ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿ
Team Udayavani, Jan 29, 2019, 7:20 AM IST
ಕಲಬುರಗಿ: ಮುಂದಿನ ಶೈಕ್ಷಣಿಕ ವರ್ಷದಿಂದ ಒಂದು ಸಾವಿರ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮ ಜಾರಿಗೊಳಿಸುವ ರಾಜ್ಯ ಸರ್ಕಾರ ನಿರ್ಧಾರ ಉತ್ತಮವಾಗಿದ್ದು, ಇದರಿಂದ ಬಡವರು, ಹಿಂದುಳಿದ ಭಾಗಗಳ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾಗತೀಕರಣಕ್ಕೆ ಎಲ್ಲರೂ ಒಗ್ಗಿಕೊಂಡಿದ್ದು, ಎಲ್ಲ ಕ್ಷೇತ್ರಗಳಲ್ಲಿ ಇಂಗ್ಲಿಷ್ ಕೌಶಲ್ಯದ ಬೇಡಿಕೆ ಇದೆ. ಈಗಾಗಲೇ ರಾಜ್ಯದ ಅರ್ಧ ಭಾಗಕ್ಕಿಂತ ಹೆಚ್ಚು ಮಕ್ಕಳು ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಯುತ್ತಿದ್ದಾರೆ. ಆರ್ಥಿಕವಾಗಿ ಹಿಂದುಳಿದವರು ಮಕ್ಕಳು ಹಾಗೂ ಪ್ರಾದೇಶಿಕವಾಗಿ ಹಿಂದುಳಿದ ಹೈದ್ರಾಬಾದ ಕರ್ನಾಟಕ, ಹಳೆ ಮೈಸೂರು ಭಾಗದ ಮಕ್ಕಳು ಕನ್ನಡ ಶಾಲೆಗಳಲ್ಲಿ ಕಲಿಯುತ್ತಿದ್ದಾರೆ. ಇದು ಶೈಕ್ಷಣಿಕ ಅಸಮತೋಲನಕ್ಕೆ ಕಾರಣವಾಗಿದೆ ಎಂದರು.
ಶೈಕ್ಷಣಿಕ ಅಸಮತೋಲನೆ ನಿವಾರಿಸಲು ಸರ್ಕಾರಿ ಶಾಲೆಗಳಲ್ಲಿ ಕನ್ನಡ ಉಳಿಸಿಕೊಂಡು ಇಂಗ್ಲಿಷ್ ಕಲಿಸುವುದು ಅನಿರ್ವಾಯ ಮತ್ತು ಅಗತ್ಯವಾಗಿದೆ. ಆದರೆ, ಸರ್ಕಾರದ ನಿರ್ಧಾರದ ವಿರುದ್ಧ ಧಾರವಾಡ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿಗಳು ನಿರ್ಣಯ ತೆಗೆದುಕೊಂಡಿರುವುದು ಸೂಕ್ತವಲ್ಲ. ಈ ಬಗ್ಗೆ ಸಾಹಿತಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.
ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಕುಸಿದಿದೆ ಎಂದು ಶಾಲೆಗಳ ವಿಲೀನ ಹಾಗೂ ಮುಚ್ಚುವಿಕೆ ನಡೆಯುತ್ತಿದೆ. ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕುತ್ತು ಬಂದಿದೆ. ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸುವುದರಿಂದ ಮಕ್ಕಳನ್ನು ಸೆಳೆಯಬಹುದಾಗಿದೆ. ಈಗಾಗಲೇ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಓಡಿಶಾ ಹಾಗೂ ಮಹಾರಾಷ್ಟ್ರದಲ್ಲಿ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಜಾರಿಯಲ್ಲಿದೆ. ನೆರೆ-ಹೊರೆ ರಾಜ್ಯಗಳಲ್ಲಿ ಅಧ್ಯಯನ ಮಾಡಿ ರಾಜ್ಯದಲ್ಲೂ ಇಂಗ್ಲಿಷ್ ಮಾಧ್ಯಮ ಆರಂಭಿಸಬೇಕು. ಮೊದಲ ಹಂತವಾಗಿ ಹೋಬಳಿಗೊಂದು ಶಾಲೆ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.
ಈಗ ಕಲಿಸುತ್ತಿರುವ ಇಂಗ್ಲಿಷ್ ಭಾಷಾ ಕಲಿಕಾ ಮಟ್ಟವನ್ನು ಇನ್ನಷ್ಟು ಕ್ರಮಬದ್ಧಗೊಳಿಸಿ ಉತ್ತಮ ಮಾಡಬೇಕು. ಕನ್ನಡ ಹಾಗೂ ಇಂಗ್ಲಿಷ್ ಸಮರ್ಥವಾಗಿ ಬೋಧಿಸಬಲ್ಲ ಶಿಕ್ಷಕರಿಗೆ ತರಬೇತಿಗೆ ಪ್ರತಿ ವರ್ಷ ಹೆಚ್ಚಿನ ಅವಧಿ ಮೀಸಲಿಡಬೇಕು. ಆರ್ಟಿಇ ಕಾಯ್ದೆದಡಿ 1.5 ಲಕ್ಷ ಮಕ್ಕಳು ಖಾಸಗಿ ಶಾಲೆಗಳಿಗೆ ಪ್ರವೇಶ ಪಡೆಯುತ್ತಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಗೆ ವಾರ್ಷಿಕ 11 ಸಾವಿರಕ್ಕೂ ಅಧಿಕ ಅನುದಾನ ನೀಡಲಾಗುತ್ತಿದೆ. ಇದಕ್ಕೆ ಸಮನಾದ ಅನುದಾನವನ್ನು ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಬಳಕೆ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ಭಾಷಾ ಮಾಧ್ಯಮ ಕುರಿತಂತೆ ಫೆಬ್ರವರಿಯಲ್ಲಿ ರಾಜ್ಯ ಮಟ್ಟದ ವಿಚಾರ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಕಾರಳ್ಳಿ ಶ್ರೀನಿವಾಸ, ಅರ್ಜುನ ಗೊಬ್ಬೂರು, ಜೇತೇಂದ್ರ ಕಾಂಬಳೆ, ಶ್ರೀನಿವಾಸ ಖೇಳಗಿ, ವಿಜಯಕುಮಾರ ಅಂಕಲಗಿ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ