![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಬೇಡಿಕೆಗಾಗಿ ಆಗ್ರಹಿಸಿ ವಿದ್ಯುತ್ ಗುತ್ತಿಗೆ ನೌಕರರ ಪ್ರತಿಭಟನೆ
Team Udayavani, Feb 15, 2017, 3:05 PM IST
![gul5.jpg](https://www.udayavani.com/wp-content/uploads/2017/02/15/gul5.jpg)
ಕಲಬುರಗಿ: ವೇತನ ಬಾಕಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಜೆಸ್ಕಾಂ ಹಾಗೂ ಎಸ್ಕಾಂ ಗುತ್ತಿಗೆ ನೌಕರರ ಸಂಘದ ಕಾರ್ಯಕರ್ತರು ಗುಲಬರ್ಗಾ ವಿದ್ಯುತ್ ಪ್ರಸರಣಾ ನಿಗಮದ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜೆಸ್ಕಾಂ ಮುಖ್ಯ ಅಭಿಯಂತರರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರು, ಜೆಸ್ಕಾಂನಲ್ಲಿ ಕಲಬುರಗಿ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳ 33/11 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳ ನೂರಾರು ಹೊರ ಗುತ್ತಿಗೆ ನೌಕರರಿಗೆ ವೇತನ ಹೆಚ್ಚಳ ಮಾಡಿಲ್ಲ. ಕೂಡಲೇ ನೌಕರರ ಖಾತೆಗೆ ವೇತನ ಜಮೆ ಮಾಡಬೇಕು.
ಹೆಚ್ಚಳವಾದ ವೇತನದ ಬಾಕಿ ನೀಡಬೇಕು ಎಂದು ಒತ್ತಾಯಿಸಿದರು. ವೇತನ ಚೀಟಿ, ಭವಿಷ್ಯ ನಿಧಿ ಸಂದಾಯದ ಬಗ್ಗೆ ಮಾಹಿತಿ ನೀಡುತ್ತಿಲ್ಲ. ಕೂಡಲೇ ಮಾಹಿತಿ ನೀಡಬೇಕು. ರಜಾ ಸೌಲಭ್ಯ, ಸಮವಸ್ತ್ರ, ಶೂ, ಸುರಕ್ಷತಾ ಸಾಧನಗಳು, ನೇಮಕಾತಿ ಪತ್ರ ಮುಂತಾದ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದರು.
ವಿದ್ಯುತ್ ಗುತ್ತಿಗೆ ನೌಕರರ ವೇತನ ಕೂಡಲೇ ಹೆಚ್ಚಿಸಿ ರಿಟೆಂಡರ್ ಪ್ರಕ್ರಿಯೆ ಆರಂಭಿಸಬೇಕು. ಬಾಕಿಯಿರುವ ವೇತನ ಕೂಡಲೇ ಪಾವತಿಸಬೇಕು. ನಿಗದಿತ ವೇತನಕ್ಕಿಂತ ಕಡಿಮೆ ವೇತನ ನೀಡಿ ಅನ್ಯಾಯ ಮಾಡುವುದು ನಿಲ್ಲಿಸಬೇಕು. ನೌಕರರ ಬ್ಯಾಂಕ್ ಖಾತೆಗೆ ವೇತನ ಜಮಾ ಮಾಡಬೇಕು. ವಿದ್ಯುತ್ ಗುತ್ತಿಗೆ ನೌಕರರನ್ನು ಸೇವೆಯಿಂದ ವಜಾಗೊಳಿಸಬಾರದು.
ಗುತ್ತಿಗೆದಾರರು ಬದಲಾದರೂ ಅವರ ಸೇವೆ ಮುಂದುವರಿಸಬೇಕು. ವಿದ್ಯುತ್ ಗುತ್ತಿಗೆ ನೌಕರರಿಗೆ ಬೋನಸ್, ಇಎಸ್ಐ, ರಜೆ, ಪಿಎಫ್, ರಾತ್ರಿ ಪಾಳಿ ಭತ್ಯೆ ಸೇರಿದಂತೆ ಇತರ ಸೌಲಭ್ಯ ಖಚಿತಪಡಿಸಬೇಕು. ಎಜೆನ್ಸಿಯವರು ಕಾರ್ಮಿಕ ಕಾಯ್ದೆಯಂತೆ ಈಗ ಸೇವೆಯಲ್ಲಿರುವ ನೌಕರರಿಗೆ ನೇಮಕ ಪತ್ರ, ನಿಗದಿತ ವೇತನ, ಪಿಎಫ್, ಸಮವಸ್ತ್ರ ರಜೆ ಇತ್ಯಾದಿ ಒದಗಿಸಬೇಕು ಎಂದು ಒತ್ತಾಯಿಸಿದರು.
ಎಸ್.ಎಂ. ಶರ್ಮಾ, ವೀರೇಶ ಎನ್.ಎಸ್. ಹಾಗೂ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![13-sedam](https://www.udayavani.com/wp-content/uploads/2024/07/13-sedam-150x90.jpg)
Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ
![1-sci](https://www.udayavani.com/wp-content/uploads/2024/07/1-sci-150x91.jpg)
Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ
![ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು](https://www.udayavani.com/wp-content/uploads/2024/07/chikk1-150x83.jpg)
Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು
![Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ](https://www.udayavani.com/wp-content/uploads/2024/07/chittapura-1-150x84.jpg)
Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
![Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ](https://www.udayavani.com/wp-content/uploads/2024/07/chittapura-150x94.jpg)
Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.