ಶಿಕ್ಷಣಕ್ಕೆ ನಿಜಾಮರ ಕಾಲದಿಂದಲೂ ಅನುದಾನ


Team Udayavani, Aug 24, 2017, 9:56 AM IST

gul 1.jpg

ಕಲಬುರಗಿ: ಹೈದ್ರಾಬಾದ ಕರ್ನಾಟಕದಲ್ಲಿ ಹೈದ್ರಾಬಾದ ನಿಜಾಮನ ಕಾಲದಿಂದಲೂ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ಹಾಗೂ ಶಿಕ್ಷಕರಿಗೆ ವೇತನ ಅನುದಾನ ನೀಡಿರುವ ಇತಿಹಾಸವಿದೆ ಎಂದು ಹಿರಿಯ ಸಾಹಿತಿ ಹಾಗೂ ಈಶಾನ್ಯ ವಲಯ ಶಿಕ್ಷಕರ ವೇದಿಕೆ ಗೌರವ ಅಧ್ಯಕ್ಷ ಪ್ರೊ| ವಸಂತ ಕುಷ್ಟಗಿ ಹೇಳಿದರು. ಇಲ್ಲಿನ ಕನ್ನಡ ಭವನದಲ್ಲಿ ಬುಧವಾರ ಈಶಾನ್ಯ ವಲಯ ಶಿಕ್ಷಕರ ವೇದಿಕೆ, ಹೈಕ ಖಾಸಗಿ ಶಾಲೆಗಳ ಒಕ್ಕೂಟದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಇವತ್ತು ಸರಕಾರ ಹೈಕ ಭಾಗದ ಖಾಸಗಿ ಶಾಲೆಗಳಿಗೆ ಅನುದಾನವನ್ನು ನೀಡಲು ಮೀನಾಮೇಷ ಎಣಿಸುತ್ತಿದೆ. ಆದರೆ, ನಿಜಾಮ ಕೆಲವು ಅಪವಾದಗಳ ಮಧ್ಯೆ ಶಿಕ್ಷಣಕ್ಕೆ ಬಹಳಷ್ಟು ಕೊಡುಗೆ ನೀಡಿದ್ದಾನೆ. ಶಿಕ್ಷಕರಿಗೆ 10 ರೂ. ಸಂಬಳ ನೀಡುವುದಲ್ಲದೆ, ಶಾಲೆಯ ನಿರ್ವಹಣೆಗಾಗಿ 5 ರೂ.ಗಳನ್ನು ನೀಡುತ್ತಿದ್ದ. ಇದರಿಂದಾಗಿ ಈ ಭಾಗದಲ್ಲಿ ಶಿಕ್ಷಣವನ್ನು ನೀಡುವ ಪ್ರಯತ್ನವನ್ನು ಮಾಡಿರುವುದು ನಿಜಕ್ಕೂ ಶ್ಲಾಘನೀಯ. ಆದ್ದರಿಂದ ಈ ಪ್ರದೇಶದಲ್ಲಿ ಇಂದು ಶಾಲೆಗಳು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ವ್ಯವಹಾರಗಳು ನಮ್ಮನ್ನು ತುಂಬಾ ಹಿಂದಕ್ಕೆ ತಳ್ಳುತ್ತಿವೆ. ಆದ್ದರಿಂದ ಕೆಲವು ಒಳ್ಳೆಯ ಸಂಸ್ಥೆಗಳಿಗೆ ಹೈದ್ರಾಬಾದ ಕರ್ನಾಟಕ ಅಭಿವೃದ್ಧಿ ಪ್ರದೇಶ ಮಂಡಳಿಯಿಂದ ಅನುದಾನವನ್ನು ನೀಡಬೇಕು ಎಂದರು. ದೇವದುರ್ಗದ ಬಸವೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಲತಾ ದೇವರು ಮಾತನಾಡಿ, ಹೈಕ ಭಾಗದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಜನರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಸಾಕಷ್ಟು ಪರಿಶ್ರಮವನ್ನು ಪಡುತ್ತಿವೆ. ಶಿಕ್ಷಕರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲೂ ಮತ್ತು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಹರಸಾಹಸ ನಡೆಯುತ್ತಿದೆ. ಆದ್ದರಿಂದ ಸರಕಾರ ಕೂಡಲೇ ಹೆಚ್‌ಕೆಡಿಬಿಯಿಂದ ಅನುದಾನವನ್ನು ನೀಡಬೇಕು. ಕೊನೆಯ ಪಕ್ಷ ಸೌಕರ್ಯಗಳನ್ನು ನೀಡಲು ಮುಂದಾಗಬೇಕು. ಈ ಭಾಗದ ಅಭಿವೃದ್ಧಿಗಾಗಿ ಬರುವ ಹಣದಲ್ಲಿ ಶಿಕ್ಷಣ ಕ್ಷೇತ್ರಕ್ಕೂ ಒಂದಷ್ಟು ಅನುದಾನವನ್ನು ನೀಡಬೇಕು ಎಂದರು. ವೇದಿಕೆ ಅಧ್ಯಕ್ಷ ಹಾಗೂ ಕಾರ್ಯಕ್ರಮದ ರೂವಾರಿ ಪ್ರೋ| ಎಂ.ಬಿ.ಅಂಬಲಗಿ ಮಾತನಾಡಿ, ಇಂದು ಈ ಭಾಗದ ಶಿಕ್ಷಣ ಸಂಸ್ಥೆಗಳು ಕವಲು ದಾರಿಯಲ್ಲಿವೆ. ಸರಕಾರದ ಜೊತೆಯಲ್ಲಿ ಈ ಸಂಸ್ಥೆಗಳು ಉತ್ತಮವಾಗಿ ಶಿಕ್ಷಣ ನೀಡಲು ಅನುದಾನ ಅವಶ್ಯಕತೆ ಇದೆ ಎನ್ನುವುದನ್ನು ಹಲವಾರು ಬಾರಿ ಮುಖ್ಯಮಂತ್ರಿಗಳಿಗೆ ಹಾಗೂ ಶಿಕ್ಷಣ ಸಚಿವರಿಗೆ ಮನವರಿಕೆ ಮಾಡಿ ಕೊಟ್ಟಿದ್ದು, ಈ ತಿಂಗಳ 29ರಂದು ಮತ್ತೂಮ್ಮೆ ಹೈಕದ ಎಲ್ಲಾ ಖಾಸಗಿ ಸಂಸ್ಥೆಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳೊಂದಿಗೆ ನಿಯೋಗದಲ್ಲಿ ಹೋಗಿ ಮುಖ್ಯಮಂತ್ರಿಗಳಿಗೂ ಹಾಗೂ ಸಚಿವ ತನ್ವೀರಸೇಠ್ಠ್  ಅವರಿಗೂ ಮನವಿ ನೀಡಲಾಗುವುದು ಎಂದರು. ಇದೇ ವೇಳೆ ಪ್ರಮುಖವಾದ ಮೂರು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಈ ಭಾಗದಲ್ಲಿನ ಎಲ್ಲಾ ಖಾಸಗಿ ಸಂಸ್ಥೆಗಳಿಗೆ ಮೂಲ ಸೌಕರ್ಯ ಅಭಿವೃದ್ಧಿಗೆ ಅನುದಾನ ನೀಡಬೇಕು. ಖಾಸಗಿ ಅನುದಾನ ರಹಿತ ಶಾಲೆಗಳ ಮಕ್ಕಳಿಗೆ ಬಿಸಿಯೂಟ, ಸೈಕಲ್‌, ಬೂಟು, ಶಾಕ್ಸಗಳನ್ನು ನೀಡಬೇಕು ಅಲ್ಲದೆ, ಶಿಕ್ಷಕರಿಗೆ ಸಮರ್ಪಕ ವೇತನ ನೀಡಲು ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ನಿರ್ಣಯಿಸಲಾಯಿತು. ಸಭೆಯಲ್ಲಿ ರಾಯಚೂರು, ಬಳ್ಳಾರಿ, ದೇವದುರ್ಗ, ಯಾದಗಿರಿ, ಬೀದರ, ಕಲಬುರಗಿ, ಕೊಪ್ಪಳ ಜಿಲ್ಲೆಯ ಖಾಸಗಿ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರು ಭಾಗವಹಿಸಿದ್ದರು. ರಾಜ್ಯಸಭೆ ಸದಸ್ಯ ಬಸವರಾಜ ಪಾಟೀಲ ಸೇಡಂ, ನೋಬಲ್‌ ಸಂಸ್ಥೆಯ ಅನ್ವರ ಉಲ್‌ ಹಕ್‌, ಬೀದರ ಬಸವತೀರ್ಥ ವಿದ್ಯಾಪೀಠದ ಕೇಶವರಾವ ತಳಘಟಕರ್‌, ಕೋಸಗಿ ಶಿಕ್ಷಣ ಸಂಸ್ಥೆಯ ಡಾ| ವಿಜಯಲಕ್ಷ್ಮಿ ಕೋಸಗಿ, ಬೀದರನ ಜನಸೇವಾ ಪ್ರತಿಷ್ಠಾನದ ರೇವಣಸಿದ್ದಪ್ಪ ಜಲಾದೆ, ನಿವೃತ್ತ ಶಿಕ್ಷಣ ಇಲಾಖೆ ಅಧಿಕಾರಿ ಅಡಿವೆಪ್ಪ ಚಿಂಚೋಳಿ, ಕುರಿಕೋಟಾದ ಬಸವೇಶ್ವರ ಸಂಸ್ಥೆಯ ಚನ್ನವೀರಪ್ಪ ಸಲಗರ, ಲಿಂಗನಗೌಡ ಸಿರಗುಪ್ಪಾ, ಬಳ್ಳಾರಿಯ ನ್ಯಾಷನಲ್‌ ಸಂಸ್ಥೆಯ ಗೊಮ್ಮಟೇಶ್ವರ ಗೋಗಿ, ಯಾದಗಿರಿಯ ಶಿವಣ್ಣಗೌಡ ಪಾಟೀಲ, ಗಂಗಾವತಿಯ ಮನೋಜ ಹಿರೇಮಠ, ಧರ್ಮಣ್ಣ ಧನ್ನಿ, ಶಾಂತಕುಮಾರ ಬೆಳಮಗಿ ಇದ್ದರು. ಪರಮೇಶ್ವರ ಬನಸೋಡೆ ಕಾರ್ಯಕ್ರಮ ನಿರೂಪಿಸಿದರು. ನಿತೀನ ಕೋಸಗಿ ವಂದಿಸಿದರು.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.