರ್ಥಿಗಳಿಗೆ ಪಕ್ಷದ ನಿಧಿಧಿ ಪೂರೈಕೆಯಾಗಿದೆ.
ನಮ್ಮ ಅಭ್ಯರ್ಥಿಗಳು ಸ್ವ ಸಾಮರ್ಥ್ಯದ ಮೇಲೆ ಗೆದ್ದುಬಂದಿದ್ದಾರೆ. ಮತಗಳ ಒಟ್ಟು ಸಂಖ್ಯೆಯಲ್ಲಿ ಬಿಜೆಪಿ ಕಾಂಗ್ರೆಸ್ಗಿಂತ ಮುಂದಿದೆ. ನಮ್ಮಲ್ಲಿ ಬಂಡಾಯವಿಲ್ಲದಿದ್ದರೆ ಒಟ್ಟು 14 ಸ್ಥಾನಗಳಲ್ಲಿ ಬಿಜೆಪಿ ಮಿಂಚುತ್ತಿತ್ತು. ನಮ್ಮ ಅಭ್ಯರ್ಥಿಗಳಿಗೆ ನಮ್ಮವರೇ ವೈರಿಗಳಾಗಿ ಕಾಡಿದ್ದರಿಂದ ಸಾಧನೆಯಲ್ಲಿ ಏರಿಕೆಯಾಗಿಲ್ಲ. ಪಕ್ಷದ ಆದೇಶವನ್ನು ದಿಕ್ಕರಿಸಿ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವ ಮೂಲಕ ಶಿಸ್ತು ಉಲ್ಲಂಘಿಸಿರುವ ಅಭ್ಯರ್ಥಿಗಳ ಪಟ್ಟಿ ಜಿಲ್ಲಾಧ್ಯಕ್ಷರಿಗೆ ಈಗಾಗಲೇ ಸಲ್ಲಿಕೆಯಾಗಿದೆ.
ಈ ಕುರಿತು ಪಕ್ಷ ಅವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಿದೆ. ಅಲ್ಲದೆ ಮತದಾರರ ತೀರ್ಪನ್ನು ಗೌರವಿಸುವ ಮೂಲಕ ವಾಡಿ ಪುರಸಭೆಯಲ್ಲಿ ಬಿಜೆಪಿ ಪ್ರತಿಪಕ್ಷದ ಜವಾಬ್ದಾರಿ ನಿರ್ವಹಿಸಲಿದೆ. ಪುರಸಭೆ ಚುನಾವಣೆ ಫಲಿತಾಂಶವು ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು
Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ
Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ