242 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ: ಜ್ಯೋತ್ಸ್ನಾ

ಜಿಲ್ಲೆಯಲ್ಲಿ 1,427 ವಾರ್ಡ್‌ಗಳು, 13.26ಲಕ್ಷ ಮತದಾರರು | ಪಾಲಿಕೆ, ಪುರಸಭೆ, ನಗರಸಭೆಗಳಿಗೆ ನೀತಿ ಸಂಹಿತೆ ಇಲ್ಲ

Team Udayavani, Dec 1, 2020, 2:47 PM IST

242 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ: ಜ್ಯೋತ್ಸ್ನಾ

ಕಲಬುರಗಿ: ರಾಜ್ಯಾದ್ಯಂತ ಗ್ರಾಮ ಪಂಚಾಯಿತಿಗಳಿಗೆ ಸೋಮವಾರ ಚುನಾವಣೆ ಘೋಷಣೆಯಾಗಿದ್ದು, ಜಿಲ್ಲೆಯಲ್ಲಿ 261 ಗ್ರಾಮ ಪಂಚಾಯಿತಿಗಳ ಪೈಕಿ 242 ಗ್ರಾಪಂಗಳಿಗೆ ನಡೆಯಲಿದೆ.

ರಾಜ್ಯ ಚುನಾವಣಾ ಆಯೋಗ ಆದೇಶ ಅನ್ವಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಈಗಾಗಲೇ ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಡಿ.31ರ ಸಂಜೆ 5 ಗಂಟೆವರೆಗೆಜಾರಿಯಲ್ಲಿ ಇರಲಿದೆ. ಈ ಚುನಾವಣೆ ನೀತಿ ಸಂಹಿತೆಯು ಪಟ್ಟಣ ಪಂಚಾಯತಿ, ಪುರಸಭೆ,ನಗರಸಭೆ, ನಗರ ಪಾಲಿಕೆ ಹಾಗೂ ಮಹಾನಗರ ಪಾಲಿಕೆ ಪ್ರದೇಶಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮತಪೆಟ್ಟಿಗೆ ಮೂಲಕ ಚುನಾವಣೆ ನಡೆಯಲಿದ್ದು, ಕೋವಿಡ್‌-19 ಕಾರಣ ಎರಡು ಹಂತದಲ್ಲಿ ನಡೆಸಲಾಗುತ್ತಿದೆ. ಮೊದಲನೇ ಹಂತದಲ್ಲಿ ಕಲಬುರಗಿ-28, ಆಳಂದ-36, ಅಫಜಲಪುರ-28, ಕಮಲಪುರ-16, ಕಾಳಗಿ-14 ಹಾಗೂ ಶಹಾಬಾದ ತಾಲೂಕಿನ 4 ಗ್ರಾಮ ಪಂಚಾಯಿತಿಗಳು ಸೇರಿದಂತೆ ಒಟ್ಟು 126 ಗ್ರಾಪಂಗಳಲ್ಲಿ ಚುನಾವಣೆ ನಡೆಯಲಿದೆ. ಎರಡನೇ ಹಂತದಲ್ಲಿ ಯಡ್ರಾಮಿ-15, ಜೇವರ್ಗಿ-23, ಚಿತ್ತಾಪುರ-24, ಚಿಂಚೋಳಿ-27 ಹಾಗೂ ಸೇಡಂ-27 ಸೇರಿ ಒಟ್ಟು 116 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ.  ಮೊದಲನೇ ಹಂತದ ಚುನಾವಣೆಗೆ ಡಿ.7 ಮತ್ತು ಎರಡನೇ ಹಂತದ ಚುನಾವಣೆಗೆ ಡಿ.11 ರಂದು ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ 242 ಗ್ರಾಮ ಪಂಚಾಯಿತಿಗಳ 1,427 ವಾರ್ಡ್‌ಗಳಲ್ಲಿ ಚುನಾವಣೆಗೆ ಜರುಗಲಿದೆ. 2020ರ ಆ.31ರ ಅರ್ಹ ಮತದಾರರ ಪಟ್ಟಿಯಂತೆ 6,76,421 ಪುರುಷರು, 6,49,872ಮಹಿಳೆಯರು ಹಾಗೂ 107 ಇತರ ಮತದಾರರು ಒಳಗೊಂಡಂತೆ ಒಟ್ಟು 13,26,400 ಮತದಾರರು ಮತ ಚಲಾಯಿಸಲು ಹಕ್ಕು ಹೊಂದಿದ್ದಾರೆ. ಮತದಾನ ಕಾರ್ಯಕ್ಕೆ 243 ರಿಟರ್ನಿಂಗ್‌ ಅಧಿಕಾರಿಗಳು, 243 ಸಹಾಯಕ ರಿಟರ್ನಿಂಗ್‌ ಅಧಿಕಾರಿಗಳು ಹಾಗೂ 52 ಹೆಚ್ಚುವರಿ ಅಧಿಕಾರಿಗಳನ್ನು ನೇಮಿಸಲಾಗಿದೆ. ಇದಲ್ಲದೆ ಪ್ರತಿ ತಾಲೂಕಿನ 1-2 ಗ್ರಾಮ ಪಂಚಾಯಿತಿಗಳಿಗೆ ಓರ್ವ ತಾಲೂಕು ಮಟ್ಟದ ಅಧಿಕಾರಿಯನ್ನು ನೋಡಲ್‌ ಅಧಿಕಾರಿಯನ್ನಾಗಿಸಿ ನೇಮಿಸಿ ಚುನಾವಣೆ ನೀತಿ ಸಂಹಿತೆ ಮೇಲೆ ನಿಗಾ ವಹಿಸಲು ಸೂಚಿಸಲಾಗುವುದು ಹಾಗೂ ಪ್ರತಿ ತಾಲೂಕಿಗೆ ಒಬ್ಬರಂತೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಸಹ ನೋಡಲ್‌ ಅಧಿಕಾರಿಗಳನ್ನಾಗಿ ನೇಮಿಸಲಾಗುತ್ತದೆ ಎಂದು ವಿವರಿಸಿದ್ದಾರೆ.

ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಎಲ್ಲ ರಾಜಕೀಯ ಪಕ್ಷಗಳು, ಸಾರ್ವಜನಿಕರು ಚುನಾವಣಾ ಆಯೋಗಕ್ಕೆ ಅಗತ್ಯ ಸಹಕಾರ ನೀಡಬೇಕು. ದೋಷರಹಿತ ಚುನಾವಣೆ ನಡೆಸಲು ಅಧಿಕಾರಿಗಳು ವರ್ಗ ತಮಗೆ ನೀಡಲಾದ ಜವಾಬ್ದಾರಿ ಚಾಚು ತಪ್ಪದೇ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

19 ಗ್ರಾಪಂ ಚುನಾವಣೆ ಇಲ್ಲ :  ಡಿ.22ರಂದು ಮೊದಲ ಹಂತದಲ್ಲಿ 6 ತಾಲೂಕುಗಳು ಹಾಗೂ ಡಿ.27ರಂದು ಎರಡನೇ ಹಂತದಲ್ಲಿ 5 ತಾಲೂಕುಗಳಲ್ಲಿ ಚುನಾವಣೆ ನಡೆಯಲಿದೆ. 261ಗ್ರಾಪಂ ಪೈಕಿ 242 ಗ್ರಾಪಂಗಳಿಗೆ ನಡೆಯಲಿದೆ. ನ್ಯಾಯಾಲಯದಲ್ಲಿ ಪ್ರಕರಣ ಬಾಕಿ, ಅವಧಿ ಮುಕ್ತಾಯವಾಗದ ಹಾಗೂ ಇನ್ನಿತರ ಕಾರಣದಿಂದ 19 ಗ್ರಾಪಂಗಳ ಚುನಾವಣೆ ನಡೆಸುತ್ತಿಲ್ಲ. ಒಟ್ಟಾರೆ 1,499 ಮೂಲ ಮತಗಟ್ಟೆ, 342 ಆಕ್ಸಲರಿ ಮತಗಟ್ಟೆ ಸೇರಿ ಒಟ್ಟು 1,841 ಮತಗಟ್ಟೆ ಸ್ಥಾಪಿಸಲಾಗುತ್ತದೆ. – ವಿ.ವಿ.ಜ್ಯೋತ್ಸ್ನಾ,ಜಿಲ್ಲಾಧಿಕಾರಿ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.