ಶೈಕ್ಷಣಿಕ ಸಾಲ ಬಡ್ಡಿ ಮನ್ನಾ ಭರವಸೆ
Team Udayavani, Aug 9, 2018, 10:54 AM IST
ಕಲಬುರಗಿ: ಉನ್ನತ ವ್ಯಾಸಂಗಕ್ಕಾಗಿ ಶೈಕ್ಷಣಿಕ ಸಾಲದ ಬಡ್ಡಿ ತುಂಬುವುದಾಗಿ ಕೇಂದ್ರ ಸಚಿವರಾದ ಸದಾನಂದಗೌಡ,
ಅನಂತಕುಮಾರ, ಪ್ರಕಾಶ ಜಾವಡೇಕರ ಈಶಾನ್ಯ ಕರ್ನಾಟಕ ಶಿಕ್ಷಕರ ವೇದಿಕೆಯ ನಿಯೋಗಕ್ಕೆ ಭರವಸೆ ನೀಡಿದ್ದಾರೆ.
ವಾರ್ಷಿಕ ಆದಾಯ 4ರಿಂದ 5 ಲಕ್ಷ ರೂ.ಗೂ ಕಡಿಮೆಯಿರುವರ ಮಕ್ಕಳು ಉನ್ನತ ವ್ಯಾಸಾಂಗಕ್ಕಾಗಿ ಪಡೆದ ಶೈಕ್ಷಣಿಕ ಸಾಲದ ಬಡ್ಡಿ ತುಂಬುವುದಾಗಿ ಕೇಂದ್ರ ಸರ್ಕಾರ 2009 ಹಾಗೂ 2014ರಲ್ಲಿ ಆದೇಶ ನೀಡಿದೆ. ಆದರೆ ಕೇಂದ್ರ ಸರ್ಕಾರ ಬಡ್ಡಿಯ ಹಣ ತುಂಬದ ಕಾರಣ ಬ್ಯಾಂಕ್ಗಳು ಅತ್ಯಂತ ದುಬಾರಿ ಶೇ.13ರಿಂದ ಶೇ.10 ರಷ್ಟು ಬಡ್ಡಿ ಬಾಕಿ ಹಣ ವಸೂಲಿ ಮಾಡುತ್ತಿವೆ. ಇದರಿಂದ ದ್ಯೋಗವಿಲ್ಲದೇ ಪರದಾಡುವ ನಿರುದ್ಯೋಗಿ ಪದವೀಧರರು ಹಣ ತುಂಬಲಾಗದಿರುವುದರಿಂದ ಬ್ಯಾಂಕ್ ಅಧಿಕಾರಿಗಳು ಪಾಲಕರಿಗೆ ನೋಟಿಸ್ ನೀಡುವ ಮೂಲಕ ಆಸ್ತಿ ಪಾಸ್ತಿ ಮುಟ್ಟುಗೋಲು ಹಾಕುವ ಜೊತೆ ವಸೂಲಾತಿಗೆ ವಿವಿಧ ರೀತಿಯ ಕಿರುಕುಳ ನೀಡುತ್ತಿದ್ದಾರೆ.
ಇದರಿಂದ ಸಾಲ ಪಡೆದ ಪಾಲಕರು ಆತಂಕಕ್ಕೊಳಗಾಗಿದ್ದಾರೆ ಎಂದು ನಿಯೋಗ ವಿವರಿಸಿತು. ಈ ಕುರಿತು ಅನೇಕ ಬಾರಿ ಕೇಂದ್ರ ಸಚಿವರು, ಸಂಸದರಿಗೆ ಮನವಿ ಮಾಡಲಾಗಿದ್ದು, ಕೇವಲ ಭರವಸೆ ಮಾತ್ರ ನೀಡಲಾಗುತ್ತಿದೆ. ವೇದಿಕೆಯು
ಕಳೆದ ನಾಲ್ಕು ವರ್ಷದಿಂದ ಸತತ ಪ್ರಯತ್ನ ಮಾಡುತ್ತಿದೆ ಎಂದು ವೇದಿಕೆ ಅಧ್ಯಕ್ಷ ಎಂ.ಬಿ.ಅಂಬಲಗಿ ಮನವಿ ಮಾಡಿದರು.
ಈರೇಶ ಯಲ್ಲೂರ ಸಿಂಧನೂರ, ಸಂಗಣ್ಣ ಈಜೇರಿ, ವೀರಣ್ಣ ಭಂಡಾರಿ, ಮಹೇಶ್ವರ ಸ್ವಾಮಿ ಬಳ್ಳಾರಿ, ಬಸವರಾಜ
ರಾಜಾಪುರ, ವಿಜಯಕುಮಾರ ಬೀದರ, ನವೀನ ಪಾಟೀಲ ಹರಪನಳ್ಳಿ, ದಾಲರೆಡ್ಡಿ ಬೀದರ, ಸೂರ್ಯಕಾಂತ
ಜೀವಣಗಿ ಹಾಗೂ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ