ಇಂಗ್ಲಿಷ್‌ ಪ್ರಭಾವ ಹೆಚ್ಚಾಗಿ ಮರೆಯಾಗುತ್ತಿದೆ ಕನ್ನಡ


Team Udayavani, Mar 1, 2022, 10:55 AM IST

10kannada

ಜೇವರ್ಗಿ: ಇಂಗ್ಲಿಷ್‌ ಪ್ರಭಾವ ಹೆಚ್ಚಾಗಿ ಕನ್ನಡ ಮರೆಯಾಗುತ್ತಿದೆ. ಹೆಚ್ಚು ಕನ್ನಡ ಪದಗಳನ್ನೇ ಬಳಸಿ ಭಾಷೆ ಉಳಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಹಿರಿಯ ವಿದ್ವಾಂಸ, ಸಾಹಿತಿ ಗೋ.ರು. ಚನ್ನಬಸಪ್ಪ ಹೇಳಿದರು.

ಪಟ್ಟಣದ ಹಳೆಯ ತಹಶೀಲ್‌ ಕಚೇರಿ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಘಟಕದ ಕಾರ್ಯ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ವ್ಯಕ್ತಿ ಪ್ರತಿಷ್ಠೆಯಿಂದ ದೇಶ ಇಂದು ಅಲ್ಲೋಲ ಕಲ್ಲೋಲವಾಗಿದೆ. ಬರಹಗಾರ ತಮ್ಮ ಗಂಭೀರ ಚಿಂತನೆಗಳಿಂದ ಈ ಬಗ್ಗೆ ಜಾಗೃತಿ ಮೂಡಿಸಬೇಕು. ಸಾಹಿತಿ, ರಾಜಕಾರಣಿ ಹಾಗೂ ಸನ್ಯಾಸಿ ಎಂದಿಗೂ ಅಹಂಕಾರಿಯಾಗಬಾರದು. ಸಾಹಿತ್ಯ ಸಹಜವಾಗಿ ಮೂಡಿಬರಬೇಕು. ಪ್ರಾಚೀನ ಸಾಹಿತ್ಯದ ನಂತರ ನೂರಾರು ಸಾಹಿತ್ಯ ಪ್ರಕಾರಗಳು ಹರಿದು ಬಂದಿದ್ದರೂ ಪ್ರಾಚೀನ ಸಾಹಿತ್ಯ ಗಟ್ಟಿಯಾಗಿ ಉಳಿದಿದೆ. ನಮ್ಮ ಅಭಿರುಚಿ ಹಾಳಾಗಿದೆ. ವಿಕೃತ ಮತ್ತು ವಿಲಕ್ಷಣ ಅಭಿರುಚಿಗಳು ನಮ್ಮ ಯುವ ಜನರ ದಾರಿದೀಪಗಳಾಗಿರುವುದು ದುರ್ದೈವ. ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆಯುವ ಕಾರ್ಯಕ್ರಮಗಳು ಕೇವಲ ಶಿಕ್ಷಕರು, ಅಧಿಕಾರಿಗಳು ಹಾಗೂ ಮಕ್ಕಳಿಗೆ ಸೀಮಿತವಾಗಬಾರದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಜೇರಟಗಿ ವಿರಕ್ತಮಠದ ಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪುರಸಭೆ ಅಧ್ಯಕ್ಷೆ ಶರಣಮ್ಮ ಸಾಯಬಣ್ಣ ತಳವಾರ, ಯಡ್ರಾಮಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಲವಂತರಾಯ ಬಿರಾದಾರ, ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಶಿವನಗೌಡ ಪಾಟೀಲ ಹಂಗರಗಾ, ಕನ್ನಡ ಸಾಹಿತ್ಯ ಪರಿಷತ್ತು ಯಡ್ರಾಮಿ ತಾಲೂಕು ಘಟಕದ ಅಧ್ಯಕ್ಷ ನಾಗಪ್ಪ ಸಜ್ಜನ್‌ ಭಾಗವಹಿಸಿದ್ದರು. ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಅಧ್ಯಕ್ಷ ಎಸ್‌.ಕೆ.ಬಿರಾದಾರ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಜ್ಞಾನಜ್ಯೋತಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ನಾಡಗೀತೆ ನೃತ್ಯ, ಶ್ರೀ ಮಹಾಲಕ್ಷ್ಮೀ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಿಂದ ಜಾನಪದ ನೃತ್ಯ, ಬಸಯ್ಯಸ್ವಾಮಿ ಹಿರೇಮಠ ಕಾಸರಭೋಸಗಾ ಜಾನಪದ ಹಾಡುಗಳನ್ನು ಹಾಡಿದರು. ಶರಣಮ್ಮ ಸುಂಬಡ ಸಿದ್ದಮ್ಮ ಚನ್ನೂರ ಹಾಗೂ ಸಂಗಡಿಗರು ಶೋಭಾನ ಹಾಡು ಹಾಡಿದರು. ಚಂದಾಸಾಬ್‌ ಜಲಾಲಸಾಬ್‌ ಚನ್ನೂರ ಭಜನೆ ಪದಗಳು, ಶಂಕರ ಹಾಗೂ ಸಂಗಡಿಗರು ಡೊಳ್ಳಿನ ಪದಗಳನ್ನು ಹಾಡಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೆ„ದ ಸಾಧಕರನ್ನು ಸನ್ಮಾನಿಸಲಾಯಿತು.

ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಪ್ರೊ.ಯಶವಂತ ರಾಯ ಅಷ್ಠಗಿ, ಶಿವರಾಜ ಅಂಡಗಿ, ವಿನೋದಕುಮಾರ ಜನವರಿ, ಚನ್ನಮಲ್ಲಯ್ಯಸ್ವಾಮಿ ಹಿರೇಮಠ, ಕಲ್ಯಾಣಕುಮಾರ ಸಂಗಾವಿ, ಸೋಮಶೇಖರಗೌಡ ಪಾಟೀಲ ಗುಡೂರ, ಚಂದ್ರಶೇಖರ ಸೀರಿ, ಶಿವಾನಂದ ಘಂಟಿಮಠ, ಪುಂಡಲೀಕ ಗಾಯಕವಾಡ, ಶಶಿ ಮಹೇಂದ್ರಕರ್‌, ನೀಲಕಂಠರಾಯಗೌಡ ಮಾಲಿಪಾಟೀಲ, ಸಂಗಯ್ಯ ಗುತ್ತೇದಾರ, ಉಮಾಕಾಂತ ಗೋಲಗೇರಿ, ಶ್ರೀಹರಿ ಕರಕಿಹಳ್ಳಿ, ಎಸ್‌.ಎ,ಪಡಶೆಟ್ಟಿ, ಸುನಂದಾ ಕಲ್ಲಾ, ಜಗನ್ನಾಥ ಇಮ್ಮಣ್ಣಿ, ಮಹಾಂತೇಶ ಪಾಟೀಲ, ಪರಮೇಶ್ವರ ಬಿರಾಳ, ಕಾಶಿನಾಥ ಸಾಹು ಮಂದೇವಾಲ, ಬಸವರಾಜ ಬಾಗೇವಾಡಿ, ವೆಂಕಟರಾವ ಮುಜುಮದಾರ, ಸಂಗಮೇಶ ಸಂಕಾಲಿ, ಎಸ್‌.ಟಿ.ಬಿರಾದಾರ, ಡಾ|ಹಣಮಂತ್ರಾವ ರಾಂಪೂರೆ, ಶರಣಗೌಡ ಜೈನಾಪೂರ, ಬಸವರಾಜ ತಿಳಗೂಳ, ಭೀಮಯ್ಯ ಗುತ್ತೇದಾರ, ಮೌನಪ್ಪ ವಿಶ್ವಕರ್ಮ, ಭೀಮರಾವ ಭಜಂತ್ರಿ ಸೇರಿದಂತೆ ಹಲವಾರು ಜನ ಭಾಗವಹಿಸಿದ್ದರು. ಶಿಕ್ಷಕಿ ಸುನಂದಾ ಕಲ್ಲಾ ಸ್ವಾಗತಿಸಿದರು. ಡಾ|ಧರ್ಮಣ್ಣ ಬಡಿಗೇರ ನಿರೂಪಿಸಿದರು. ಬಸವರಾಜ ಬಾಗೇವಾಡಿ ವಂದಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.